<p><strong>ತರೀಕೆರೆ</strong>: ‘ಪೋಷಕರು ಮಕ್ಕಳಿಗೆ ಹಿಂದೂ ಧರ್ಮದ ಸಂಸ್ಕಾರ ಕಲಿಸುವಲ್ಲಿ ಹಿನ್ನಡೆಯಾಗಿದ್ದು, ಇದರಿಂದ ನಮ್ಮಲ್ಲಿ ಒಗ್ಗಟ್ಟಿನ ಕೊರತೆ ಆಗಿದೆ. ಈ ಕಾರಣದಿಂದ ಅನ್ಯರ ದಾಳಿಗೆ ತುತ್ತಾಗುತ್ತಿದ್ದೇವೆ’ ಎಂದು ತಾಲ್ಲೂಕಿನ ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯ ಸ್ವಾಮಿ ಹೇಳಿದರು.</p>.<p>ಪಟ್ಟಣದ ಬಯಲು ರಂಗ ಮಂದಿರದಲ್ಲಿ ಹಿಂದೂ ಸಮಾಜೋತ್ಸವದ ಆಯೋಜನಾ ಸಮಿತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವದ ಸಭಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ನಾವು ಯಾವ ದಿಕ್ಕಿನಲ್ಲಿ ಹೋಗುತ್ತಿದ್ದೇವೆ. ನಮ್ಮ ಮಕ್ಕಳನ್ನು ಕತ್ತಲಿನಿಂದ ಬೆಳಕಿನೆಡೆಗೆ ಸಾಗಬೇಕು. ಇಂದು ನಾವು ಶಾಂತ ಚಿತ್ತರಾಗಿದ್ದರೆ ಸಾಧನೆ ಮಾಡಲು ಸಾಧ್ಯವಿಲ್ಲ. ನಮ್ಮ ಮಕ್ಕಳನ್ನು ಛತ್ರಪತಿ ಶಿವಾಜಿ ಮತ್ತು ಸ್ವಾಮಿ ವಿವೇಕಾನಂದರಂತಾಗಿ ಮಾಡಬೇಕು ಎಂದರು.</p>.<p>ಭಾರತೀಯರನ್ನು ಶಿಕ್ಷಣ ಮತ್ತು ಸಂಸ್ಕಾರವನ್ನು ಹಾಳುಮಾಡಿದರೆ, ಅವರನ್ನು ನಾವು ಆಳಬಹುದು ಎಂದು ಹಿಂದೂಗಳನ್ನು ತುಂಡು-ತುಂಡಾಗಿ ಮಾಡುತ್ತಿದ್ದಾರೆ. ಪ್ರಕೃತಿಯನ್ನು ಪೂಜಿಸುವುದು ನಮ್ಮ ಸಂಸ್ಕೃತಿಯಾಗಿದೆ. ನಮ್ಮ ಬದುಕು ಮತ್ತು ನೆಲವನ್ನು ಉಳಿಸಿಕೊಳ್ಳಲು ಎಲ್ಲರೂ ಒಗ್ಗಟ್ಟಾಗಿರಬೇಕು ಎಂದರು.</p>.<p>ದಿಕ್ಸೂಚಿ ಭಾಷಣವನ್ನು ಮಾಡಿದ ವಿಕಾಸ್ ಪುತ್ತೂರು ಮಾತನಾಡಿ, ಆರ್ಎಸ್ಎಸ್ ಸ್ಥಾಪನೆಯಾಗಿ ನೂರು ವರ್ಷದ ತುಂಬಿದ ಶತಮಾತೋತ್ಸವದ ಅಂಗವಾಗಿ ವರ್ಷವಿಡೀ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಘ ಸ್ಥಾಪನೆಯಾದಾಗಿನಿಂದ ಹಲವು ತೊಂದರೆಗಳನ್ನು ಎದುರಿಸಿಕೊಂಡು ಬಂದಿದೆ. ತೊಂದರೆಗಳಿದ್ದರೂ ನಮ್ಮ ಗುರಿಯೆಡೆಗೆ ಸಾಗುತ್ತಲೇ ಬರುತ್ತಿದೆ ಎಂದರು.</p>.<p>ವಿವಿಧ ಸಂಘಗಳ ಅಡಿಯಲ್ಲಿ ವಿದ್ಯಾರ್ಥಿಗಳು, ರೈತರು, ಮಹಿಳೆಯರ ಮತ್ತು ಹಿಂದೂಗಳ ಪರ ಹೋರಾಟವನ್ನು ನಮ್ಮ ಸಂಘದ ಕೆಲಸ ಮಾಡುತ್ತಿದೆ. ರಾಷ್ಟ್ರ ನಿರ್ಮಾಣ ನಮ್ಮ ಗುರಿ. ಹಿಂದುತ್ವ ಪ್ರೇರಣಾ ಶಕ್ತಿ. ಹಿಂದೂ ಧರ್ಮದ ಉಳಿವಿಗೆ ನಾವೆಲ್ಲರೂ ಒಗ್ಗೂಡಬೇಕು ಎಂದರು.</p>.<p>ಸಮಾಜವನ್ನು ಜಾಗೃತಿಗೊಳಿಸುವ ಉದ್ದೇಶದಿಂದ ಸಂಘ ಸಾಮಾಜಿಕ ಸಾಮರಸ್ಯ, ಸ್ವದೇಶಿ ಚಿಂತನೆ, ಕುಟುಂಬ ವ್ಯವಸ್ಥೆ, ಪ್ರಕೃತಿ ಆರಾಧನೆ ಮತ್ತು ನಾಗರಿಕ ಶಿಷ್ಟಾಚಾರ ಎಂಬ ಐದು ಸೂತ್ರವನ್ನು ರೂಪಿಸಿದೆ ಎಂದರು.</p>.<p>ನಿಶಾ ಭಾರತ್ ಸಂಚಾಲಕಿ ಅಶ್ವಿನಿ ನಟರಾಜ್ ಮಾತನಾಡಿ, ನೂರು ವರ್ಷಗಳ ನಂತರ ನಮ್ಮ ಭಾರತ ವಿಶ್ವಗುರುವಾಗಿದೆ. ಈ ನೆಲದ ತಾಯಿ ಸಂಸ್ಕೃತಿ, ಸಂಸ್ಕಾರ ಉಳಿಸಿದ್ದಾರೆ. ಜಾನ್ಸಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮರಂತಹ ಹಲವರು ಸೇರಿದಂತೆ ಇತ್ತೀಚೆಗೆ ನಡೆದ ಆಪರೇಷನ್ ಸಿಂಧೂರದಲ್ಲಿ ನಮ್ಮ ಮಹಿಳೆಯರು ದೇಶ ರಕ್ಷಣೆಯಲ್ಲಿ ಮುಂದಾಗಿದ್ದಾರೆ ಎಂದರು.</p>.<p>ಪುರಸಭೆ ಸದಸ್ಯ ಟಿ.ಎಂ.ಭೋಜರಾಜ್ ಸ್ವಾಗತಿಸಿ, ಜ್ಞಾನದೇಗುಲ ವಿದ್ಯಾರ್ಥಿಗಳಿಂದ ವಚನ ಗಾಯನ ಮಾಡಿದರು.</p>.<p>ಸಮಾವೇಶಕ್ಕೂ ಮೊದಲು ಪಟ್ಟಣದ ಕೋಡಿಕ್ಯಾಂಪ್ ಓಂ ವೃತ್ತದಿಂದ ಬಯಲು ರಂಗಮಂದಿರದ ವರೆಗೆ ವಿವಿಧ ಕಲಾತಂಡಗಳೊಂದಿಗೆ ಶೋಭಾಯಾತ್ರೆ ನಡೆಸಲಾಯಿತು.</p>.<p>ಮಾಜಿ ಶಾಸಕ ಡಿ.ಎಸ್.ಸುರೇಶ್, ಕೆ.ಆರ್.ಆನಂದಪ್ಪ, ಸೇರಿದಂತೆ ಸಂಘ ಪರಿವಾರದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ</strong>: ‘ಪೋಷಕರು ಮಕ್ಕಳಿಗೆ ಹಿಂದೂ ಧರ್ಮದ ಸಂಸ್ಕಾರ ಕಲಿಸುವಲ್ಲಿ ಹಿನ್ನಡೆಯಾಗಿದ್ದು, ಇದರಿಂದ ನಮ್ಮಲ್ಲಿ ಒಗ್ಗಟ್ಟಿನ ಕೊರತೆ ಆಗಿದೆ. ಈ ಕಾರಣದಿಂದ ಅನ್ಯರ ದಾಳಿಗೆ ತುತ್ತಾಗುತ್ತಿದ್ದೇವೆ’ ಎಂದು ತಾಲ್ಲೂಕಿನ ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯ ಸ್ವಾಮಿ ಹೇಳಿದರು.</p>.<p>ಪಟ್ಟಣದ ಬಯಲು ರಂಗ ಮಂದಿರದಲ್ಲಿ ಹಿಂದೂ ಸಮಾಜೋತ್ಸವದ ಆಯೋಜನಾ ಸಮಿತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವದ ಸಭಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ನಾವು ಯಾವ ದಿಕ್ಕಿನಲ್ಲಿ ಹೋಗುತ್ತಿದ್ದೇವೆ. ನಮ್ಮ ಮಕ್ಕಳನ್ನು ಕತ್ತಲಿನಿಂದ ಬೆಳಕಿನೆಡೆಗೆ ಸಾಗಬೇಕು. ಇಂದು ನಾವು ಶಾಂತ ಚಿತ್ತರಾಗಿದ್ದರೆ ಸಾಧನೆ ಮಾಡಲು ಸಾಧ್ಯವಿಲ್ಲ. ನಮ್ಮ ಮಕ್ಕಳನ್ನು ಛತ್ರಪತಿ ಶಿವಾಜಿ ಮತ್ತು ಸ್ವಾಮಿ ವಿವೇಕಾನಂದರಂತಾಗಿ ಮಾಡಬೇಕು ಎಂದರು.</p>.<p>ಭಾರತೀಯರನ್ನು ಶಿಕ್ಷಣ ಮತ್ತು ಸಂಸ್ಕಾರವನ್ನು ಹಾಳುಮಾಡಿದರೆ, ಅವರನ್ನು ನಾವು ಆಳಬಹುದು ಎಂದು ಹಿಂದೂಗಳನ್ನು ತುಂಡು-ತುಂಡಾಗಿ ಮಾಡುತ್ತಿದ್ದಾರೆ. ಪ್ರಕೃತಿಯನ್ನು ಪೂಜಿಸುವುದು ನಮ್ಮ ಸಂಸ್ಕೃತಿಯಾಗಿದೆ. ನಮ್ಮ ಬದುಕು ಮತ್ತು ನೆಲವನ್ನು ಉಳಿಸಿಕೊಳ್ಳಲು ಎಲ್ಲರೂ ಒಗ್ಗಟ್ಟಾಗಿರಬೇಕು ಎಂದರು.</p>.<p>ದಿಕ್ಸೂಚಿ ಭಾಷಣವನ್ನು ಮಾಡಿದ ವಿಕಾಸ್ ಪುತ್ತೂರು ಮಾತನಾಡಿ, ಆರ್ಎಸ್ಎಸ್ ಸ್ಥಾಪನೆಯಾಗಿ ನೂರು ವರ್ಷದ ತುಂಬಿದ ಶತಮಾತೋತ್ಸವದ ಅಂಗವಾಗಿ ವರ್ಷವಿಡೀ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಘ ಸ್ಥಾಪನೆಯಾದಾಗಿನಿಂದ ಹಲವು ತೊಂದರೆಗಳನ್ನು ಎದುರಿಸಿಕೊಂಡು ಬಂದಿದೆ. ತೊಂದರೆಗಳಿದ್ದರೂ ನಮ್ಮ ಗುರಿಯೆಡೆಗೆ ಸಾಗುತ್ತಲೇ ಬರುತ್ತಿದೆ ಎಂದರು.</p>.<p>ವಿವಿಧ ಸಂಘಗಳ ಅಡಿಯಲ್ಲಿ ವಿದ್ಯಾರ್ಥಿಗಳು, ರೈತರು, ಮಹಿಳೆಯರ ಮತ್ತು ಹಿಂದೂಗಳ ಪರ ಹೋರಾಟವನ್ನು ನಮ್ಮ ಸಂಘದ ಕೆಲಸ ಮಾಡುತ್ತಿದೆ. ರಾಷ್ಟ್ರ ನಿರ್ಮಾಣ ನಮ್ಮ ಗುರಿ. ಹಿಂದುತ್ವ ಪ್ರೇರಣಾ ಶಕ್ತಿ. ಹಿಂದೂ ಧರ್ಮದ ಉಳಿವಿಗೆ ನಾವೆಲ್ಲರೂ ಒಗ್ಗೂಡಬೇಕು ಎಂದರು.</p>.<p>ಸಮಾಜವನ್ನು ಜಾಗೃತಿಗೊಳಿಸುವ ಉದ್ದೇಶದಿಂದ ಸಂಘ ಸಾಮಾಜಿಕ ಸಾಮರಸ್ಯ, ಸ್ವದೇಶಿ ಚಿಂತನೆ, ಕುಟುಂಬ ವ್ಯವಸ್ಥೆ, ಪ್ರಕೃತಿ ಆರಾಧನೆ ಮತ್ತು ನಾಗರಿಕ ಶಿಷ್ಟಾಚಾರ ಎಂಬ ಐದು ಸೂತ್ರವನ್ನು ರೂಪಿಸಿದೆ ಎಂದರು.</p>.<p>ನಿಶಾ ಭಾರತ್ ಸಂಚಾಲಕಿ ಅಶ್ವಿನಿ ನಟರಾಜ್ ಮಾತನಾಡಿ, ನೂರು ವರ್ಷಗಳ ನಂತರ ನಮ್ಮ ಭಾರತ ವಿಶ್ವಗುರುವಾಗಿದೆ. ಈ ನೆಲದ ತಾಯಿ ಸಂಸ್ಕೃತಿ, ಸಂಸ್ಕಾರ ಉಳಿಸಿದ್ದಾರೆ. ಜಾನ್ಸಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮರಂತಹ ಹಲವರು ಸೇರಿದಂತೆ ಇತ್ತೀಚೆಗೆ ನಡೆದ ಆಪರೇಷನ್ ಸಿಂಧೂರದಲ್ಲಿ ನಮ್ಮ ಮಹಿಳೆಯರು ದೇಶ ರಕ್ಷಣೆಯಲ್ಲಿ ಮುಂದಾಗಿದ್ದಾರೆ ಎಂದರು.</p>.<p>ಪುರಸಭೆ ಸದಸ್ಯ ಟಿ.ಎಂ.ಭೋಜರಾಜ್ ಸ್ವಾಗತಿಸಿ, ಜ್ಞಾನದೇಗುಲ ವಿದ್ಯಾರ್ಥಿಗಳಿಂದ ವಚನ ಗಾಯನ ಮಾಡಿದರು.</p>.<p>ಸಮಾವೇಶಕ್ಕೂ ಮೊದಲು ಪಟ್ಟಣದ ಕೋಡಿಕ್ಯಾಂಪ್ ಓಂ ವೃತ್ತದಿಂದ ಬಯಲು ರಂಗಮಂದಿರದ ವರೆಗೆ ವಿವಿಧ ಕಲಾತಂಡಗಳೊಂದಿಗೆ ಶೋಭಾಯಾತ್ರೆ ನಡೆಸಲಾಯಿತು.</p>.<p>ಮಾಜಿ ಶಾಸಕ ಡಿ.ಎಸ್.ಸುರೇಶ್, ಕೆ.ಆರ್.ಆನಂದಪ್ಪ, ಸೇರಿದಂತೆ ಸಂಘ ಪರಿವಾರದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>