ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Chikkamagaluru Datta Jayanthi: ಮುಳ್ಳಯ್ಯನಗಿರಿಗೆ 6 ದಿನ ಪ್ರವಾಸ ನಿರ್ಬಂಧ

ಮುಳ್ಳಯ್ಯನಗಿರಿ ಸುತ್ತಮುತ್ತಲ ಪ್ರದೇಶಗಳಿಗೆ ಬೇರೆ ಪ್ರವಾಸಿಗರ ಭೇಟಿಯನ್ನು ಡಿ.22ರಿಂದ 27ರವರೆಗೆ ಆರು ದಿನ ಜಿಲ್ಲಾಡಳಿತ ನಿರ್ಬಂಧಿಸಿದೆ.
Published 14 ಡಿಸೆಂಬರ್ 2023, 5:23 IST
Last Updated 14 ಡಿಸೆಂಬರ್ 2023, 5:23 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ದತ್ತ ಜಯಂತಿ‌ ನಡೆಯುವುದರಿಂದ ಮುಳ್ಳಯ್ಯನಗಿರಿ ಸುತ್ತಮುತ್ತಲ ಪ್ರದೇಶಗಳಿಗೆ ಬೇರೆ ಪ್ರವಾಸಿಗರ ಭೇಟಿಯನ್ನು ಡಿ.22ರಿಂದ 27ರವರೆಗೆ ಆರು ದಿನ ಜಿಲ್ಲಾಡಳಿತ ನಿರ್ಬಂಧಿಸಿದೆ.

ಡಿ.24ರಿಂದ 26ರವರೆಗೆ ಮೂರು ದಿನ ದತ್ತ ಜಯಂತಿ ಕಾರ್ಯಕ್ರಮಗಳು ನಡೆಯಲಿವೆ. ಜಿಲ್ಲೆಯ ವಿವಿಧೆಡೆ ಮತ್ತು ಹೊರ ಜಿಲ್ಲೆಗಳಿಂದ ಸಾವಿರಾರು ಮಾಲಧಾರಿ ಭಕ್ತರು ಬರುವುದರಿಂದ ಇನಾಂ ದತ್ತಾತ್ರೇಯ ಬಾಬಾಬುಡನಗಿರಿಸ್ವಾಮಿ ದರ್ಗಾ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಝರಿ ಜಲಪಾತ, ಮಾಣಿಕ್ಯಧಾರಾ ಜಲಪಾತ ಹಾಗೂ ಗಾಳಿಕೆರೆಗೆ ಬೇರೆ ಪ್ರವಾಸಿಗರು ಬರುವುದನ್ನು ನಿರ್ಬಂಧಿಸಲಾಗಿದೆ.

ಚಂದ್ರದ್ರೋಣ ಪರ್ವತದಲ್ಲಿ ರಸ್ತೆಗಳು ಕಿರಿದಾಗಿರುವುದರಿಂದ ಬೇರೆ ಪ್ರವಾಸಿಗರು ತಮ್ಮ ಪ್ರವಾಸದ ದಿನಾಂಕಗಳನ್ನು ಮುಂದೂಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT