<p><strong>ತರೀಕೆರೆ:</strong> ಪಟ್ಟಣದ ಬಯಲು ರಂಗಮಂದಿರದಲ್ಲಿ ‘ಲಾರ್ವ ಸಮೀಕ್ಷಾ ಅಭಿಯಾನ’ಕ್ಕೆ ಉಪ ವಿಭಾಗಾಧಿಕಾರಿ ಡಾ.ಕೆ.ಜೆ. ಕಾಂತರಾಜ್ ಚಾಲನೆ ನೀಡಿದರು.</p>.<p>ತರೀಕೆರೆ ಮತ್ತು ಅಜ್ಜಂಪುರ ಪಟ್ಟಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕಂದಾಯ, ಆರೋಗ್ಯ ಇಲಾಖೆ, ಪುರಸಭೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ‘ಡೆಂಗಿ ನಿಯಂತ್ರಿಸಲು ಲಾರ್ವ ಸಮೀಕ್ಷಾ ಅಭಿಯಾನ’ವನ್ನು ಹಮ್ಮಕೊಳ್ಲಲಾಗಿತ್ತು.</p>.<p>ತಹಶೀಲ್ದಾರ್ ವಿ.ಎಸ್. ರಾಜೀವ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್ ಬಿ.ಜಿ, ಪುರಸಭಾ ಮುಖ್ಯಾಧಿಕಾರಿ ಪ್ರಶಾಂತ್, ಸಿಡಿಪಿಒ ಚರಣ್ ರಾಜ್, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ದೇವರಾಜ, ರೇಡಿಯಾಲಜಿಸ್ಟ್ ಡಾ. ನಾಗರಾಜ್ ಇದ್ದರು.</p>.<p>ತರೀಕೆರೆ ಪಟ್ಟಣದಲ್ಲಿ 8,010 ಮತ್ತು ಅಜ್ಜಂಪುರ ಪಟ್ಟಣದಲ್ಲಿ 3,115 ಮನೆಗಳಿಗೆ ಭೇಟಿ ನೀಡಲಾಯಿತು. ಎರಡು ಪಟ್ಟಣಗಳ 343 ಮನೆಗಳಲ್ಲಿ ಡೆಂಗಿ ಹರಡುವ ಈಡೀಸ್ ಸೊಳ್ಳೆಯ ಲಾರ್ವಗಳು ಕಂಡುಬಂದಿದ್ದು, ಲಾರ್ವ ಉತ್ಪತ್ತಿ ತಾಣಗಳನ್ನು ನಾಶಪಡಿಸಿ ಡೆಂಗಿ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ:</strong> ಪಟ್ಟಣದ ಬಯಲು ರಂಗಮಂದಿರದಲ್ಲಿ ‘ಲಾರ್ವ ಸಮೀಕ್ಷಾ ಅಭಿಯಾನ’ಕ್ಕೆ ಉಪ ವಿಭಾಗಾಧಿಕಾರಿ ಡಾ.ಕೆ.ಜೆ. ಕಾಂತರಾಜ್ ಚಾಲನೆ ನೀಡಿದರು.</p>.<p>ತರೀಕೆರೆ ಮತ್ತು ಅಜ್ಜಂಪುರ ಪಟ್ಟಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕಂದಾಯ, ಆರೋಗ್ಯ ಇಲಾಖೆ, ಪುರಸಭೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ‘ಡೆಂಗಿ ನಿಯಂತ್ರಿಸಲು ಲಾರ್ವ ಸಮೀಕ್ಷಾ ಅಭಿಯಾನ’ವನ್ನು ಹಮ್ಮಕೊಳ್ಲಲಾಗಿತ್ತು.</p>.<p>ತಹಶೀಲ್ದಾರ್ ವಿ.ಎಸ್. ರಾಜೀವ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್ ಬಿ.ಜಿ, ಪುರಸಭಾ ಮುಖ್ಯಾಧಿಕಾರಿ ಪ್ರಶಾಂತ್, ಸಿಡಿಪಿಒ ಚರಣ್ ರಾಜ್, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ದೇವರಾಜ, ರೇಡಿಯಾಲಜಿಸ್ಟ್ ಡಾ. ನಾಗರಾಜ್ ಇದ್ದರು.</p>.<p>ತರೀಕೆರೆ ಪಟ್ಟಣದಲ್ಲಿ 8,010 ಮತ್ತು ಅಜ್ಜಂಪುರ ಪಟ್ಟಣದಲ್ಲಿ 3,115 ಮನೆಗಳಿಗೆ ಭೇಟಿ ನೀಡಲಾಯಿತು. ಎರಡು ಪಟ್ಟಣಗಳ 343 ಮನೆಗಳಲ್ಲಿ ಡೆಂಗಿ ಹರಡುವ ಈಡೀಸ್ ಸೊಳ್ಳೆಯ ಲಾರ್ವಗಳು ಕಂಡುಬಂದಿದ್ದು, ಲಾರ್ವ ಉತ್ಪತ್ತಿ ತಾಣಗಳನ್ನು ನಾಶಪಡಿಸಿ ಡೆಂಗಿ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>