<p><strong>ಜಯಪುರ (ಬಾಳೆಹೊನ್ನೂರು):</strong> ತುಳುವಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕೆರೆ ಪ್ರದೇಶದ ಕೆರೆಮನೆಯಲ್ಲಿ ಎರಡು ಅಪರೂಪದ ಸ್ಮಾರಕಶಿಲ್ಪಗಳು ಶಾಂತ ಶ್ರೀನಿವಾಸ ಗೌಡ ಮತ್ತು ಕೆರೆಮನೆ ಸುರೇಶ ಅವರ ಜಮೀನಿನಲ್ಲಿ ಪತ್ತೆಯಾಗಿವೆ.</p>.<p>ಶಾಂತ ಶ್ರೀನಿವಾಸ ಗೌಡ ಅವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಒಂದು ಸ್ಮಾರಕಶಿಲ್ಪವನ್ನು ಹೊರತೆಗೆದು ಅದರ ಮಾಹಿತಿಯನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ನ.ಸುರೇಶ ಕಲ್ಕೆರೆ ಅವರಿಗೆ ತಿಳಿಸಿದ್ದರು. </p>.<p>ಈ ಸಂದರ್ಭದಲ್ಲಿ ಕ್ಷೇತ್ರಕಾರ್ಯ ಶೋಧನೆಗೆ ತೆರಳಿದ ಸಂಶೋಧನಾರ್ಥಿಗೆ ಕೆರೆಮನೆ ಸುರೇಶ ಅವರ ಜಮೀನಲ್ಲೂ ಗಿಡ-ಗಂಟಿಗಳಿಂದ ಮುಚ್ಚಿ ಹೋಗಿದ್ದ ಇನ್ನೊಂದು ಸ್ಮಾರಕಶಿಲ್ಪ ಪತ್ತೆಯಾಗಿದೆ. ಅವುಗಳನ್ನು ಸ್ವಚ್ಛಗೊಳಿಸಿ, ಅಧ್ಯಯನಕ್ಕೆ ಒಳಪಡಿಸಿದಾಗ ಅವುಗಳು ಸಾಮ್ಯತೆಯನ್ನು ಹೊಂದಿರುವುದು ಗೊತ್ತಾಗಿದೆ. ಈ ಸ್ಮಾರಕಶಿಲ್ಪಗಳು ಸುಮಾರು ಎರಡು ಅಡಿ ಎತ್ತರ ಹಾಗೂ ಒಂದು ಅಡಿ ಅಗಲವಾಗಿದ್ದು, ಇವುಗಳು ಒಂದಕ್ಕೊಂದು ಸುಮಾರು 300 ಮೀಟರ್ ಅಂತರದಲ್ಲಿವೆ. ಮುಖ್ಯವಾಗಿ ಈ ಸ್ಮಾರಕಶಿಲ್ಪದ ಮಧ್ಯಭಾಗದಲ್ಲಿ ತ್ರಿಶೂಲ ಹಾಗೂ ಇಕ್ಕೆಲಗಳಲ್ಲಿ ಸೂರ್ಯ ಮತ್ತು ಚಂದ್ರರ ಕೆತ್ತನೆಯಿದ್ದು, ಬಹುತೇಕ ಕರ್ನಾಟಕದಲ್ಲಿಯೇ ಕಂಡು ಬಂದಿರುವ ಅಪರೂಪದ ತ್ರಿಶೂಲಮುದ್ರೆ ಗಡಿಕಲ್ಲುಗಳಾಗಿವೆ.</p>.<p>ಈ ಶಿಲ್ಪ ಲಕ್ಷಣದ ಹೋಲಿಕೆಯನ್ನು ಹೊಂದಿರುವ 15ನೇ ಶತಮಾನದ ದಾನ ಶಾಸನವೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಬಳ್ಪ ಪ್ರದೇಶದ ದುರ್ಗಾ ದೇವಾಲಯದ ಒಳ ಪ್ರಾಕಾರದಲ್ಲಿ ಕಂಡುಬಂದಿದೆ. ಆದರೆ, ಅದರಲ್ಲಿ ಸೂರ್ಯ ಚಂದ್ರರ ಬದಲು ಶಂಖ– ಚಕ್ರದ ಕೆತ್ತನೆ ಇದೆ.</p>.<p>ಕಲ್ಕರೆ ಪ್ರದೇಶದ ಅರಣ್ಯದಲ್ಲಿ ಕಲ್ಲಿನ ಪ್ರಾಚೀನ ತಳಪಾಯ ಕಂಡು ಬಂದಿದ್ದು, ಅದು ದೇವಿ ಸಂಬಂಧಿಸಿದ ದೇವಾಲಯದ ನೆಲಗಟ್ಟು ಎಂಬುದು ಇಂದಿಗೂ ಸ್ಥಳೀಯರ ನಂಬಿಕೆಯಾಗಿದೆ. ಪ್ರಸ್ತುತ ಅಧ್ಯಯನಕ್ಕೆ ಒಳಪಡಿಸಲಾದ ತ್ರಿಶೂಲಮುದ್ರೆ ಗಡಿಕಲ್ಲುಗಳನ್ನು 14-15ನೇ ಶತಮಾನದಲ್ಲಿ ಹಾಕಿರಬಹುದು ಎಂದು ಸಂಶೋಧನಾರ್ಥಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಕ್ಷೇತ್ರಕಾರ್ಯದಲ್ಲಿ ತುಳುವಿನಕೊಪ್ಪ ಗ್ರಾಮ ಪಂಚಾಯಿತಿ ಉಧ್ಯೋಗಿ ಮಹೇಶ್, ಕಲ್ಕೆರೆ ಸುಂದರರಾಜ್, ರಾಘವೇಂದ್ರ ಹಾಗೂ ಕಲ್ಕೆರೆ ಶಾಲೆಯ ವಿದ್ಯಾರ್ಥಿಗಳಾದ ಸನ್ನಿಧಿ, ವಿಕೃತ್ ಸಹಕಾರ ನೀಡಿದ್ದಾರೆ ಎಂದು ನ.ಸುರೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಯಪುರ (ಬಾಳೆಹೊನ್ನೂರು):</strong> ತುಳುವಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕೆರೆ ಪ್ರದೇಶದ ಕೆರೆಮನೆಯಲ್ಲಿ ಎರಡು ಅಪರೂಪದ ಸ್ಮಾರಕಶಿಲ್ಪಗಳು ಶಾಂತ ಶ್ರೀನಿವಾಸ ಗೌಡ ಮತ್ತು ಕೆರೆಮನೆ ಸುರೇಶ ಅವರ ಜಮೀನಿನಲ್ಲಿ ಪತ್ತೆಯಾಗಿವೆ.</p>.<p>ಶಾಂತ ಶ್ರೀನಿವಾಸ ಗೌಡ ಅವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಒಂದು ಸ್ಮಾರಕಶಿಲ್ಪವನ್ನು ಹೊರತೆಗೆದು ಅದರ ಮಾಹಿತಿಯನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ನ.ಸುರೇಶ ಕಲ್ಕೆರೆ ಅವರಿಗೆ ತಿಳಿಸಿದ್ದರು. </p>.<p>ಈ ಸಂದರ್ಭದಲ್ಲಿ ಕ್ಷೇತ್ರಕಾರ್ಯ ಶೋಧನೆಗೆ ತೆರಳಿದ ಸಂಶೋಧನಾರ್ಥಿಗೆ ಕೆರೆಮನೆ ಸುರೇಶ ಅವರ ಜಮೀನಲ್ಲೂ ಗಿಡ-ಗಂಟಿಗಳಿಂದ ಮುಚ್ಚಿ ಹೋಗಿದ್ದ ಇನ್ನೊಂದು ಸ್ಮಾರಕಶಿಲ್ಪ ಪತ್ತೆಯಾಗಿದೆ. ಅವುಗಳನ್ನು ಸ್ವಚ್ಛಗೊಳಿಸಿ, ಅಧ್ಯಯನಕ್ಕೆ ಒಳಪಡಿಸಿದಾಗ ಅವುಗಳು ಸಾಮ್ಯತೆಯನ್ನು ಹೊಂದಿರುವುದು ಗೊತ್ತಾಗಿದೆ. ಈ ಸ್ಮಾರಕಶಿಲ್ಪಗಳು ಸುಮಾರು ಎರಡು ಅಡಿ ಎತ್ತರ ಹಾಗೂ ಒಂದು ಅಡಿ ಅಗಲವಾಗಿದ್ದು, ಇವುಗಳು ಒಂದಕ್ಕೊಂದು ಸುಮಾರು 300 ಮೀಟರ್ ಅಂತರದಲ್ಲಿವೆ. ಮುಖ್ಯವಾಗಿ ಈ ಸ್ಮಾರಕಶಿಲ್ಪದ ಮಧ್ಯಭಾಗದಲ್ಲಿ ತ್ರಿಶೂಲ ಹಾಗೂ ಇಕ್ಕೆಲಗಳಲ್ಲಿ ಸೂರ್ಯ ಮತ್ತು ಚಂದ್ರರ ಕೆತ್ತನೆಯಿದ್ದು, ಬಹುತೇಕ ಕರ್ನಾಟಕದಲ್ಲಿಯೇ ಕಂಡು ಬಂದಿರುವ ಅಪರೂಪದ ತ್ರಿಶೂಲಮುದ್ರೆ ಗಡಿಕಲ್ಲುಗಳಾಗಿವೆ.</p>.<p>ಈ ಶಿಲ್ಪ ಲಕ್ಷಣದ ಹೋಲಿಕೆಯನ್ನು ಹೊಂದಿರುವ 15ನೇ ಶತಮಾನದ ದಾನ ಶಾಸನವೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಬಳ್ಪ ಪ್ರದೇಶದ ದುರ್ಗಾ ದೇವಾಲಯದ ಒಳ ಪ್ರಾಕಾರದಲ್ಲಿ ಕಂಡುಬಂದಿದೆ. ಆದರೆ, ಅದರಲ್ಲಿ ಸೂರ್ಯ ಚಂದ್ರರ ಬದಲು ಶಂಖ– ಚಕ್ರದ ಕೆತ್ತನೆ ಇದೆ.</p>.<p>ಕಲ್ಕರೆ ಪ್ರದೇಶದ ಅರಣ್ಯದಲ್ಲಿ ಕಲ್ಲಿನ ಪ್ರಾಚೀನ ತಳಪಾಯ ಕಂಡು ಬಂದಿದ್ದು, ಅದು ದೇವಿ ಸಂಬಂಧಿಸಿದ ದೇವಾಲಯದ ನೆಲಗಟ್ಟು ಎಂಬುದು ಇಂದಿಗೂ ಸ್ಥಳೀಯರ ನಂಬಿಕೆಯಾಗಿದೆ. ಪ್ರಸ್ತುತ ಅಧ್ಯಯನಕ್ಕೆ ಒಳಪಡಿಸಲಾದ ತ್ರಿಶೂಲಮುದ್ರೆ ಗಡಿಕಲ್ಲುಗಳನ್ನು 14-15ನೇ ಶತಮಾನದಲ್ಲಿ ಹಾಕಿರಬಹುದು ಎಂದು ಸಂಶೋಧನಾರ್ಥಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಕ್ಷೇತ್ರಕಾರ್ಯದಲ್ಲಿ ತುಳುವಿನಕೊಪ್ಪ ಗ್ರಾಮ ಪಂಚಾಯಿತಿ ಉಧ್ಯೋಗಿ ಮಹೇಶ್, ಕಲ್ಕೆರೆ ಸುಂದರರಾಜ್, ರಾಘವೇಂದ್ರ ಹಾಗೂ ಕಲ್ಕೆರೆ ಶಾಲೆಯ ವಿದ್ಯಾರ್ಥಿಗಳಾದ ಸನ್ನಿಧಿ, ವಿಕೃತ್ ಸಹಕಾರ ನೀಡಿದ್ದಾರೆ ಎಂದು ನ.ಸುರೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>