<p><strong>ತರೀಕೆರೆ (ಚಿಕ್ಕಮಗಳೂರು):</strong> ಕಲ್ಲತ್ತಿಗಿರಿ ಸಮೀಪದ ಕೊಂಡೆಕಾನ್ ಹಳ್ಳದ ಬಳಿ ತಮ್ಮ ಮೊಬೈಲ್ ಫೋನ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲುಜಾರಿ 80 ಅಡಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಮೃತಪಟ್ಟಿದ್ದಾರೆ.</p>.<p>ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಎನ್.ಟಿ. ಸಂತೋಷ್ (38) ಮೃತಪಟ್ಟವರು. ತರೀಕೆರೆ ತಾಲ್ಲೂಕಿನ ಲಕ್ಷ್ಮೀಸಾಗರದ ಬಸವೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು. ಪಟ್ಟಣದ ಕೋಟೆ ಕ್ಯಾಂಪ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.</p>.<p>ಸಂತೋಷ್ ತಮ್ಮ ಪತ್ನಿಯೊಂದಿಗೆ ಬೈಕ್ನಲ್ಲಿ ಶನಿವಾರ ಕಲ್ಲತ್ತಿಗಿರಿ ಮತ್ತು ಕೆಮ್ಮಣ್ಣುಗುಂಡಿ ಪ್ರವಾಸಕ್ಕೆ ತೆರಳಿದ್ದರು. ಮಾರ್ಗಮಧ್ಯ ಪೊಟೊ ತೆಗೆದುಕೊಳ್ಳಲು ನಿಲ್ಲಿಸಿದ್ದರು. ಈ ವೇಳೆ ಸಂತೋಷ್ ಕಾಲುಜಾರಿ ಪ್ರಪಾತಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಅಗ್ನಿ ಶಾಮಕ ಸಿಂಬಂದಿ ಪ್ರಪಾತಕ್ಕೆ ಇಳಿದು ಶವ ಹೊರ ತೆಗೆದರು. ಪೊಲೀಸರು ತನಿಖೆ ಆರಂಭಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ (ಚಿಕ್ಕಮಗಳೂರು):</strong> ಕಲ್ಲತ್ತಿಗಿರಿ ಸಮೀಪದ ಕೊಂಡೆಕಾನ್ ಹಳ್ಳದ ಬಳಿ ತಮ್ಮ ಮೊಬೈಲ್ ಫೋನ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲುಜಾರಿ 80 ಅಡಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಮೃತಪಟ್ಟಿದ್ದಾರೆ.</p>.<p>ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಎನ್.ಟಿ. ಸಂತೋಷ್ (38) ಮೃತಪಟ್ಟವರು. ತರೀಕೆರೆ ತಾಲ್ಲೂಕಿನ ಲಕ್ಷ್ಮೀಸಾಗರದ ಬಸವೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು. ಪಟ್ಟಣದ ಕೋಟೆ ಕ್ಯಾಂಪ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.</p>.<p>ಸಂತೋಷ್ ತಮ್ಮ ಪತ್ನಿಯೊಂದಿಗೆ ಬೈಕ್ನಲ್ಲಿ ಶನಿವಾರ ಕಲ್ಲತ್ತಿಗಿರಿ ಮತ್ತು ಕೆಮ್ಮಣ್ಣುಗುಂಡಿ ಪ್ರವಾಸಕ್ಕೆ ತೆರಳಿದ್ದರು. ಮಾರ್ಗಮಧ್ಯ ಪೊಟೊ ತೆಗೆದುಕೊಳ್ಳಲು ನಿಲ್ಲಿಸಿದ್ದರು. ಈ ವೇಳೆ ಸಂತೋಷ್ ಕಾಲುಜಾರಿ ಪ್ರಪಾತಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಅಗ್ನಿ ಶಾಮಕ ಸಿಂಬಂದಿ ಪ್ರಪಾತಕ್ಕೆ ಇಳಿದು ಶವ ಹೊರ ತೆಗೆದರು. ಪೊಲೀಸರು ತನಿಖೆ ಆರಂಭಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>