<p>ತರೀಕೆರೆ: ತರೀಕೆರೆ ವಕೀಲರ ಸಂಘದ ಕಚೇರಿಯಲ್ಲಿ ಮಂಗಳವಾರ ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಾಯಿತು.</p>.<p>ವಕೀಲ ಕೆ. ಲಿಂಗರಾಜು ಮಾತನಾಡಿ, ಅಂಬೇಡ್ಕರ್ ಅವರು ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದರು. ಎಲ್ಲಾ ವರ್ಗದ ಜನರು ವಿದ್ಯಾವಂತರಾಗಲು ಶ್ರಮಿಸಿದರು. ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.</p>.<p>ವಕೀಲ ಟಿ.ಆರ್. ಕೃಷ್ಣಮೂರ್ತಿ ಮಾತನಾಡಿ, ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದಿಂದ ಎಲ್ಲರಿಗೂ ಪ್ರಾತಿನಿಧ್ಯ ದೊರೆಯುವಂತೆ ಮಾಡಿದ ಮಹಾನ್ ವ್ಯಕ್ತಿ ಎಂದರು.</p>.<p>ವಕೀಲ ಕೆ.ಚಂದ್ರಪ್ಪ ಮಾತನಾಡಿ ದೇಶ, ವಿದೇಶಗಳಲ್ಲಿ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಂಬೇಡ್ಕರ್ ಕೇವಲ ದಲಿತರಿಗೆ ಮಾತ್ರವಲ್ಲದೆ ಎಲ್ಲಾ ವರ್ಗದವರಿಗೂ ನ್ಯಾಯ ದೊರಕಿಸಿದ್ದಾರೆ ಎಂದರು.</p>.<p>ಅಧ್ಯಕ್ಷ ಶಿವಶಂಕರನಾಯ್ಕ, ಉಪಾಧ್ಯಕ್ಷ ಎಸ್.ರಜನೀಶ್, ಕಾರ್ಯದರ್ಶಿ ಎ.ನವೀನ್, ವಕೀಲರಾದ ತೇಜಮೂರ್ತಿ, ಎಸ್.ಸುರೇಶ್ಚಂದ್ರ, ಬಿ.ಟಿ.ಕೆಂಚಪ್ಪ, ಟಿ.ಡಿ. ಆನಂದ್, ವಸಂತ ಹಾಜರಿದ್ದರು. ಸಂಘಟನಾ ಕಾರ್ಯದರ್ಶಿ ಅಮರನಾಥ್ ನಿರೂಪಿಸಿದರು. ವಕೀಲೆ ವೀಣಾ ಪ್ರಾರ್ಥಿಸಿದರು. ಶಿಕ್ಷಕ ಬಸವರಾಜ್ ನಾಯ್ಕ ಉಪನ್ಯಾಸ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-126-1525517652</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ತರೀಕೆರೆ ವಕೀಲರ ಸಂಘದ ಕಚೇರಿಯಲ್ಲಿ ಮಂಗಳವಾರ ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಾಯಿತು.</p>.<p>ವಕೀಲ ಕೆ. ಲಿಂಗರಾಜು ಮಾತನಾಡಿ, ಅಂಬೇಡ್ಕರ್ ಅವರು ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದರು. ಎಲ್ಲಾ ವರ್ಗದ ಜನರು ವಿದ್ಯಾವಂತರಾಗಲು ಶ್ರಮಿಸಿದರು. ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.</p>.<p>ವಕೀಲ ಟಿ.ಆರ್. ಕೃಷ್ಣಮೂರ್ತಿ ಮಾತನಾಡಿ, ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದಿಂದ ಎಲ್ಲರಿಗೂ ಪ್ರಾತಿನಿಧ್ಯ ದೊರೆಯುವಂತೆ ಮಾಡಿದ ಮಹಾನ್ ವ್ಯಕ್ತಿ ಎಂದರು.</p>.<p>ವಕೀಲ ಕೆ.ಚಂದ್ರಪ್ಪ ಮಾತನಾಡಿ ದೇಶ, ವಿದೇಶಗಳಲ್ಲಿ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಂಬೇಡ್ಕರ್ ಕೇವಲ ದಲಿತರಿಗೆ ಮಾತ್ರವಲ್ಲದೆ ಎಲ್ಲಾ ವರ್ಗದವರಿಗೂ ನ್ಯಾಯ ದೊರಕಿಸಿದ್ದಾರೆ ಎಂದರು.</p>.<p>ಅಧ್ಯಕ್ಷ ಶಿವಶಂಕರನಾಯ್ಕ, ಉಪಾಧ್ಯಕ್ಷ ಎಸ್.ರಜನೀಶ್, ಕಾರ್ಯದರ್ಶಿ ಎ.ನವೀನ್, ವಕೀಲರಾದ ತೇಜಮೂರ್ತಿ, ಎಸ್.ಸುರೇಶ್ಚಂದ್ರ, ಬಿ.ಟಿ.ಕೆಂಚಪ್ಪ, ಟಿ.ಡಿ. ಆನಂದ್, ವಸಂತ ಹಾಜರಿದ್ದರು. ಸಂಘಟನಾ ಕಾರ್ಯದರ್ಶಿ ಅಮರನಾಥ್ ನಿರೂಪಿಸಿದರು. ವಕೀಲೆ ವೀಣಾ ಪ್ರಾರ್ಥಿಸಿದರು. ಶಿಕ್ಷಕ ಬಸವರಾಜ್ ನಾಯ್ಕ ಉಪನ್ಯಾಸ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-126-1525517652</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>