ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋವುಗಳಿವೆ, ಚುನಾವಣೆ ನಂತರ ಹೇಳ್ತೇನೆ –ಸಿ.ಟಿ.ರವಿ

Published 7 ಮಾರ್ಚ್ 2024, 23:00 IST
Last Updated 7 ಮಾರ್ಚ್ 2024, 23:00 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಮನಸ್ಸಿನಲ್ಲಿ ಬಹಳ ನೋವುಗಳಿವೆ. ರಾಷ್ಟ್ರದ ಹಿತಕ್ಕಾಗಿ ಎಲ್ಲವನ್ನು ನುಂಗಿಕೊಂಡಿದ್ದೇನೆ. ಲೋಕಸಭೆ ಚುನಾವಣೆ ಬಳಿಕ ಎಲ್ಲವನ್ನೂ ಜನರ ಮುಂದಿಡುತ್ತೇನೆ’ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದರು.

‘ವಿಧಾನಸಭೆ ಚುನಾವಣೆಯಲ್ಲಿ ಯಾರು ಹೇಗೆ ನಡೆದುಕೊಂಡರು ಎಂದು ಗೊತ್ತಿದೆ. ಹೆಚ್ಚು ದಿನ ಮನಸ್ಸಿನಲ್ಲೇ ಇಟ್ಟು ಕೊಳ್ಳಲಾಗದು ಅವುಗಳನ್ನು ಹೇಳಲೇಬೇಕು. ವೈಯಕ್ತಿಕ ನೆಲೆಯಲ್ಲಿ ಲೋಕಸಭೆ ಚುನಾವಣೆ ನಂತರ ಮಾಡುತ್ತೇನೆ’ ಎಂದು ಯಾರ ಹೆಸರನ್ನೂ ಹೇಳದೆ ಸ್ವಪಕ್ಷದವರ ವಿರುದ್ಧ ಸುದ್ದಿಗಾರರ ಬಳಿ ಅಸಮಾಧಾನ ವ್ಯಕ್ತಪಡಿಸಿದರು.

‘ಸದ್ಯಕ್ಕೆ ರಾಷ್ಟ್ರದ ಹಿತ ಮುಖ್ಯ, ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕು. ಅದಷ್ಟೇ ನಮ್ಮ ಮುಂದಿನ ಗುರಿ. ಸಮಯ ಬಂದಾಗ ಬೇರೆ ವಿಷಯಗಳನ್ನು ಹೇಳುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT