ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶಂಕರಾಚಾರ್ಯ ಪ್ರತಿಮೆ ಇರುವ ಮಂಟಪದ ಗೋಪುರದ ಮೇಲೆ ಗುರುವಾರ ಕಂಡುಬಂದಿದ್ದ ಬಟ್ಟೆ ಈದ್ ಮಿಲಾದ್ ಬ್ಯಾನರ್, ಅದು ಯಾವುದೇ ಪಕ್ಷ, ಸಂಘಟನೆಯ ಬಾವುಟವಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಲಿಂದ್ (28) ಎಂಬಾತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ಇಲ್ಲಿ ಶುಕ್ರವಾರ ತಿಳಿಸಿದರು.