<p><strong>ಶೃಂಗೇರಿ</strong>: ಶೃಂಗೇರಿ ಶಾರದಾ ಪೀಠದಲ್ಲಿ ಸನ್ಮಾನ ಸ್ವೀಕರಿಸಲು ಆಂಧ್ರಪ್ರದೇಶದಿಂದ ಬಂದಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ ನಿವಾಸಿ ಶಿವಕುಮಾರ ಶರ್ಮ (37) ಕಾಣೆಯಾದವರು.</p>.<p>ಆ.1 ರಂದು ಶಾರದಾ ಮಠದ ಗುರುನಿವಾಸದಲ್ಲಿ ನಾನಾ ಪ್ರಾಂತ್ಯಗಳ 25 ಪಂಡಿತರಿಗೆ ಸನ್ಮಾನ ಆಯೋಜಿಸಲಾಗಿತ್ತು. ಶಿವಕುಮಾರ ಶರ್ಮ ಮಠದ ಗುರುಗಳಾದ ವಿಧುಶೇಖರಭಾರತಿ ಸ್ವಾಮೀಜಿ ಅವರಿಂದ ಸನ್ಮಾನ ಸ್ವೀಕರಿಸಿದ್ದಾರೆ. ಆದರೆ ಆ.2ರಂದು ಮಧ್ಯಾಹ್ನ 4 ಗಂಟೆಗೆ ಭಾರತೀತೀರ್ಥ ವಸತಿ ಗೃಹದಿಂದ ಶಾರದಾ ಮಠಕ್ಕೆ ಹೋಗಿ ಜಪ ಮಾಡಿ ಬರುವುದಾಗಿ ಹೋದವರು ನಾಪತ್ತೆ ಆಗಿದ್ದಾರೆ. ಅವರ ಪತ್ನಿ ಜ್ಯೋತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಇವರ ಸುಳಿವು ಸಿಕ್ಕಲ್ಲಿ ಮೊಬೈಲ್ ಸಂಖ್ಯೆ9113941398 ಅಥವಾ ಸ್ಥಳೀಯ ಪೊಲೀಸ್ ಠಾಣೆಯ 08265-250150 ನಂಬರ್ ಸಂಪರ್ಕಿಸಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ</strong>: ಶೃಂಗೇರಿ ಶಾರದಾ ಪೀಠದಲ್ಲಿ ಸನ್ಮಾನ ಸ್ವೀಕರಿಸಲು ಆಂಧ್ರಪ್ರದೇಶದಿಂದ ಬಂದಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ ನಿವಾಸಿ ಶಿವಕುಮಾರ ಶರ್ಮ (37) ಕಾಣೆಯಾದವರು.</p>.<p>ಆ.1 ರಂದು ಶಾರದಾ ಮಠದ ಗುರುನಿವಾಸದಲ್ಲಿ ನಾನಾ ಪ್ರಾಂತ್ಯಗಳ 25 ಪಂಡಿತರಿಗೆ ಸನ್ಮಾನ ಆಯೋಜಿಸಲಾಗಿತ್ತು. ಶಿವಕುಮಾರ ಶರ್ಮ ಮಠದ ಗುರುಗಳಾದ ವಿಧುಶೇಖರಭಾರತಿ ಸ್ವಾಮೀಜಿ ಅವರಿಂದ ಸನ್ಮಾನ ಸ್ವೀಕರಿಸಿದ್ದಾರೆ. ಆದರೆ ಆ.2ರಂದು ಮಧ್ಯಾಹ್ನ 4 ಗಂಟೆಗೆ ಭಾರತೀತೀರ್ಥ ವಸತಿ ಗೃಹದಿಂದ ಶಾರದಾ ಮಠಕ್ಕೆ ಹೋಗಿ ಜಪ ಮಾಡಿ ಬರುವುದಾಗಿ ಹೋದವರು ನಾಪತ್ತೆ ಆಗಿದ್ದಾರೆ. ಅವರ ಪತ್ನಿ ಜ್ಯೋತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಇವರ ಸುಳಿವು ಸಿಕ್ಕಲ್ಲಿ ಮೊಬೈಲ್ ಸಂಖ್ಯೆ9113941398 ಅಥವಾ ಸ್ಥಳೀಯ ಪೊಲೀಸ್ ಠಾಣೆಯ 08265-250150 ನಂಬರ್ ಸಂಪರ್ಕಿಸಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>