<p><strong>ಬೀರೂರು</strong>: ಸಾಮಾನ್ಯ ವರ್ಗದ ಜನರು ತಮ್ಮ ಹಳೆಯ ಮನೆಗಳನ್ನು ದುರಸ್ತಿ ಮಾಡಿಕೊಳ್ಳಲು ಯಾವುದೇ ಬ್ಯಾಂಕ್ಗಳು ಸಾಲ ನೀಡಲು ಮುಂದಾಗದ ಕಾರಣ ಬೀರೂರು ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಮೂಲಕ ಅಡಮಾನ ಸಾಲ ನೀಡಲು ಚಿಂತನೆ ನಡೆಸಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ಬಿ.ಎಸ್. ಹರಿಪ್ರಸಾದ್ ತಿಳಿಸಿದರು.</p>.<p>ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿರುವ ದಿ ಹೌಸ್ ಬಿಲ್ಡಿಂಗ್ ಕೋ-ಆಪರೇಟೀವ್ ಸೊಸೈಟಿಯ ಕಚೇರಿಯಲ್ಲಿ ಬುಧವಾರ ನಡೆದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹೌಸ್ ಕೋ-ಆಪರೇಟೀವ್ನ ಮೂಲ ಉದ್ದೇಶ ಷೇರುದಾರರು ಮತ್ತು ಅರ್ಹರಿಗೆ ಸೇವೆ ಸಲ್ಲಿಸುವುದಾಗಿದೆ. ಬೀರೂರು ಭಾಗದಲ್ಲಿ ಗೃಹ ಮಂಡಳಿ ವತಿಯಿಂದ ಸೂಪರ್ ಮಾರ್ಕೆಟ್ ಸ್ಥಾಪನೆ ಉದ್ದೇಶವಿದೆ. ಕೋ-ಆಪರೇಟೀವ್ ಸೊಸೈಟಿ ವತಿಯಿಂದ ಅರ್ಹರಿಗೆ ಪೂರಕ ದಾಖಲೆಗಳೊಂದಿಗೆ ಅಡಮಾನ ಸಾಲ ನೀಡುವ ಸೌಲಭ್ಯವನ್ನು ಕಲ್ಪಿಸುವ ಚಿಂತನೆಯನ್ನು ಮಾಡಲಾಗಿದೆ. ಕಾರ್ಯಕಾರಿ ಮಂಡಳಿಯ ಒಪ್ಪಿಗೆ ಮೇರೆಗೆ ಸೊಸೈಟಿಯ ಬೈಲಾವನ್ನು ತಿದ್ದುಪಡಿ ಮಾಡಿ ಈ ಸೌಲಭ್ಯ ಕಲ್ಪಿಸಬೇಕಿದೆ. ಈ ವಿಷಯವಾಗಿ ಎಲ್ಲರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ’ ಎಂದರು.</p>.<p>ಸಭೆಯಲ್ಲಿ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷ ಎಚ್.ವೆಂಕಟಗಿರಿಯಪ್ಪ, ಕಾರ್ಯದರ್ಶಿ ಸಿ.ಎಂ.ಷಡಕ್ಷರಿ, ನಿರ್ದೇಶಕರಾದ ವಿಶ್ವನಾಥಗೌಡ, ಎ.ಆರ್.ಪ್ರಕಾಶ್, ಎಂ.ಬಿ.ಗಿರೀಶ್, ಎಚ್.ನಾಗರಾಜ್, ಬಿ.ಎನ್.ನಾಗರತ್ನಮ್ಮ, ಬಿ.ಎಂ.ಮಂಜುನಾಥ್, ಬಿ.ಕೆ.ರಮೇಶ್, ದಾಕ್ಷಾಯಿಣಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀರೂರು</strong>: ಸಾಮಾನ್ಯ ವರ್ಗದ ಜನರು ತಮ್ಮ ಹಳೆಯ ಮನೆಗಳನ್ನು ದುರಸ್ತಿ ಮಾಡಿಕೊಳ್ಳಲು ಯಾವುದೇ ಬ್ಯಾಂಕ್ಗಳು ಸಾಲ ನೀಡಲು ಮುಂದಾಗದ ಕಾರಣ ಬೀರೂರು ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಮೂಲಕ ಅಡಮಾನ ಸಾಲ ನೀಡಲು ಚಿಂತನೆ ನಡೆಸಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ಬಿ.ಎಸ್. ಹರಿಪ್ರಸಾದ್ ತಿಳಿಸಿದರು.</p>.<p>ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿರುವ ದಿ ಹೌಸ್ ಬಿಲ್ಡಿಂಗ್ ಕೋ-ಆಪರೇಟೀವ್ ಸೊಸೈಟಿಯ ಕಚೇರಿಯಲ್ಲಿ ಬುಧವಾರ ನಡೆದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹೌಸ್ ಕೋ-ಆಪರೇಟೀವ್ನ ಮೂಲ ಉದ್ದೇಶ ಷೇರುದಾರರು ಮತ್ತು ಅರ್ಹರಿಗೆ ಸೇವೆ ಸಲ್ಲಿಸುವುದಾಗಿದೆ. ಬೀರೂರು ಭಾಗದಲ್ಲಿ ಗೃಹ ಮಂಡಳಿ ವತಿಯಿಂದ ಸೂಪರ್ ಮಾರ್ಕೆಟ್ ಸ್ಥಾಪನೆ ಉದ್ದೇಶವಿದೆ. ಕೋ-ಆಪರೇಟೀವ್ ಸೊಸೈಟಿ ವತಿಯಿಂದ ಅರ್ಹರಿಗೆ ಪೂರಕ ದಾಖಲೆಗಳೊಂದಿಗೆ ಅಡಮಾನ ಸಾಲ ನೀಡುವ ಸೌಲಭ್ಯವನ್ನು ಕಲ್ಪಿಸುವ ಚಿಂತನೆಯನ್ನು ಮಾಡಲಾಗಿದೆ. ಕಾರ್ಯಕಾರಿ ಮಂಡಳಿಯ ಒಪ್ಪಿಗೆ ಮೇರೆಗೆ ಸೊಸೈಟಿಯ ಬೈಲಾವನ್ನು ತಿದ್ದುಪಡಿ ಮಾಡಿ ಈ ಸೌಲಭ್ಯ ಕಲ್ಪಿಸಬೇಕಿದೆ. ಈ ವಿಷಯವಾಗಿ ಎಲ್ಲರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ’ ಎಂದರು.</p>.<p>ಸಭೆಯಲ್ಲಿ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷ ಎಚ್.ವೆಂಕಟಗಿರಿಯಪ್ಪ, ಕಾರ್ಯದರ್ಶಿ ಸಿ.ಎಂ.ಷಡಕ್ಷರಿ, ನಿರ್ದೇಶಕರಾದ ವಿಶ್ವನಾಥಗೌಡ, ಎ.ಆರ್.ಪ್ರಕಾಶ್, ಎಂ.ಬಿ.ಗಿರೀಶ್, ಎಚ್.ನಾಗರಾಜ್, ಬಿ.ಎನ್.ನಾಗರತ್ನಮ್ಮ, ಬಿ.ಎಂ.ಮಂಜುನಾಥ್, ಬಿ.ಕೆ.ರಮೇಶ್, ದಾಕ್ಷಾಯಿಣಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>