ಹಬ್ಬದ ಪ್ರಯುಕ್ತ ಕಡಿದಿದ್ದ ಕುರಿ ಮಾಂಸದ ಕರುಳು ತೊಳೆಯಲು ಕಟ್ಟೆಗೆ ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ.ಅಲ್ಲಿದ್ದ ಕೆಲವರು ಬಾಲಕರನ್ನು ನೀರಿನಿಂದ ಹೊರತೆಗೆದು ಸಿಂಗಟಗೆರೆ ಆಸ್ಪತ್ರೆಗೆ ಕರೆದೊಯ್ದದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.