ಕಳಸ ತಾಲ್ಲೂಕು ಕೇಂದ್ರವಾಗಿ ಘೋಷಣೆಯಾಗಿ ಎರಡು ವರ್ಷ ಕಳೆದಿದೆ. ಆದರೆ, ನಾಮಕಾವಸ್ಥೆ ತಹಶೀಲ್ದಾರ್ ಹುದ್ದೆಗೆ ನೇಮಕ ಮಾಡಿದ್ದು, ಬಿಟ್ಟರೆ ಬೇರೆ ಯಾವುದೇ ಕೆಲಸ ಆಗಿಲ್ಲ. ಕಳಸದಲ್ಲಿ ಉಪ ನೋಂದಣಾಧಿಕಾರಿ ಕಚೇರಿ ತೆರೆದಿಲ್ಲ. ಮೂಡಿಗೆರೆಯಲ್ಲೂ ಕಳಸದ ಸ್ವತ್ತುಗಳ ನೋಂದಣಿ ಆಗುತ್ತಿಲ್ಲ. ಇಂತಹ ಸಂಕಷ್ಟ ಇದ್ದರೂ ಶಾಸಕರು ಮತ್ತು ಜಿಲ್ಲಾಡಳಿತ ಮೌನವಾಗಿದ್ದು, ಜನರ ಕಷ್ಟವನ್ನು ದುಪ್ಪಟ್ಟು ಮಾಡುತ್ತಿದ್ದಾರೆ. ಕಳಸ ತಾಲ್ಲೂಕಿನ ರಸ್ತೆಗಳ ದುಃಸ್ಥಿತಿಯು ಡಬಲ್ ಎಂಜಿನ್ ಸರ್ಕಾರದ ಮೌಲ್ಯಮಾಪನ ಮಾಡುತ್ತಿದೆ. ಕಳಸ-ಬಾಳೆಹೊಳೆ, ಕಳಸ-ಕುದುರೆಮುಖ ಇಂತಹ ಪ್ರಮುಖ ರಸ್ತೆಗಳಿಗೆ ಬಂದಿರುವ ಸ್ಥಿತಿ ಆಳುವವರ ವೈಫಲ್ಯ ಎತ್ತಿ ತೋರುತ್ತಿದೆ ಎಂದು ಟೀಕಿಸಿದರು.