<p><strong>ಕಡೂರು:</strong> ಸೋಮವಾರ ನಡೆಯಬೇಕಿದ್ದ ತಾಲ್ಲೂಕಿನ ಮಲ್ಲೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಎರಡೂ ಸ್ಥಾನಗಳು ಖಾಲಿ ಉಳಿದಿವೆ.</p>.<p>ಅಧ್ಯಕ್ಷೆಯಾಗಿದ್ದ ಯಶೋದಾ ಧರ್ಮರಾಜ್ ಅವರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಮಲ್ಲೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದೆ.</p>.<p>ಚುನಾವಣಾಧಿಕಾರಿಯಾಗಿದ್ದ ನರೇಗಾ ನಿರ್ದೇಶಕ ಕಲ್ಲಪ್ಪ ಪಂಚಾಯಿತಿ ಕಚೇರಿಯಲ್ಲಿ ಹಾಜರಿದ್ದರೂ ನಿಗದಿತ ಸಮಯದೊಳಗೆ ಯಾರೂ ನಾಮಪತ್ರ ಸಲ್ಲಿಸದೇ ಇದ್ದ ಕಾರಣ ಅಧ್ಯಕ್ಷ ಸ್ಥಾನ ಖಾಲಿಯಾಗಿ ಉಳಿದಿದೆ ಎಂದು ನಡಾವಳಿಯಲ್ಲಿ ಉಲ್ಲೇಖಿಸಲಾಯಿತು.</p>.<p>ಸದ್ಯ ಉಪಾಧ್ಯಕ್ಷರಾಗಿ ತುರುವನಹಳ್ಳಿ ಪ್ರಕಾಶ್ ಇದ್ದು, ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಆದರೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಸೇರಿದ್ದು ಪುರುಷರು ಅಧ್ಯಕ್ಷರಾಗುವ ಅವಕಾಶವಿಲ್ಲ. ಹಾಗಾಗಿ ಸ್ಥಾನ ಖಾಲಿಯಾಗಿಯೇ ಉಳಿದರೆ ಉಪಾಧ್ಯಕ್ಷ ಅಧಿಕಾರ ನಡೆಸುವ ಅವಕಾಶವಿದೆ. ಈ ಕಾರಣದಿಂದ ಅಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸಿಲ್ಲವೆಂಬ ಮಾತು ಕೇಳಿಬರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು:</strong> ಸೋಮವಾರ ನಡೆಯಬೇಕಿದ್ದ ತಾಲ್ಲೂಕಿನ ಮಲ್ಲೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಎರಡೂ ಸ್ಥಾನಗಳು ಖಾಲಿ ಉಳಿದಿವೆ.</p>.<p>ಅಧ್ಯಕ್ಷೆಯಾಗಿದ್ದ ಯಶೋದಾ ಧರ್ಮರಾಜ್ ಅವರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಮಲ್ಲೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದೆ.</p>.<p>ಚುನಾವಣಾಧಿಕಾರಿಯಾಗಿದ್ದ ನರೇಗಾ ನಿರ್ದೇಶಕ ಕಲ್ಲಪ್ಪ ಪಂಚಾಯಿತಿ ಕಚೇರಿಯಲ್ಲಿ ಹಾಜರಿದ್ದರೂ ನಿಗದಿತ ಸಮಯದೊಳಗೆ ಯಾರೂ ನಾಮಪತ್ರ ಸಲ್ಲಿಸದೇ ಇದ್ದ ಕಾರಣ ಅಧ್ಯಕ್ಷ ಸ್ಥಾನ ಖಾಲಿಯಾಗಿ ಉಳಿದಿದೆ ಎಂದು ನಡಾವಳಿಯಲ್ಲಿ ಉಲ್ಲೇಖಿಸಲಾಯಿತು.</p>.<p>ಸದ್ಯ ಉಪಾಧ್ಯಕ್ಷರಾಗಿ ತುರುವನಹಳ್ಳಿ ಪ್ರಕಾಶ್ ಇದ್ದು, ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಆದರೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಸೇರಿದ್ದು ಪುರುಷರು ಅಧ್ಯಕ್ಷರಾಗುವ ಅವಕಾಶವಿಲ್ಲ. ಹಾಗಾಗಿ ಸ್ಥಾನ ಖಾಲಿಯಾಗಿಯೇ ಉಳಿದರೆ ಉಪಾಧ್ಯಕ್ಷ ಅಧಿಕಾರ ನಡೆಸುವ ಅವಕಾಶವಿದೆ. ಈ ಕಾರಣದಿಂದ ಅಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸಿಲ್ಲವೆಂಬ ಮಾತು ಕೇಳಿಬರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>