<p><strong>ತರೀಕೆರೆ:</strong> ಅಮೃತಾಪುರ ಹೋಬಳಿಯ ಹಾದೀಕೆರೆ ಗ್ರಾಮದ ಸರ್ವೆ ನಂ. 187ರ ಜಮೀನಿನಲ್ಲಿ ಉಳುಮೆ ಮಾಡಿಕೊಂಡಿರುವ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ, ದಲಿತ ಸಂಘರ್ಷ ಸಮಿತಿಯಿಂದ ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಸ್ಥಳಕ್ಕೆ ಬಂದ ತಹಶೀಲ್ದಾರ್ ಎಚ್.ಜೆ. ರಶ್ಮಿ ಅವರು, ‘ವಾರದಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿಸಿ, ರೈತರ ಸಮಸ್ಯೆಯನ್ನು ಪರಿಹರಿಸಲಾಗುವುದು’ ಎಂದರು.</p>.<p>ಸಮಿತಿಯ ತಾಲ್ಲೂಕು ಸಂಚಾಲಕ ವಸಂತಕುಮಾರ್ ಮಾತನಾಡಿ, ‘ಜೀವನಕ್ಕೆ ಆಧಾರವಾಗಿರುವ ಭೂಮಿ ಕಿತ್ತುಕೊಂಡರೆ ಜೀವನ ನಿರ್ವಹಣೆ ಕಷ್ಟ. ತಹಶೀಲ್ದಾರ್ ಅವರ ಭರವಸೆಯಂತೆ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆಯಲಾಗಿದೆ. ಶೀಘ್ರದಲ್ಲೇ ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ದಿನಗಳಲ್ಲಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗಪ್ಪ, ತಾಲ್ಲೂಕು ಸಂಘಟನಾ ಸಂಚಾಲಕ ಮಂಜುನಾಥ್, ರೈತ ಮುಖಂಡ ಕೃಷ್ಣಪ್ಪ, ಹಾಗೂ ರೈತ ಕುಟುಂಬದವರು ಪ್ರತಿಭಟನೆಯಲ್ಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-126-1676530408</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ:</strong> ಅಮೃತಾಪುರ ಹೋಬಳಿಯ ಹಾದೀಕೆರೆ ಗ್ರಾಮದ ಸರ್ವೆ ನಂ. 187ರ ಜಮೀನಿನಲ್ಲಿ ಉಳುಮೆ ಮಾಡಿಕೊಂಡಿರುವ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ, ದಲಿತ ಸಂಘರ್ಷ ಸಮಿತಿಯಿಂದ ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಸ್ಥಳಕ್ಕೆ ಬಂದ ತಹಶೀಲ್ದಾರ್ ಎಚ್.ಜೆ. ರಶ್ಮಿ ಅವರು, ‘ವಾರದಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿಸಿ, ರೈತರ ಸಮಸ್ಯೆಯನ್ನು ಪರಿಹರಿಸಲಾಗುವುದು’ ಎಂದರು.</p>.<p>ಸಮಿತಿಯ ತಾಲ್ಲೂಕು ಸಂಚಾಲಕ ವಸಂತಕುಮಾರ್ ಮಾತನಾಡಿ, ‘ಜೀವನಕ್ಕೆ ಆಧಾರವಾಗಿರುವ ಭೂಮಿ ಕಿತ್ತುಕೊಂಡರೆ ಜೀವನ ನಿರ್ವಹಣೆ ಕಷ್ಟ. ತಹಶೀಲ್ದಾರ್ ಅವರ ಭರವಸೆಯಂತೆ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆಯಲಾಗಿದೆ. ಶೀಘ್ರದಲ್ಲೇ ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ದಿನಗಳಲ್ಲಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗಪ್ಪ, ತಾಲ್ಲೂಕು ಸಂಘಟನಾ ಸಂಚಾಲಕ ಮಂಜುನಾಥ್, ರೈತ ಮುಖಂಡ ಕೃಷ್ಣಪ್ಪ, ಹಾಗೂ ರೈತ ಕುಟುಂಬದವರು ಪ್ರತಿಭಟನೆಯಲ್ಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-126-1676530408</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>