<p><strong>ಕಡೂರು:</strong> ತಾಲ್ಲೂಕಿನ ಆಣೇಗೆರೆ ಕೆರೆಯಲ್ಲಿ ಮೂವರು ಹುಡುಗರು ನೀರು ಪಾಲಾಗಿದ್ದಾರೆ.</p>.<p>ಬಿಟ್ಟೇನಹಳ್ಳಿಯ ಬಿ.ಬಿ.ದರ್ಶನ್ (16) ಮತ್ತು ಸಹೋದರರಾದ ಬಿ.ಬಿ.ರಾಕೇಶ್.(17), ಬಿ.ಬಿ.ಕಿರಣ್ (20) ಮೃತಪಟ್ಟವರು. ಈಜಲು ಕೆರೆಗೆ ಇಳಿದು ಸಾವಿಗೀಡಾಗಿದ್ದಾರೆ.</p>.<p>ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.ಪಂಚನಹಳ್ಳಿಯ ಸರ್ಕಾರಿ ಆಸ್ಪತ್ರೆ ಶವಗಾರದಲ್ಲಿ ಶವಗಳನ್ನು ಇಡಲಾಗಿದೆ.</p>.<p>‘ನೇರಳೆ ಹಣ್ಣು ಕೊಯ್ದುಕೊಂಡು ಬರುತ್ತೇವೆ ಎಂದು ಮನೆಯಲ್ಲಿ ಹೇಳಿ ಮೂವರೂ ಹೋಗಿದ್ದಾರೆ. ಆಣೇಗೆರೆಯ ಕೆರೆಯ ಕೋಡಿ ಬಳಿ ನೀರಿಗೆ ಇಳಿದಿದ್ದಾರೆ.</p>.<p>ಕೆರೆಯಲ್ಲಿ ಹೂಳು ತೆಗೆದಿದ್ದ ಭಾಗದಲ್ಲಿ ಸಿಲುಕಿಕೊಂಡಿದ್ದಾರೆ. ಅಪಾಯದಲ್ಲಿದ್ದ ಯುವಕರನ್ನು ಬಟ್ಟೆ ತೊಳೆಯುತ್ತಿದ್ದ ಮಹಿಳೆಯೊಬ್ಬರು ಸೀರೆ ಎಸೆದು ರಕ್ಷಿಸಲು ಯತ್ನಿಸಿದ್ದಾರೆ. ಆದರೆ, ಅವರಿಂದ ಎಳೆಯಲು ಸಾಧ್ಯವಾಗಿಲ್ಲ’ ಎಂದು ಸ್ಥಳೀಯರು ತಿಳಿಸಿದ್ದಾರೆ. <br />ದರ್ಶನ್ ಎಸ್ಸೆಸ್ಸೆಲ್ಸಿ, ಕಿರಣ್ ಐಟಿಐ ಮುಗಿಸಿದ್ದರು. ರಾಕೇಶ್ ದ್ವಿತೀಯ ಪಿಯು ವಿದ್ಯಾರ್ಥಿ.ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು:</strong> ತಾಲ್ಲೂಕಿನ ಆಣೇಗೆರೆ ಕೆರೆಯಲ್ಲಿ ಮೂವರು ಹುಡುಗರು ನೀರು ಪಾಲಾಗಿದ್ದಾರೆ.</p>.<p>ಬಿಟ್ಟೇನಹಳ್ಳಿಯ ಬಿ.ಬಿ.ದರ್ಶನ್ (16) ಮತ್ತು ಸಹೋದರರಾದ ಬಿ.ಬಿ.ರಾಕೇಶ್.(17), ಬಿ.ಬಿ.ಕಿರಣ್ (20) ಮೃತಪಟ್ಟವರು. ಈಜಲು ಕೆರೆಗೆ ಇಳಿದು ಸಾವಿಗೀಡಾಗಿದ್ದಾರೆ.</p>.<p>ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.ಪಂಚನಹಳ್ಳಿಯ ಸರ್ಕಾರಿ ಆಸ್ಪತ್ರೆ ಶವಗಾರದಲ್ಲಿ ಶವಗಳನ್ನು ಇಡಲಾಗಿದೆ.</p>.<p>‘ನೇರಳೆ ಹಣ್ಣು ಕೊಯ್ದುಕೊಂಡು ಬರುತ್ತೇವೆ ಎಂದು ಮನೆಯಲ್ಲಿ ಹೇಳಿ ಮೂವರೂ ಹೋಗಿದ್ದಾರೆ. ಆಣೇಗೆರೆಯ ಕೆರೆಯ ಕೋಡಿ ಬಳಿ ನೀರಿಗೆ ಇಳಿದಿದ್ದಾರೆ.</p>.<p>ಕೆರೆಯಲ್ಲಿ ಹೂಳು ತೆಗೆದಿದ್ದ ಭಾಗದಲ್ಲಿ ಸಿಲುಕಿಕೊಂಡಿದ್ದಾರೆ. ಅಪಾಯದಲ್ಲಿದ್ದ ಯುವಕರನ್ನು ಬಟ್ಟೆ ತೊಳೆಯುತ್ತಿದ್ದ ಮಹಿಳೆಯೊಬ್ಬರು ಸೀರೆ ಎಸೆದು ರಕ್ಷಿಸಲು ಯತ್ನಿಸಿದ್ದಾರೆ. ಆದರೆ, ಅವರಿಂದ ಎಳೆಯಲು ಸಾಧ್ಯವಾಗಿಲ್ಲ’ ಎಂದು ಸ್ಥಳೀಯರು ತಿಳಿಸಿದ್ದಾರೆ. <br />ದರ್ಶನ್ ಎಸ್ಸೆಸ್ಸೆಲ್ಸಿ, ಕಿರಣ್ ಐಟಿಐ ಮುಗಿಸಿದ್ದರು. ರಾಕೇಶ್ ದ್ವಿತೀಯ ಪಿಯು ವಿದ್ಯಾರ್ಥಿ.ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>