<p>ತರೀಕೆರೆ: ನೇರಲಕೆರೆ ಶ್ರೀಅಮೃತೇಶ್ವರ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ನಡೆಯಿತು.</p>.<p>ವಿದ್ಯಾರ್ಥಿ ಶಾಶ್ವತ ಅವರ ಪೋಷಕ ರಾದ ದೀಪಾ ಮಾತನಾಡಿ, ‘ಈ ಶಾಲೆಯ ವಾತಾವರಣ ಮಕ್ಕಳ ಜ್ಞಾನಾರ್ಜನೆಗೆ ಪೂರಕವಾಗಿದೆ. ಇಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತದೆ ಎಂಬ ಮಾಹಿತಿ ತಿಳಿದು ನಮ್ಮ ಮಗಳನ್ನು ಈ ಶಾಲೆಗೆ ಸೇರಿಸಿದ್ದೇವೆ. ಮಕ್ಕಳು ಸುಂದರ ವಾತಾವರಣದಲ್ಲಿ ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಆಶಿಸಿದರು.</p>.<p>ವಿದ್ಯಾರ್ಥಿನಿ ವಂದನಾ ಅವರ ಪೋಷಕರಾದ ನಾಗರಾಜ್ ಮಾತನಾಡಿ, ‘ಮಕ್ಕಳಿಗೆ ಪುಷ್ಪಾರ್ಚನೆ ಮಾಡಿ, ಚಾಕ್ಲೇಟ್ ನೀಡಿ ಶಾಲಾ ಆರಂಭೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಇದರಿಂದ ಶಾಲೆಯಲ್ಲಿನ ಶಿಸ್ತು ಮತ್ತು ಮಕ್ಕಳ ಮೇಲಿನ ಕಾಳಜಿ ನಮಗೆ ಮನವರಿಕೆಯಾಗಿದೆ’ ಎಂದರು.</p>.<p>ವಿದ್ಯಾರ್ಥಿನಿ ಜನನಿ ಅವರ ಪೋಷಕರಾದ ಪಾರ್ವತಮ್ಮ, ‘ಈ ಶಾಲೆಯಲ್ಲಿ ನಮ್ಮ ಮಗಳು ವಿದ್ಯಾಭ್ಯಾಸ ಮಾಡುತ್ತಿರುವುದು ಸಂತಸದ ಸಂಗತಿ’ ಎಂದು ಹೇಳಿದರು.</p>.<p>ಪ್ರೌಢಶಾಲೆಯ ಕನ್ನಡ ಶಿಕ್ಷಕ ಸತೀಶ್ ನಂದಿಹಳ್ಳಿ ಮಾತನಾಡಿ, ‘ಮಕ್ಕಳು ಉತ್ತಮ ಶಿಕ್ಷಣ ಪಡೆದು ಭವ್ಯ ಭವಿಷ್ಯ ಕಟ್ಟಿಕೊಳ್ಳಬೇಕು. ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ವಿದ್ಯಾಭ್ಯಾಸವೇ ಅಸ್ತಿತ್ವ ರೂಪಿಸುತ್ತದೆ. ಉತ್ತಮ ಗುಣಗಳನ್ನು ಅಳವಡಿಸಿಕೊಂಡು ಹಾಸ್ಟೆಲ್ ಸ್ವಚ್ಛತೆಯನ್ನೂ ಕಾಪಾಡಬೇಕು’ ಎಂದು ತಿಳಿಸಿದರು.</p>.<p>ಶಾಲಾ ಸ್ಥಳೀಯ ಸಲಹಾ ಸಮಿತಿ ಸದಸ್ಯೆ ಪಾರ್ವತಮ್ಮ, ಉಪಾಧ್ಯಕ್ಷ ಷಡಾಕ್ಷರಪ್ಪ ಹಾಗೂ ಮುಖ್ಯ ಶಿಕ್ಷಕ ಹಾಲೇಶ್ ಕೆ.ಟಿ. ಮಾತನಾಡಿದರು.</p>.<p>ಶಿಕ್ಷಕರು, ಶಾಲಾ ಸಿಬ್ಬಂದಿ, ಹಾಸ್ಟೆಲ್ ಸಿಬ್ಬಂದಿ, ಬಿಸಿಯೂಟ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-126-1461848151</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ನೇರಲಕೆರೆ ಶ್ರೀಅಮೃತೇಶ್ವರ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ನಡೆಯಿತು.</p>.<p>ವಿದ್ಯಾರ್ಥಿ ಶಾಶ್ವತ ಅವರ ಪೋಷಕ ರಾದ ದೀಪಾ ಮಾತನಾಡಿ, ‘ಈ ಶಾಲೆಯ ವಾತಾವರಣ ಮಕ್ಕಳ ಜ್ಞಾನಾರ್ಜನೆಗೆ ಪೂರಕವಾಗಿದೆ. ಇಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತದೆ ಎಂಬ ಮಾಹಿತಿ ತಿಳಿದು ನಮ್ಮ ಮಗಳನ್ನು ಈ ಶಾಲೆಗೆ ಸೇರಿಸಿದ್ದೇವೆ. ಮಕ್ಕಳು ಸುಂದರ ವಾತಾವರಣದಲ್ಲಿ ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಆಶಿಸಿದರು.</p>.<p>ವಿದ್ಯಾರ್ಥಿನಿ ವಂದನಾ ಅವರ ಪೋಷಕರಾದ ನಾಗರಾಜ್ ಮಾತನಾಡಿ, ‘ಮಕ್ಕಳಿಗೆ ಪುಷ್ಪಾರ್ಚನೆ ಮಾಡಿ, ಚಾಕ್ಲೇಟ್ ನೀಡಿ ಶಾಲಾ ಆರಂಭೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಇದರಿಂದ ಶಾಲೆಯಲ್ಲಿನ ಶಿಸ್ತು ಮತ್ತು ಮಕ್ಕಳ ಮೇಲಿನ ಕಾಳಜಿ ನಮಗೆ ಮನವರಿಕೆಯಾಗಿದೆ’ ಎಂದರು.</p>.<p>ವಿದ್ಯಾರ್ಥಿನಿ ಜನನಿ ಅವರ ಪೋಷಕರಾದ ಪಾರ್ವತಮ್ಮ, ‘ಈ ಶಾಲೆಯಲ್ಲಿ ನಮ್ಮ ಮಗಳು ವಿದ್ಯಾಭ್ಯಾಸ ಮಾಡುತ್ತಿರುವುದು ಸಂತಸದ ಸಂಗತಿ’ ಎಂದು ಹೇಳಿದರು.</p>.<p>ಪ್ರೌಢಶಾಲೆಯ ಕನ್ನಡ ಶಿಕ್ಷಕ ಸತೀಶ್ ನಂದಿಹಳ್ಳಿ ಮಾತನಾಡಿ, ‘ಮಕ್ಕಳು ಉತ್ತಮ ಶಿಕ್ಷಣ ಪಡೆದು ಭವ್ಯ ಭವಿಷ್ಯ ಕಟ್ಟಿಕೊಳ್ಳಬೇಕು. ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ವಿದ್ಯಾಭ್ಯಾಸವೇ ಅಸ್ತಿತ್ವ ರೂಪಿಸುತ್ತದೆ. ಉತ್ತಮ ಗುಣಗಳನ್ನು ಅಳವಡಿಸಿಕೊಂಡು ಹಾಸ್ಟೆಲ್ ಸ್ವಚ್ಛತೆಯನ್ನೂ ಕಾಪಾಡಬೇಕು’ ಎಂದು ತಿಳಿಸಿದರು.</p>.<p>ಶಾಲಾ ಸ್ಥಳೀಯ ಸಲಹಾ ಸಮಿತಿ ಸದಸ್ಯೆ ಪಾರ್ವತಮ್ಮ, ಉಪಾಧ್ಯಕ್ಷ ಷಡಾಕ್ಷರಪ್ಪ ಹಾಗೂ ಮುಖ್ಯ ಶಿಕ್ಷಕ ಹಾಲೇಶ್ ಕೆ.ಟಿ. ಮಾತನಾಡಿದರು.</p>.<p>ಶಿಕ್ಷಕರು, ಶಾಲಾ ಸಿಬ್ಬಂದಿ, ಹಾಸ್ಟೆಲ್ ಸಿಬ್ಬಂದಿ, ಬಿಸಿಯೂಟ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-126-1461848151</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>