ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ ಮಳೆಯಾಗಿದೆ, ಗುಡುಗು–ಮಿಂಚಿನ ಆರ್ಭಟ ಇತ್ತು. ಮೂಡಿಗೆರೆ ತಾಲ್ಲೂಕಿನ ಗಾಂಧೀ ಘರ್ ಗ್ರಾಮದ ಸಮೀಪ ಹೆದ್ದಾರಿ ಬದಿಯ ವೃಕ್ಷವೊಂದು ನೆಲಕ್ಕುರುಳಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ.
ರಸ್ತೆಯ ಎರಡೂ ಕಡೆ ವಾಹನಗಳು ಸಾಲುಗಟ್ಟಿ ನಿಂತಿವೆ. ಬೇಲೂರು, ಸಕಲೇಶಪುರ, ಹಾಸನ ಹಾಗೂ ಮಂಗಳೂರು ಕಡೆಗಿನ ಸಂಚಾರ ಬಂದ್ ಆಗಿದೆ.
ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರು ಪಟ್ಟಣದ ವಾಹನ ನಿಲುಗಡೆ ಪ್ರದೇಶದಲ್ಲಿ ನೀರು ಆವರಿಸಿದೆ.