<p><strong>ಚಿಕ್ಕಮಗಳೂರು</strong>: ‘ಕೆಎಸ್ಆರ್ಟಿಸಿ ನೌಕರರು ಬೇಡಿಕೆ ಈಡೇರಿಕೆಗೆ ಮೇ 2ರವರೆಗೆ ಸರ್ಕಾರಕ್ಕೆ ಕಾಲಾವಕಾಶ ನೀಡಬೇಕು. ಆಗಲೂ ಈಡೇರದಿದ್ದರೆ ನೌಕರರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡುತ್ತೇವೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಸಿ.ಟಿ.ರವಿ ತಿಳಿಸಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಷ್ಕರದಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಸರ್ಕಾರವು ಪರ್ಯಾಯವಾಗಿ ಖಾಸಗಿ ಬಸ್ಗಳನ್ನು ವ್ಯವಸ್ಥೆ ಮಾಡಿದ್ದರೂ ಮಾಮೂಲಿಯಂತೆ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ನೌಕರರು ಯಾರ ರಾಜಕೀಯ ದಾಳವೂ ಆಗಬಾರದು. ಹಠಮಾರಿ ಧೋರಣೆ ತಳೆಯಬಾರದು’ ಎಂದು ಮನವಿ ಮಾಡಿದರು.</p>.<p>‘ಸಿದ್ದರಾಮಯ್ಯ ಅವರಿಗೆ ಆಡಳಿತ ಎಂದರೆ ಜಾತಿಗಳನ್ನು ಒಡೆಯುವುದು. ವೀರಶೈವ ಮತ್ತು ಲಿಂಗಾಯತ ಸಮುದಾಯಗಳನ್ನು ಒಡೆಯುವ ಕೆಲಸ ಮಾಡಿದ್ದು ಅವರ ಆಡಳಿತ ಅವಧಿಯಲ್ಲೇ. ರುದ್ರೇಶ್, ರಾಜು, ಪ್ರಶಾಂತ್ಪೂಜಾರಿ ಸಹಿತ 46 ಜನರ ಕೊಲೆಗಳು ನಡೆದದ್ದು ಅವರ ಅವಧಿಯಲ್ಲೇ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p><strong>‘ವಿದ್ಯಮಾನಗಳನ್ನು ಹೈಕಮಾಂಡ್ ಗಮನಿಸುತ್ತಿದೆ’</strong><br />‘ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜ್ಯಪಾಲರಿಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಹಳಷ್ಟು ಚರ್ಚೆಗಳು ನಡೆದಿವೆ. ವಿಚಾರ ಗಮನಕ್ಕೆ ತರುವ ಕೆಲಸ ಮಾಡಿದ್ದೇನೆ, ಯಡಿಯೂರಪ್ಪ ನಮ್ಮ ನಾಯಕ ಎಂದು ಈಶ್ವರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ’ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಕ್ಕೆ ಮುಜುಗರ ಉಂಟುಮಾಡುವ ಕೆಲ ವಿದ್ಯಮಾನಗಳು ಈಚೆಗೆ ನಡೆದಿವೆ. ಎಲ್ಲವನ್ನು ವರಿಷ್ಠರು ಗಮನಿಸುತ್ತಿದ್ದು, ಸಂದರ್ಭ ಬಂದಾಗ ತಕ್ಕ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ಕೆಎಸ್ಆರ್ಟಿಸಿ ನೌಕರರು ಬೇಡಿಕೆ ಈಡೇರಿಕೆಗೆ ಮೇ 2ರವರೆಗೆ ಸರ್ಕಾರಕ್ಕೆ ಕಾಲಾವಕಾಶ ನೀಡಬೇಕು. ಆಗಲೂ ಈಡೇರದಿದ್ದರೆ ನೌಕರರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡುತ್ತೇವೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಸಿ.ಟಿ.ರವಿ ತಿಳಿಸಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಷ್ಕರದಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಸರ್ಕಾರವು ಪರ್ಯಾಯವಾಗಿ ಖಾಸಗಿ ಬಸ್ಗಳನ್ನು ವ್ಯವಸ್ಥೆ ಮಾಡಿದ್ದರೂ ಮಾಮೂಲಿಯಂತೆ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ನೌಕರರು ಯಾರ ರಾಜಕೀಯ ದಾಳವೂ ಆಗಬಾರದು. ಹಠಮಾರಿ ಧೋರಣೆ ತಳೆಯಬಾರದು’ ಎಂದು ಮನವಿ ಮಾಡಿದರು.</p>.<p>‘ಸಿದ್ದರಾಮಯ್ಯ ಅವರಿಗೆ ಆಡಳಿತ ಎಂದರೆ ಜಾತಿಗಳನ್ನು ಒಡೆಯುವುದು. ವೀರಶೈವ ಮತ್ತು ಲಿಂಗಾಯತ ಸಮುದಾಯಗಳನ್ನು ಒಡೆಯುವ ಕೆಲಸ ಮಾಡಿದ್ದು ಅವರ ಆಡಳಿತ ಅವಧಿಯಲ್ಲೇ. ರುದ್ರೇಶ್, ರಾಜು, ಪ್ರಶಾಂತ್ಪೂಜಾರಿ ಸಹಿತ 46 ಜನರ ಕೊಲೆಗಳು ನಡೆದದ್ದು ಅವರ ಅವಧಿಯಲ್ಲೇ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p><strong>‘ವಿದ್ಯಮಾನಗಳನ್ನು ಹೈಕಮಾಂಡ್ ಗಮನಿಸುತ್ತಿದೆ’</strong><br />‘ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜ್ಯಪಾಲರಿಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಹಳಷ್ಟು ಚರ್ಚೆಗಳು ನಡೆದಿವೆ. ವಿಚಾರ ಗಮನಕ್ಕೆ ತರುವ ಕೆಲಸ ಮಾಡಿದ್ದೇನೆ, ಯಡಿಯೂರಪ್ಪ ನಮ್ಮ ನಾಯಕ ಎಂದು ಈಶ್ವರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ’ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಕ್ಕೆ ಮುಜುಗರ ಉಂಟುಮಾಡುವ ಕೆಲ ವಿದ್ಯಮಾನಗಳು ಈಚೆಗೆ ನಡೆದಿವೆ. ಎಲ್ಲವನ್ನು ವರಿಷ್ಠರು ಗಮನಿಸುತ್ತಿದ್ದು, ಸಂದರ್ಭ ಬಂದಾಗ ತಕ್ಕ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>