ಚಿಕ್ಕಮಗಳೂರು: ‘ಆರ್ಸಿಸಿ ಮನೆ, ಕಲರ್ ಟಿ.ವಿ, ಬೈಕು, ಕಾರು ಇದ್ದವರು ಬಿಪಿಎಲ್ ಕಾರ್ಡ್ ಹೊಂದುವಂತಿಲ್ಲ ಎಂದು 2016–17ನೇ ಸಾಲಿನಲ್ಲಿ ನಿಯಮಾವಳಿ ರೂಪಿಸಲಾಗಿತ್ತು. ಕಾಂಗ್ರೆಸ್ ಸರ್ಕಾರ ರೂಪಿಸಿದ್ದ ನಿಯಮಾವಳಿಯನ್ನು ಈಗಿನ ಸಚಿವ ಉಮೇಶ್ ಕತ್ತಿ ಪುನರುಚ್ಚರಿಸಿದ್ದಾರೆ. ನಿಯಮ ರೂಪಿಸಿದಾಗ ಕಾಂಗ್ರೆಸ್ನವರು ಪ್ರಜ್ಞಾವಸ್ಥೆಯಲ್ಲಿ ಇರಲಿಲ್ಲವೇ?’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.