<p>ತರೀಕೆರೆ: ‘ಪಟ್ಟಣದಲ್ಲಿ 2ನೇ ನಮ್ಮ ಕ್ಲಿನಿಕ್ ಆರಂಭವಾಗಿದೆ. ಇದರಿಂದ ಈ ಭಾಗದ ಜನರಿಗೆ ಸುಲಭವಾಗಿ ಆರೋಗ್ಯ ಸೌಲಭ್ಯಗಳು ಸಿಗುತ್ತಿವೆ’ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ವತಿಯಿಂದ ಪಟ್ಟಣದ ಎಂ.ಜಿ. ಹಾಲ್ನಲ್ಲಿ ನೂತನವಾಗಿ ಆರಂಭಿಸಿರುವ ನಮ್ಮ ಕ್ಲಿನಿಕ್ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಮ್ಮ ಕ್ಲಿನಿಕ್ನಲ್ಲಿ ಒಬ್ಬರು ತಜ್ಞ ವೈದ್ಯರು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಪಟ್ಟಣದಲ್ಲಿ ಈಗಾಗಲೇ ₹28 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾಯಿ ಮಗು ಆಸ್ಪತ್ರೆಯ ಕಾಮಗಾರಿ ಶೇ 90 ರಷ್ಟು ಮುಗಿದಿದೆ. ಅತ್ಯಾಧುನಿಕ ಸೌಕರ್ಯಗಳು ದೊರಕಲಿವೆ’ ಎಂದರು. </p>.<p>ಜಿಲ್ಲಾ ಕಚೇರಿಯ ಯೋಜನಾ ನಿರ್ವಹಣಾಧಿಕಾರಿ ಡಾ. ಮಂಜುನಾಥ್ ಮಾತನಾಡಿ, ‘ಜನರು ಸಣ್ಣ ಪುಟ್ಟ ಕಾಯಿಲೆಗಳ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗಳಿಗೆ ಹೋಗಿ ಸಾಕಷ್ಟು ಸಮಯ ಕಾಯುವ ಪರಿಸ್ಥಿತಿಯಿತ್ತು. ಅದನ್ನು ತಪ್ಪಿಸಲು ಆರೋಗ್ಯ ಇಲಾಖೆ ಈ ಕ್ರಮ ವಹಿಸಿದೆ’ ಎಂದರು.</p>.<p>ತಾಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್ ಮಾತನಾಡಿ, ‘ನಮ್ಮ ಕ್ಲಿನಿಕ್ನಲ್ಲಿ ಸಿಗುವ ಸೌಲಭ್ಯಗಳನ್ನು ಎಲ್ಲರೂ ಬಳಸಿಕೊಳ್ಳಬೇಕು’ ಎಂದರು.</p>.<p>ತಹಶೀಲ್ದಾರ್ ವಿಶ್ವಜಿತ್ ಮೆಹತಾ, ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಸದಸ್ಯರಾದ ರಿಹಾನ ಪರ್ವಿನ್, ಶಮೀನಾಬಾನು, ಕುಮಾರ್, ಮುಖಂಡರಾದ ಫಸಲ್ ಅಹಮದ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ‘ಪಟ್ಟಣದಲ್ಲಿ 2ನೇ ನಮ್ಮ ಕ್ಲಿನಿಕ್ ಆರಂಭವಾಗಿದೆ. ಇದರಿಂದ ಈ ಭಾಗದ ಜನರಿಗೆ ಸುಲಭವಾಗಿ ಆರೋಗ್ಯ ಸೌಲಭ್ಯಗಳು ಸಿಗುತ್ತಿವೆ’ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ವತಿಯಿಂದ ಪಟ್ಟಣದ ಎಂ.ಜಿ. ಹಾಲ್ನಲ್ಲಿ ನೂತನವಾಗಿ ಆರಂಭಿಸಿರುವ ನಮ್ಮ ಕ್ಲಿನಿಕ್ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಮ್ಮ ಕ್ಲಿನಿಕ್ನಲ್ಲಿ ಒಬ್ಬರು ತಜ್ಞ ವೈದ್ಯರು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಪಟ್ಟಣದಲ್ಲಿ ಈಗಾಗಲೇ ₹28 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾಯಿ ಮಗು ಆಸ್ಪತ್ರೆಯ ಕಾಮಗಾರಿ ಶೇ 90 ರಷ್ಟು ಮುಗಿದಿದೆ. ಅತ್ಯಾಧುನಿಕ ಸೌಕರ್ಯಗಳು ದೊರಕಲಿವೆ’ ಎಂದರು. </p>.<p>ಜಿಲ್ಲಾ ಕಚೇರಿಯ ಯೋಜನಾ ನಿರ್ವಹಣಾಧಿಕಾರಿ ಡಾ. ಮಂಜುನಾಥ್ ಮಾತನಾಡಿ, ‘ಜನರು ಸಣ್ಣ ಪುಟ್ಟ ಕಾಯಿಲೆಗಳ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗಳಿಗೆ ಹೋಗಿ ಸಾಕಷ್ಟು ಸಮಯ ಕಾಯುವ ಪರಿಸ್ಥಿತಿಯಿತ್ತು. ಅದನ್ನು ತಪ್ಪಿಸಲು ಆರೋಗ್ಯ ಇಲಾಖೆ ಈ ಕ್ರಮ ವಹಿಸಿದೆ’ ಎಂದರು.</p>.<p>ತಾಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್ ಮಾತನಾಡಿ, ‘ನಮ್ಮ ಕ್ಲಿನಿಕ್ನಲ್ಲಿ ಸಿಗುವ ಸೌಲಭ್ಯಗಳನ್ನು ಎಲ್ಲರೂ ಬಳಸಿಕೊಳ್ಳಬೇಕು’ ಎಂದರು.</p>.<p>ತಹಶೀಲ್ದಾರ್ ವಿಶ್ವಜಿತ್ ಮೆಹತಾ, ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಸದಸ್ಯರಾದ ರಿಹಾನ ಪರ್ವಿನ್, ಶಮೀನಾಬಾನು, ಕುಮಾರ್, ಮುಖಂಡರಾದ ಫಸಲ್ ಅಹಮದ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>