<p><strong>ಚಿಕ್ಕಮಗಳೂರು:</strong> ತೇಗೂರು ಸಮೀಪಪದ ಅಬ್ದುಲ್ ಕಲಾಂ ವಸತಿ ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.</p>.<p>ಬೆಂಗಳೂರಿನ ತರುಣ್, ಬಾಳೆಹೊನ್ನೂರಿನ ಯಶ್ವಿನ್ ವಸತಿ ನಿಲಯದಿಂದ ಮಾ.3 ರಂದು ನಾಪತ್ತೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ನಿಂತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿಲಯ ಪಾಲಕ ಗಣೇಶ್ ಆಚಾರ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. </p>.<p>‘10 ದಿನಗಳಿಂದ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಇದಕ್ಕೆ ನಿಲಯದ ಪಾಲಕರೇ ಕಾರಣ. ಅವರ ವಿರುದ್ಧ ಕೂಡಲೇ ಕ್ರಮ ಕೈಗೊಂಡು ಮಕ್ಕಳನ್ನು ಹುಡುಕಿಕೊಡಬೇಕು’ ಎಂದು ಯಶ್ಚಿತ್ ತಂದೆ ಸತೀಶ್ ಒತ್ತಾಯಿಸಿದ್ದಾರೆ.</p>.<p>‘ಮಾ.3ರಂದು ಮಧ್ಯರಾತ್ರಿ 1.15ರ ವೇಳೆಗೆ ವಿದ್ಯಾರ್ಥಿ ನಿಲಯದಿಂದ ಹೊರ ಹೋಗಿದ್ದಾರೆ. ಮುಖ್ಯದ್ವಾರದಲ್ಲಿ ಕಾವಲುಗಾರರು ಇದ್ದರು, ಬೇರೆ ಕಡೆಯಿಂದ ಹೊರ ಹೋಗಿದ್ದಾರೆ. ಬಸ್ ನಿಲ್ದಾಣದಲ್ಲಿ 3 ಗಂಟೆ ಸುಮಾರಿಗೆ ಕಡೂರು ಕಡೆಯ ಬಸ್ ಹತ್ತಿರುವುದು ದಾಖಲಾಗಿದೆ. ಪೊಲೀಸರು ಹುಡುಕಾಡುತ್ತಿದ್ದಾರೆ. ಪ್ರಾಂಶುಪಾಲರು ಮತ್ತು ನಿಲಯ ಪಾಲಕರಿಗೆ ನೋಟಿಸ್ ನೀಡಲಾಗಿದೆ’ ಎಂದು ಗಿರಿಜನ ಕಲ್ಯಾಣಾಧಿಕಾರಿ ಭಾಗೀರತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ತೇಗೂರು ಸಮೀಪಪದ ಅಬ್ದುಲ್ ಕಲಾಂ ವಸತಿ ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.</p>.<p>ಬೆಂಗಳೂರಿನ ತರುಣ್, ಬಾಳೆಹೊನ್ನೂರಿನ ಯಶ್ವಿನ್ ವಸತಿ ನಿಲಯದಿಂದ ಮಾ.3 ರಂದು ನಾಪತ್ತೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ನಿಂತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿಲಯ ಪಾಲಕ ಗಣೇಶ್ ಆಚಾರ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. </p>.<p>‘10 ದಿನಗಳಿಂದ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಇದಕ್ಕೆ ನಿಲಯದ ಪಾಲಕರೇ ಕಾರಣ. ಅವರ ವಿರುದ್ಧ ಕೂಡಲೇ ಕ್ರಮ ಕೈಗೊಂಡು ಮಕ್ಕಳನ್ನು ಹುಡುಕಿಕೊಡಬೇಕು’ ಎಂದು ಯಶ್ಚಿತ್ ತಂದೆ ಸತೀಶ್ ಒತ್ತಾಯಿಸಿದ್ದಾರೆ.</p>.<p>‘ಮಾ.3ರಂದು ಮಧ್ಯರಾತ್ರಿ 1.15ರ ವೇಳೆಗೆ ವಿದ್ಯಾರ್ಥಿ ನಿಲಯದಿಂದ ಹೊರ ಹೋಗಿದ್ದಾರೆ. ಮುಖ್ಯದ್ವಾರದಲ್ಲಿ ಕಾವಲುಗಾರರು ಇದ್ದರು, ಬೇರೆ ಕಡೆಯಿಂದ ಹೊರ ಹೋಗಿದ್ದಾರೆ. ಬಸ್ ನಿಲ್ದಾಣದಲ್ಲಿ 3 ಗಂಟೆ ಸುಮಾರಿಗೆ ಕಡೂರು ಕಡೆಯ ಬಸ್ ಹತ್ತಿರುವುದು ದಾಖಲಾಗಿದೆ. ಪೊಲೀಸರು ಹುಡುಕಾಡುತ್ತಿದ್ದಾರೆ. ಪ್ರಾಂಶುಪಾಲರು ಮತ್ತು ನಿಲಯ ಪಾಲಕರಿಗೆ ನೋಟಿಸ್ ನೀಡಲಾಗಿದೆ’ ಎಂದು ಗಿರಿಜನ ಕಲ್ಯಾಣಾಧಿಕಾರಿ ಭಾಗೀರತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>