‘ಶಿಕ್ಷಣದಿಂದ ಯಾರೂ ವಂಚಿತರಾಗಬಾರದು. ಶಿಕ್ಷಣದ ಮೂಲಕ ಜ್ಞಾನ ಸಂಪಾದಿಸಿದಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನ ಹಾಗೂ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಈಗಾಗಲೇ ಬೇಸಿಗೆ ರಜೆ ಮುಗಿದು ಶಾಲೆಗಳು ಪ್ರಾರಂಭಗೊಂಡಿವೆ. ರಾಜ್ಯ ಸರ್ಕಾರವು ಗುಣಮಟ್ಟದ ಶಿಕ್ಷಣಕ್ಕೆಆದ್ಯತೆ ನೀಡುತ್ತಿದ್ದು, ಅದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಮೊಬೈಲ್ ಬಳಕೆ ಕಡಿಮೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಶಾಲೆಯಲ್ಲಿ ಯಾವುದೇ ಸಮಸ್ಯೆ ಇದ್ದರೂ ಪ್ರಾಂಶುಪಾಲರು ಅಥವಾ ಸಂಬಂಧಿಸಿದವರ ಗಮನಕ್ಕೆ ತರಬೇಕು’ ಎಂದರು.