ಇದೀಗ ಚಿಕ್ಕಮಗಳೂರು ಜಿಲ್ಲಾಧಿಕಾರಿ, ಕಡೂರಿನ ಅರಣ್ಯ ವ್ಯವಸ್ಥಾಪನಾಧಿಕಾರಿ, ಕೊಪ್ಪ ಉಪ ಸಂರಕ್ಷಣಾಧಿಕಾರಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಹಿನ್ನಲೆಯಲ್ಲಿ ಕರ್ನಾಟಕ ಅರಣ್ಯ ಕಾಯ್ದೆ 1963ರ ಕಲಂ -17ರ ಅಡಿಯಲ್ಲಿನ ಹಿರೇಗದ್ದೆ ಬ್ಲಾಕ್ ಒಂದರಿಂದ ಐದರವರೆಗಿನ ಒಟ್ಟು 302 ಎಕರೆ ಪ್ರದೇಶವನ್ನು ಜು.5, 2023ರಿಂದ ಜಾರಿಗೆ ಬರುವಂತೆ ಮೀಸಲು ಅರಣ್ಯ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.