‘ರಾಣಿಝರಿ ಬಳಿ ಬೈಕ್ ನಿಲ್ಲಿಸಿ, ಬೆಟ್ಟ ಏರಿದ್ದ ಅವರು ಮೊಬೈಲ್ ಫೋನ್ ಹಾಗೂ ಚಪ್ಪಲಿಯನ್ನು ಅಲ್ಲೇ ಬಿಟ್ಟಿದ್ದರು. ಎಂಜಿನಿಯರ್ ಆಗಿದ್ದ ಅವರು ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಂಪನಿಯು ಮೂರು ತಿಂಗಳ ಸಂಬಳ ನೀಡಿ ಕೆಲಸದಿಂದ ತೆಗೆದು ಹಾಕಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು. ಬುಧವಾರ ಬೆಂಗಳೂರಿನಿಂದ ದುರ್ಗದ ಹಳ್ಳಿಗೆ ಬಂದಿದ್ದ ಭರತ್ ಅವರ ಮೊಬೈಲ್ ಫೋನ್ ನಾಟ್ ರೀಚಬಲ್ ಆಗಿದ್ದ ಕಾರಣ ಅವರ ಪೋಷಕರು ಬಾಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.