ಚಿಕ್ಕಮಗಳೂರು: ‘ರೈತ ನಾಯಕರಾಗಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರು ಈಗ ಕಾರ್ಮಿಕ ನಾಯಕರಾಗಿದ್ದಾರೆ. ಅರಾಜಕತೆ ಸೃಷ್ಟಿಸುವುದು ನಾಯಕತ್ವದ ಲಕ್ಷಣವಲ್ಲ, ಸಂದರ್ಭ ಮತ್ತು ಪರಿಸ್ಥಿತಿ ಅರ್ಥಮಾಡಿಕೊಂಡು ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದಾಗಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಸಿ.ಟಿ.ರವಿ ಪ್ರತಿಕ್ರಿಯಿಸಿದರು.