ಈ ಮಧ್ಯೆ ಸಂಸ್ಥೆ ಮುನ್ನಡೆಸುವುದಾಗಿ ಬೆಂಗಳೂರಿನ ಉದ್ಯಮಿ ಮಹೇಂದ್ರ ಎಂಬುವರು ಆಡಳಿತ ಮಂಡಳಿ ಜತೆಗೆ ಮಾತುಕತೆ ನಡೆಸಿದ್ದರು. ಅದು ವಿಫಲವಾಯಿತು. ನಂತರ ಸಂಸ್ಥೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಟ್ರಾನ್ಸ್ಪೋರ್ಟ್ ಮತ್ತು ಜನರಲ್ ಮಜ್ದೂರ್ ಸಂಘದ ನೇತೃತ್ವದಲ್ಲಿ ಕಾರ್ಮಿಕರು ನಡೆಸಿದ ಹೋರಾಟದಿಂದ ಆಡಳಿತ ಮಂಡಳಿಯಲ್ಲಿದ್ದ ಕೆಲವರ ಮೇಲೆ ಪ್ರಕರಣವೂ ದಾಖಲಾಯಿತು.