ಚಿಕ್ಕಮಗಳೂರು: ನಿವೇಶನ ಹಕ್ಕುಪತ್ರ ವಿತರಣೆ ಲೋಪ ಪ್ರಕರಣದಲ್ಲಿ ಶೃಂಗೇರಿಯ ಗ್ರಾಮ ಲೆಕ್ಕಿಗರಾದ ಶಿವಕುಮಾರ್, ಸತೀಶ್ ಹಾಗೂ ರಾಜಸ್ವ ನಿರೀಕ್ಷಕ ಸಂದೀಪ್ ಅವರನ್ನು ಗುರುವಾರ ಅಮಾನತು ಮಾಡಲಾಗಿದೆ.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಈ ಮೂವರನ್ನು ಅಮಾನತುಗೊಳಿಸಿದ್ದಾರೆ. ಹಕ್ಕುಪತ್ರ ನೀಡಲು ಲಂಚ ಪ್ರಕರಣದಲ್ಲಿ ಶೃಂಗೇರಿ ತಹಶೀಲ್ದಾರ್ ಅಂಬುಜಾ ಅವರನ್ನು ಈಚೆಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ತಂಡದವರು ಬಂಧಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.