ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಚಿಕ್ಕಮಗಳೂರು: ಕಸದ ತೊಟ್ಟಿಗಳಾದ ಖಾಲಿ ನಿವೇಶನ

‌ರಘು ಕೆ.ಜಿ
Published : 15 ಫೆಬ್ರುವರಿ 2024, 5:54 IST
Last Updated : 15 ಫೆಬ್ರುವರಿ 2024, 5:54 IST
ಫಾಲೋ ಮಾಡಿ
Comments
ಖಾಲಿ ನಿವೇಶನಗಳಿಗೆ ತ್ಯಾಜ್ಯ ಸುರಿಯುವುದರಿಂದ ಹಂದಿ ಬೀದಿ ನಾಯಿಗಳ ಹಾವಳಿ ಸೊಳ್ಳೆ ಕಾಟ ಹೆಚ್ಚಿದೆ. ನಗರಸಭೆ ಕೂಡಲೇ ಎಚ್ಚೆತ್ತುಕೊಂಡು ಖಾಲಿ ನಿವೇಶನ ಸ್ವಚ್ಛತೆಗೆ ಕ್ರಮ ವಹಿಸಬೇಕು.
ಕೆ.ಟಿ.ರಾಧಾಕೃಷ್ಣ ಶಂಕರಪುರ ನಿವಾಸಿ
ಖಾಲಿ ನಿವೇಶನ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಲಸಾಗಿದೆ. ನಿರ್ಲಕ್ಷ್ಯ ವಹಿಸಿದ್ದಲ್ಲಿ ನಗರಸಭೆಯಿಂದಲೇ ಸ್ವಚ್ಛಗೊಳಿಸಿ ಜಾಗದ ಮಾಲೀಕರಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು.
ಸಿ.ಆರ್. ತೇಜಸ್ವಿನಿ ನಗರಸಭೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪರಿಸರ ವಿಭಾಗ
ಖಾಲಿ ಜಾಗಕ್ಕೆ ನಗರಸಭೆ ಫಲಕ ಅಭಿಯಾನ
ನಗರ ವ್ಯಾಪ್ತಿಯಲ್ಲಿರುವ ಸ್ವಚ್ಛಗೊಳ್ಳದ ಖಾಲಿ ನಿವೇಶನ ಜಾಗಕ್ಕೆ ನಗರಸಭೆಯಿಂದ ಫಲಕಗಳನ್ನು ಅಳವಡಿಸುವ ಅಭಿಯಾನಕ್ಕೆ ಸದ್ಯದಲ್ಲಿ ಚಾಲನೆ ನೀಡಲಾಗುವುದು ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹೇಳಿದರು. ಗೌರಿಕಾಲುವೆ ರಾಮನಹಳ್ಳಿ ವಿಜಯಪುರ ಸೇರಿದಂತೆ ವಿವಿಧೆಡೆ ಖಾಲಿ ಜಾಗದಲ್ಲಿ ತ್ಯಾಜ್ಯಗಳನ್ನು ತಂದು ಸುರಿಯದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಗರಸಭೆ ವತಿಯಿಂದಲೂ ಕರಪತ್ರ ಆಟೊರಿಕ್ಷಾ ಮೂಲಕ ಪ್ರಚಾರ ನಡೆಸಲಾಗಿದೆ. ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಮಾಲೀಕರಿಗೆ ಮತ್ತೊಮ್ಮೆ ತಿಳಿವಳಿಕೆ ಮೂಡಿಸಲಾಗುವುದು. ನಿರ್ಲಕ್ಷ್ಯ ವಹಿಸಿದ್ದಲ್ಲಿ ಕ್ರಮ ಜರುಗಿಸಲಾಗುವುದು ಎಂದರು. ನಗರವನ್ನು ಸಂಪೂರ್ಣ ಪ್ಲಾಸ್ಟಿಕ್‌ ಮತ್ತು ತ್ಯಾಜ್ಯ ಮುಕ್ತವಾಗಿಸಲು ನಗರಸಭೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು. ಆಗ ನಗರದ ಸೌಂದರ್ಯ ಕಾಪಾಡಲು ಸಾಧ್ಯ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT