<p><strong>ತರೀಕೆರೆ</strong>: ‘ತರೀಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಎಸ್ಆರ್ ಅನುದಾನದ ಮೂಲಕ ಆಮ್ಲಜನಕ ಘಟಕ ಕಾರ್ಯಾ ರಂಭ ಮಾಡಲಿದೆ. ಇದೇ ಆಸ್ಪತ್ರೆಯಲ್ಲಿ 25 ವೆಂಟಿಲೇಟರ್ ಹಾಸಿಗೆಗಳ ವ್ಯವಸ್ಥೆಯಾಗಲಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಅಜ್ಜಂಪುರ ಮತ್ತು ತರೀಕೆರೆ ತಾಲ್ಲೂಕು ಆಡಳಿತಗಳ ಸಹಭಾಗಿತ್ವದಲ್ಲಿ ನಡೆದ ಉಚಿತ ಆರೋಗ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅತಿಯಾದ ರಾಸಾಯನಿಕ ಬಳಕೆ ಮತ್ತು ಕಲುಷಿತವಾದ ನೀರು– ಗಾಳಿಯಿಂದ ಮನುಷ್ಯನ ಆರೋಗ್ಯ ಏರುಪೇರಾಗುತ್ತದೆ. ಆದ್ದರಿಂದ ಕಾಯಿಲೆ ಬರುವ ಮೊದಲೇ ಪರೀಕ್ಷಿಸಿ ಕೊಳ್ಳುವುದು ಉತ್ತಮ’ ಎಂದರು.</p>.<p>‘ಆರೋಗ್ಯ ಮೇಳದ ಉದ್ದೇಶ ಒಂದೇ ಸೂರಿನಡಿ ಎಲ್ಲಾ ತಜ್ಞ ವೈದ್ಯರ ಉಪಲಬ್ಧತೆಯಾಗಿದೆ. ಸಾರ್ವಜನಿಕರು ತಮ್ಮ ಆರೋಗ್ಯ ಸಮಸ್ಯೆಗಳನ್ನು ತಜ್ಞರ ಬಳಿ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆಯಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ’ ಎಂದರು.</p>.<p>ಶಾಸಕ ಡಿ.ಎಸ್.ಸುರೇಶ್ ಮಾತ ನಾಡಿ, ‘ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಡ ರೋಗಿಗಳು ಖಾಸಗಿ ಆಸ್ಪತ್ರೆಗೆ ತೆರಳಿ ತಪಾಸಣೆ, ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಯೋಜಿಸುತ್ತಿರುವ ಇಂತಹ ಆರೋಗ್ಯ ಮೇಳಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಕೋವಿಡ್ ಪತ್ತೆ ಮಾಡುವ ಸಂಬಂಧ ರಕ್ತ ಪರೀಕ್ಷಾ ಘಟಕವನ್ನು ತರೀಕೆರೆಯ ತಾಲ್ಲೂಕು ಆಸ್ಪತ್ರೆಯಲ್ಲಿ ಆರಂಭ ಮಾಡಲಾಗಿದೆ. ತಾಯಿ-ಮಗು ಆಸ್ಪತ್ರೆ ಘಟಕಕ್ಕೆ ಶೀಘ್ರವೇ ಭೂಮಿಪೂಜೆ ನಡೆಲಾಗುವುದು’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ‘ಇಂತಹ ಆರೋಗ್ಯ ಮೇಳಗಳು ತಾಲ್ಲೂಕು ಮಟ್ಟ ಮಾತ್ರವಲ್ಲದೇ ಹೋಬಳಿ ಮಟ್ಟದಲ್ಲೂ ನಡೆಯಬೇಕು. ಎಲ್ಲರೂ ಆರೋಗ್ಯ ಮೇಳದ ಉಪಯೋಗವನ್ನು ಪಡೆದು ಕೊಳ್ಳಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ಮಾತನಾಡಿ, ‘ಆರೋಗ್ಯ ಮೇಳದಲ್ಲಿ 39ಕ್ಕೂ ಹೆಚ್ಚು ಚಿಕಿತ್ಸಾ ಕೇಂದ್ರಗಳು, 50ಕ್ಕೂ ಹೆಚ್ಚು<br />ತಜ್ಞ ವೈದ್ಯರಿದ್ದಾರೆ. ಚಿಕಿತ್ಸೆ, ಔಷಧಗಳನ್ನು ಉಚಿತವಾಗಿ ವಿತರಿಸಲಾಗುವುದು. ಉಚಿತವಾಗಿ ಆರೋಗ್ಯ ಕಾರ್ಡ್ಗಳನ್ನು ನೀಡಲಾಗುವುದು. ಇದೆಲ್ಲದರ ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಉಪ ವಿಭಾಗಾಧಿಕಾರಿ ಸಿದ್ದಲಿಂಗ ರೆಡ್ಡಿ, ತರೀಕೆರೆ ತಹಶೀಲ್ದಾರ್ ಮಹೇಂದ್ರ, ಅಜ್ಜಂಪುರ ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ಇಒ ಗಣೇಶ್, ಸಿಡಿಪಿಒ ಜ್ಯೋತಿಲಕ್ಷ್ಮಿ, ಪುರಸಭಾಧ್ಯಕ್ಷ ರಂಗನಾಥ್, ಉಪಾಧ್ಯಕ್ಷೆ ಯಶೋದಮ್ಮ, ಮುಖ್ಯಾಧಿಕಾರಿ ಮಹಾಂತೇಶ್, ಸದಸ್ಯರು ಇದ್ದರು.</p>.<p>ಆರೋಗ್ಯ ಮೇಳದಲ್ಲಿ ಸುಮಾರು 4,000 ಮಂದಿ ಆರೋಗ್ಯ ತಪಾಸಣೆಗೆ ಒಳಗಾದರು. ರಕ್ತದಾನ ಶಿಬಿರದಲ್ಲೂ ರಕ್ತದಾನಕ್ಕೆ ಯುವಕರು ಹೆಚ್ಚಾಗಿ ಮುಂದೆ ಬರುತ್ತಿದ್ದುದು ಕಂಡುಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ</strong>: ‘ತರೀಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಎಸ್ಆರ್ ಅನುದಾನದ ಮೂಲಕ ಆಮ್ಲಜನಕ ಘಟಕ ಕಾರ್ಯಾ ರಂಭ ಮಾಡಲಿದೆ. ಇದೇ ಆಸ್ಪತ್ರೆಯಲ್ಲಿ 25 ವೆಂಟಿಲೇಟರ್ ಹಾಸಿಗೆಗಳ ವ್ಯವಸ್ಥೆಯಾಗಲಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಅಜ್ಜಂಪುರ ಮತ್ತು ತರೀಕೆರೆ ತಾಲ್ಲೂಕು ಆಡಳಿತಗಳ ಸಹಭಾಗಿತ್ವದಲ್ಲಿ ನಡೆದ ಉಚಿತ ಆರೋಗ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅತಿಯಾದ ರಾಸಾಯನಿಕ ಬಳಕೆ ಮತ್ತು ಕಲುಷಿತವಾದ ನೀರು– ಗಾಳಿಯಿಂದ ಮನುಷ್ಯನ ಆರೋಗ್ಯ ಏರುಪೇರಾಗುತ್ತದೆ. ಆದ್ದರಿಂದ ಕಾಯಿಲೆ ಬರುವ ಮೊದಲೇ ಪರೀಕ್ಷಿಸಿ ಕೊಳ್ಳುವುದು ಉತ್ತಮ’ ಎಂದರು.</p>.<p>‘ಆರೋಗ್ಯ ಮೇಳದ ಉದ್ದೇಶ ಒಂದೇ ಸೂರಿನಡಿ ಎಲ್ಲಾ ತಜ್ಞ ವೈದ್ಯರ ಉಪಲಬ್ಧತೆಯಾಗಿದೆ. ಸಾರ್ವಜನಿಕರು ತಮ್ಮ ಆರೋಗ್ಯ ಸಮಸ್ಯೆಗಳನ್ನು ತಜ್ಞರ ಬಳಿ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆಯಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ’ ಎಂದರು.</p>.<p>ಶಾಸಕ ಡಿ.ಎಸ್.ಸುರೇಶ್ ಮಾತ ನಾಡಿ, ‘ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಡ ರೋಗಿಗಳು ಖಾಸಗಿ ಆಸ್ಪತ್ರೆಗೆ ತೆರಳಿ ತಪಾಸಣೆ, ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಯೋಜಿಸುತ್ತಿರುವ ಇಂತಹ ಆರೋಗ್ಯ ಮೇಳಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಕೋವಿಡ್ ಪತ್ತೆ ಮಾಡುವ ಸಂಬಂಧ ರಕ್ತ ಪರೀಕ್ಷಾ ಘಟಕವನ್ನು ತರೀಕೆರೆಯ ತಾಲ್ಲೂಕು ಆಸ್ಪತ್ರೆಯಲ್ಲಿ ಆರಂಭ ಮಾಡಲಾಗಿದೆ. ತಾಯಿ-ಮಗು ಆಸ್ಪತ್ರೆ ಘಟಕಕ್ಕೆ ಶೀಘ್ರವೇ ಭೂಮಿಪೂಜೆ ನಡೆಲಾಗುವುದು’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ‘ಇಂತಹ ಆರೋಗ್ಯ ಮೇಳಗಳು ತಾಲ್ಲೂಕು ಮಟ್ಟ ಮಾತ್ರವಲ್ಲದೇ ಹೋಬಳಿ ಮಟ್ಟದಲ್ಲೂ ನಡೆಯಬೇಕು. ಎಲ್ಲರೂ ಆರೋಗ್ಯ ಮೇಳದ ಉಪಯೋಗವನ್ನು ಪಡೆದು ಕೊಳ್ಳಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ಮಾತನಾಡಿ, ‘ಆರೋಗ್ಯ ಮೇಳದಲ್ಲಿ 39ಕ್ಕೂ ಹೆಚ್ಚು ಚಿಕಿತ್ಸಾ ಕೇಂದ್ರಗಳು, 50ಕ್ಕೂ ಹೆಚ್ಚು<br />ತಜ್ಞ ವೈದ್ಯರಿದ್ದಾರೆ. ಚಿಕಿತ್ಸೆ, ಔಷಧಗಳನ್ನು ಉಚಿತವಾಗಿ ವಿತರಿಸಲಾಗುವುದು. ಉಚಿತವಾಗಿ ಆರೋಗ್ಯ ಕಾರ್ಡ್ಗಳನ್ನು ನೀಡಲಾಗುವುದು. ಇದೆಲ್ಲದರ ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಉಪ ವಿಭಾಗಾಧಿಕಾರಿ ಸಿದ್ದಲಿಂಗ ರೆಡ್ಡಿ, ತರೀಕೆರೆ ತಹಶೀಲ್ದಾರ್ ಮಹೇಂದ್ರ, ಅಜ್ಜಂಪುರ ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ಇಒ ಗಣೇಶ್, ಸಿಡಿಪಿಒ ಜ್ಯೋತಿಲಕ್ಷ್ಮಿ, ಪುರಸಭಾಧ್ಯಕ್ಷ ರಂಗನಾಥ್, ಉಪಾಧ್ಯಕ್ಷೆ ಯಶೋದಮ್ಮ, ಮುಖ್ಯಾಧಿಕಾರಿ ಮಹಾಂತೇಶ್, ಸದಸ್ಯರು ಇದ್ದರು.</p>.<p>ಆರೋಗ್ಯ ಮೇಳದಲ್ಲಿ ಸುಮಾರು 4,000 ಮಂದಿ ಆರೋಗ್ಯ ತಪಾಸಣೆಗೆ ಒಳಗಾದರು. ರಕ್ತದಾನ ಶಿಬಿರದಲ್ಲೂ ರಕ್ತದಾನಕ್ಕೆ ಯುವಕರು ಹೆಚ್ಚಾಗಿ ಮುಂದೆ ಬರುತ್ತಿದ್ದುದು ಕಂಡುಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>