ಹೋಟೆಲ್, ಹೋಂ ಸ್ಟೆ, ರೆಸಾರ್ಟ್ಗಳವರು ಪ್ರವಾಸಿಗರಿಗೆ ಗುಂಪಾಗಿ ತಂಗಲು ಅವಕಾಶ ನೀಡುವಂತಿಲ್ಲ. ಪ್ರತಿಯೊಬ್ಬರನ್ನೂ ಸ್ಕ್ರೀನಿಂಗ್ ಮಾಡಬೇಕು. ಕೊಠಡಿಗಳಿಗೆ ಆಗಾಗ್ಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ನೈರ್ಮಲ್ಯ ಕಾಪಾಡಬೇಕು. ಪ್ರವಾಸಿಗೆ ಸೋಂಕಿನ ಲಕ್ಷಣಗಳಿದ್ದರೆ ಆರೋಗ್ಯ ಸಿಬ್ಬಂದಿಗೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶದಲ್ಲಿ ತಿಳಿಸಿದ್ದಾರೆ.