ವಾರ್ಡ್ನಲ್ಲಿ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯಿಲ್ಲ. ರಸ್ತೆ ಬದಿಯ ಹೋಟೆಲ್, ಡಾಬಾಗಳ ಕೊಳಚೆ ನೀರು ರಾಜ ಕಾಲುವೆ ಸೇರಲೂ ಸಮರ್ಪಕ ಚರಂಡಿಯಿಲ್ಲ. ಕೊಳಚೆ ಚರಂಡಿಯಲ್ಲಿ ನಿಂತು ದುರ್ನಾತ ಬೀರುತ್ತದೆ. ನಾಗರಿಕರು ಮೂಗು ಮುಚ್ಚಿಕೊಂಡು ಸಂಚರಿಸಬೇಕಾಗಿದೆ. ಇಲ್ಲಿ ಸಾಂಕ್ರಾಮಿಕ ರೋಗದ ಭೀತಿಯೂ ಕಾಡತೊಡಗಿದೆ.