<p><strong>ಚಿಕ್ಕಮಗಳೂರು</strong>: ಶಿಕ್ಷಣ ಕ್ಷೇತ್ರದಲ್ಲಿ ಅನುದಾನ ರಹಿತ ಶಾಲೆಗಳ ಪಾತ್ರ ದೊಡ್ಡದಿದೆ. ಈ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನಹರಿಸಿ ಶಾಲೆಗಳ ಉಳಿವಿಗೆ ಶ್ರಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದರು.</p>.<p>ನಗರದ ಸ್ಕೌಟ್ಸ್ ಭವನದಲ್ಲಿ ಜಿಲ್ಲಾ ಅನುದಾನ ರಹಿತ ಶಾಲೆಗಳ ಒಕ್ಕೂಟ ಸೋಮವಾರ ಆಯೋಜಿಸಿದ್ದ ಇಎಸ್ಐ, ಇಪಿಎಫ್ಒ ಯೋಜನೆಗಳ ಕುರಿತ ಮಾಹಿತಿ ಕಾರ್ಯಾಗಾರ ಹಾಗೂ ಅನುದಾನ ರಹಿತ ಶಾಲೆಗಳು ಎದುರಿಸುತ್ತಿರುವ ಸವಾಲುಗಳ ಕುರಿತ ಸಮಾಲೋಚನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಶೇ 60ರಷ್ಟು ವಿದ್ಯಾರ್ಥಿಗಳಿಗೆ ಶಿಕ್ಷಣ ಪೂರೈಸುತ್ತಿರುವ ಅನುದಾನ ರಹಿತ ಶಾಲೆಗಳ ಸಮಸ್ಯೆಗಳಿಗೆ ಸದಾ ಬೆನ್ನುಲುಬಾಗಿ ನಿಲ್ಲುತ್ತೇನೆ. ಯಾವುದೇ ಅಧಿಕಾರಿಗಳ ಕಿರುಕುಳ ಅಥವಾ ಶಾಲೆಗಳ ಸಮಸ್ಯೆಗಳನ್ನು ನ್ಯಾಯಬದ್ಧವಾಗಿ ಪರಿಹಾರ ಒದಗಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ವಿಧಾನ ಮಂಡಲ ಅಧಿವೇಶನ ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುದಾನ ರಹಿತ ಶಾಲೆಗಳ ಕೊರತೆ ಬಗೆಹರಿಸುತ್ತೇನೆ. ಜಿಲ್ಲೆಯಾದ್ಯಂತ ಹಲವು ಅನುದಾನಿತ ಶಾಲೆಗಳ ಸಮಸ್ಯೆಗಳನ್ನು ಡಿಡಿಪಿಐ ಹಾಗೂ ಬಿಇಒ ಸೂಕ್ತ ರೀತಿಯಲ್ಲಿ ಬಗೆಹರಿಸಬೇಕು ಎಂದು ಸೂಚಿಸಿದರು.</p>.<p>‘ಖಾಸಗಿ ಶಾಲೆಗಳು ಪ್ರತಿ ವರ್ಷ ಎದುರಿಸುತ್ತಿರುವ ಮಾನ್ಯತೆ ನವೀಕರಣ ಪ್ರಕ್ರಿಯೆಯಲ್ಲಿನ ಸಂಕೀರ್ಣತೆಗಳ ಬಗ್ಗೆ ಅರಿವಿದೆ. ಈ ನವೀಕರಣ ಪ್ರಕ್ರಿಯೆ ಸರಳಗೊಳಿಸುವ ಉದ್ದೇಶದಿಂದ ಸರ್ಕಾರ ರಚಿಸಿರುವ ವಿಶೇಷ ಶಾಸನ ಸಭೆಯ ಸಮಿತಿಯಲ್ಲಿ ನಾನೂ ಸದಸ್ಯನಾಗಿದ್ದೇನೆ. ಶಾಲೆಗಳಿಗೆ ಎದುರಾಗಿರುವ ತಾಂತ್ರಿಕ ಅಡೆತಡೆ ನಿವಾರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ರಾಜ್ಯ ಘಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾತನಾಡಿ, ಅನುದಾನ ರಹಿತ ಶಾಲೆಗಳು ಎದುರಿಸುತ್ತಿರುವ ತೆರಿಗೆ, ಆಡಳಿತಾತ್ಮಕ ಮತ್ತು ಆರ್ಥಿಕ ಸಮಸ್ಯೆಗಳನ್ನು ವಿವರಿಸಿದರು.</p>.<p>ಇಪಿಎಫ್ಒ ಅಧಿಕಾರಿ ಜಿ.ಭರತ್ ಹಾಗೂ ಇಎಸ್ಐ ಅಧಿಕಾರಿ ರೇಣುಕಾ ಅವರು ಭವಿಷ್ಯ ನಿಧಿ ಯೋಜನೆ, ನೌಕರರ ರಾಜ್ಯ ವಿಮಾ ಯೋಜನೆಗಳಿಂದ ದೊರೆಯುಬಹುದಾದ ಸೌಲಭ್ಯಗಳ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ನರೇಂದ್ರ ಪೈ ವಹಿಸಿದ್ದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ರುದ್ರಪ್ಪ, ಒಕ್ಕೂಟದ ಕಾರ್ಯದರ್ಶಿ ನಂದಕುಮಾರ್, ಖಜಾಂಚಿ ಶರದ್, ಸಹ ಕಾರ್ಯದರ್ಶಿ ಶ್ರೀನಿವಾಸ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಶಿಕ್ಷಣ ಕ್ಷೇತ್ರದಲ್ಲಿ ಅನುದಾನ ರಹಿತ ಶಾಲೆಗಳ ಪಾತ್ರ ದೊಡ್ಡದಿದೆ. ಈ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನಹರಿಸಿ ಶಾಲೆಗಳ ಉಳಿವಿಗೆ ಶ್ರಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದರು.</p>.<p>ನಗರದ ಸ್ಕೌಟ್ಸ್ ಭವನದಲ್ಲಿ ಜಿಲ್ಲಾ ಅನುದಾನ ರಹಿತ ಶಾಲೆಗಳ ಒಕ್ಕೂಟ ಸೋಮವಾರ ಆಯೋಜಿಸಿದ್ದ ಇಎಸ್ಐ, ಇಪಿಎಫ್ಒ ಯೋಜನೆಗಳ ಕುರಿತ ಮಾಹಿತಿ ಕಾರ್ಯಾಗಾರ ಹಾಗೂ ಅನುದಾನ ರಹಿತ ಶಾಲೆಗಳು ಎದುರಿಸುತ್ತಿರುವ ಸವಾಲುಗಳ ಕುರಿತ ಸಮಾಲೋಚನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಶೇ 60ರಷ್ಟು ವಿದ್ಯಾರ್ಥಿಗಳಿಗೆ ಶಿಕ್ಷಣ ಪೂರೈಸುತ್ತಿರುವ ಅನುದಾನ ರಹಿತ ಶಾಲೆಗಳ ಸಮಸ್ಯೆಗಳಿಗೆ ಸದಾ ಬೆನ್ನುಲುಬಾಗಿ ನಿಲ್ಲುತ್ತೇನೆ. ಯಾವುದೇ ಅಧಿಕಾರಿಗಳ ಕಿರುಕುಳ ಅಥವಾ ಶಾಲೆಗಳ ಸಮಸ್ಯೆಗಳನ್ನು ನ್ಯಾಯಬದ್ಧವಾಗಿ ಪರಿಹಾರ ಒದಗಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ವಿಧಾನ ಮಂಡಲ ಅಧಿವೇಶನ ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುದಾನ ರಹಿತ ಶಾಲೆಗಳ ಕೊರತೆ ಬಗೆಹರಿಸುತ್ತೇನೆ. ಜಿಲ್ಲೆಯಾದ್ಯಂತ ಹಲವು ಅನುದಾನಿತ ಶಾಲೆಗಳ ಸಮಸ್ಯೆಗಳನ್ನು ಡಿಡಿಪಿಐ ಹಾಗೂ ಬಿಇಒ ಸೂಕ್ತ ರೀತಿಯಲ್ಲಿ ಬಗೆಹರಿಸಬೇಕು ಎಂದು ಸೂಚಿಸಿದರು.</p>.<p>‘ಖಾಸಗಿ ಶಾಲೆಗಳು ಪ್ರತಿ ವರ್ಷ ಎದುರಿಸುತ್ತಿರುವ ಮಾನ್ಯತೆ ನವೀಕರಣ ಪ್ರಕ್ರಿಯೆಯಲ್ಲಿನ ಸಂಕೀರ್ಣತೆಗಳ ಬಗ್ಗೆ ಅರಿವಿದೆ. ಈ ನವೀಕರಣ ಪ್ರಕ್ರಿಯೆ ಸರಳಗೊಳಿಸುವ ಉದ್ದೇಶದಿಂದ ಸರ್ಕಾರ ರಚಿಸಿರುವ ವಿಶೇಷ ಶಾಸನ ಸಭೆಯ ಸಮಿತಿಯಲ್ಲಿ ನಾನೂ ಸದಸ್ಯನಾಗಿದ್ದೇನೆ. ಶಾಲೆಗಳಿಗೆ ಎದುರಾಗಿರುವ ತಾಂತ್ರಿಕ ಅಡೆತಡೆ ನಿವಾರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ರಾಜ್ಯ ಘಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾತನಾಡಿ, ಅನುದಾನ ರಹಿತ ಶಾಲೆಗಳು ಎದುರಿಸುತ್ತಿರುವ ತೆರಿಗೆ, ಆಡಳಿತಾತ್ಮಕ ಮತ್ತು ಆರ್ಥಿಕ ಸಮಸ್ಯೆಗಳನ್ನು ವಿವರಿಸಿದರು.</p>.<p>ಇಪಿಎಫ್ಒ ಅಧಿಕಾರಿ ಜಿ.ಭರತ್ ಹಾಗೂ ಇಎಸ್ಐ ಅಧಿಕಾರಿ ರೇಣುಕಾ ಅವರು ಭವಿಷ್ಯ ನಿಧಿ ಯೋಜನೆ, ನೌಕರರ ರಾಜ್ಯ ವಿಮಾ ಯೋಜನೆಗಳಿಂದ ದೊರೆಯುಬಹುದಾದ ಸೌಲಭ್ಯಗಳ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ನರೇಂದ್ರ ಪೈ ವಹಿಸಿದ್ದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ರುದ್ರಪ್ಪ, ಒಕ್ಕೂಟದ ಕಾರ್ಯದರ್ಶಿ ನಂದಕುಮಾರ್, ಖಜಾಂಚಿ ಶರದ್, ಸಹ ಕಾರ್ಯದರ್ಶಿ ಶ್ರೀನಿವಾಸ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>