ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟಿಗೆಹಾರ: ಬೊಮ್ಮನಹಳ್ಳಿಯಲ್ಲಿ ಹುಲಿ ದಾಳಿಗೆ ಎತ್ತು ಬಲಿ

Last Updated 18 ಆಗಸ್ಟ್ 2022, 3:15 IST
ಅಕ್ಷರ ಗಾತ್ರ

ಕೊಟ್ಟಿಗೆಹಾರ: ಬಣಕಲ್ ಹೋಬಳಿಯ ದೊಡ್ಡನಂದಿ ಗ್ರಾಮದ ಬೊಮ್ಮನಹಳ್ಳಿನಾರಾಯಣಗೌಡ ಅವರ ಎತ್ತಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ.

ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೊಹಸೀನ್, ಜಾನುವಾರು ಅಧಿಕಾರಿ ಅಜೀಜ್ ಅಹಮ್ಮದ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಹುಲಿ ಸ್ಥಳಾಂತರಿಸಲು ಆಗ್ರಹ: ಎರಡು ವರ್ಷಗಳಿಂದ ಬಿ.ಹೊಸಹಳ್ಳಿ, ಹೊಕ್ಕಳ್ಳಿ, ಭಾರತೀಬೈಲ್, ಬಿಲ್ಲೋಟ ಭಾಗದಲ್ಲಿಹುಲಿ ಸಂಚರಿಸುತ್ತಿದ್ದು ಈವರೆಗೆ ಮೇಯಲು ಹೋಗಿದ್ದ ಹಲವು ದನಗಳು ಹುಲಿಯ ಪಾಲಾಗಿವೆ. ಅರಣ್ಯ ಇಲಾಖೆ ಬಿ.ಹೊಸಳ್ಳಿ, ಬಾನಳ್ಳಿ, ಹೊಕ್ಕಳಿ ಭಾಗದಲ್ಲಿ ಕ್ಯಾಮೆರಾ ಕಣ್ಗಾವಲು ಇರಿಸಿ ಹುಲಿ ಸೆರೆ ಹಿಡಿಯಲು ಪ್ರಯತ್ನಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಒಂದೆಡೆ ಕಾಡಾನೆ ಕಾಟ ಮತ್ತೊಂದೆಡೆ ಹುಲಿಯ ಭಯದಿಂದ ಗ್ರಾಮಸ್ಥರು ದಿನದೂಡುವಂತಾಗಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹುಲಿ ಸ್ಥಳಾಂತರ ಮಾಡಿ ಜನರು ನೆಮ್ಮದಿಯಿಂದ ಬದುಕಲು ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT