<p><strong>ಚಿಕ್ಕಮಗಳೂರು:</strong> ತಾಲ್ಲೂಕಿನ ಗಿರಿಶ್ರೇಣಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಉರುಸ್ ಮೆರವಣಿಗೆ ಶನಿವಾರ ನಡೆಯಿತು. </p>.<p>ಗಂಧವನ್ನು ಅತ್ತಿಗುಂಡಿಯಿಂದ ಮೆರವಣಿಗೆಯಲ್ಲಿ ಬಾಬಾಬುಡನ್ಗಿರಿಗೆ ಸಂಜೆ ತರಲಾಯಿತು. ಮೆರವಣಿಗೆಯದ್ದಕ್ಕೂ ಭಕ್ತರು ಗೀತೆಗಳನ್ನು ಹಾಡಿದರು. ವಿವಿಧೆಡೆಯ ಭಕ್ತರು, ಫಕೀರರು ಪಾಲ್ಗೊಂಡಿದ್ದರು.</p>.<p>ಗಂಧವು ದರ್ಗಾದ ಗೇಟಿನ ಮುಂಭಾಗಕ್ಕೆ ತಲುಪುತ್ತಿದ್ದಂತೆ ಭಕ್ತರು ನಾಣ್ಯಗಳನ್ನು ಚಿಮ್ಮಿ ಹರಕೆ ಸಲ್ಲಿಸಿದರು. ಧಪ್, ವಾದ್ಯಗಳ ಠೇಂಕಾರ ಮೊಳಗಿದವು.</p>.<p>ಭಕ್ತರು ದರ್ಗಾ ಗೇಟಿನ ಬಳಿ ನಿಂತು ಮೆರವಣಿಗೆಯನ್ನು ಕಣ್ತುಂಬಿಕೊಂಡರು. ಮಹಿಳೆಯರು, ಮಕ್ಕಳು, ಯುವಜನರು ಉರುಸ್ನಲ್ಲಿ ಭಾಗವಹಿಸಿದ್ದರು. ಕೆಲವರು ಚಿಣ್ಣರನ್ನು ಹೆಗಲ ಮೇಲೆ ಕೂರಿಸಿ ಮೆರವಣಿಗೆ ತೋರಿಸಿದರು. ಮೊಬೈಲ್ಫೋನ್ ಕ್ಯಾಮೆರಾಗಳಲ್ಲಿ ವಿಡಿಯೊ ಮಾಡಿಕೊಂಡರು, ಫೋಟೊ ಕ್ಲಿಕ್ಕಿಸಿಕೊಂಡರು.</p>.<p>ಪ್ರವೇಶ ದ್ವಾರದ ಗೇಟಿನ ಬಳಿ ಬ್ಯಾರಿಕೇಡ್ಗಳನ್ನು ಅಳವಡಿಸಿ ಬಂದೋಬಸ್ತ್ ಮಾಡಲಾಗಿತ್ತು. ದರ್ಗಾ ಪ್ರದೇಶ ಸಹಿತ ವಿವಿಧೆಡೆ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.</p>.<p>ದರ್ಗಾದ ಒಳಗೆ ಪೂಜೆ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನೀಡದ ಕಾರಣ ಒಳಗೆ ಹೋಗಲಿಲ್ಲ. ಈ ವೇಳೆ ಕೂಡಲಸಂಗಮದ ಸರ್ವಧರ್ಮ ಪೀಠದ ಸಂಗಮೇಶ್ವರ ಸ್ವಾಮೀಜಿ, ಹಜರತ್ ಟಿಪ್ಪು ಸುಲ್ತಾನ್ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಜಂಶಿದ್ ಖಾನ್, ಶಾಖಾದ್ರಿ ವಂಶಸ್ಥ ಅಜ್ಮತ್, ನಸೀರ್ ಅಹಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ತಾಲ್ಲೂಕಿನ ಗಿರಿಶ್ರೇಣಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಉರುಸ್ ಮೆರವಣಿಗೆ ಶನಿವಾರ ನಡೆಯಿತು. </p>.<p>ಗಂಧವನ್ನು ಅತ್ತಿಗುಂಡಿಯಿಂದ ಮೆರವಣಿಗೆಯಲ್ಲಿ ಬಾಬಾಬುಡನ್ಗಿರಿಗೆ ಸಂಜೆ ತರಲಾಯಿತು. ಮೆರವಣಿಗೆಯದ್ದಕ್ಕೂ ಭಕ್ತರು ಗೀತೆಗಳನ್ನು ಹಾಡಿದರು. ವಿವಿಧೆಡೆಯ ಭಕ್ತರು, ಫಕೀರರು ಪಾಲ್ಗೊಂಡಿದ್ದರು.</p>.<p>ಗಂಧವು ದರ್ಗಾದ ಗೇಟಿನ ಮುಂಭಾಗಕ್ಕೆ ತಲುಪುತ್ತಿದ್ದಂತೆ ಭಕ್ತರು ನಾಣ್ಯಗಳನ್ನು ಚಿಮ್ಮಿ ಹರಕೆ ಸಲ್ಲಿಸಿದರು. ಧಪ್, ವಾದ್ಯಗಳ ಠೇಂಕಾರ ಮೊಳಗಿದವು.</p>.<p>ಭಕ್ತರು ದರ್ಗಾ ಗೇಟಿನ ಬಳಿ ನಿಂತು ಮೆರವಣಿಗೆಯನ್ನು ಕಣ್ತುಂಬಿಕೊಂಡರು. ಮಹಿಳೆಯರು, ಮಕ್ಕಳು, ಯುವಜನರು ಉರುಸ್ನಲ್ಲಿ ಭಾಗವಹಿಸಿದ್ದರು. ಕೆಲವರು ಚಿಣ್ಣರನ್ನು ಹೆಗಲ ಮೇಲೆ ಕೂರಿಸಿ ಮೆರವಣಿಗೆ ತೋರಿಸಿದರು. ಮೊಬೈಲ್ಫೋನ್ ಕ್ಯಾಮೆರಾಗಳಲ್ಲಿ ವಿಡಿಯೊ ಮಾಡಿಕೊಂಡರು, ಫೋಟೊ ಕ್ಲಿಕ್ಕಿಸಿಕೊಂಡರು.</p>.<p>ಪ್ರವೇಶ ದ್ವಾರದ ಗೇಟಿನ ಬಳಿ ಬ್ಯಾರಿಕೇಡ್ಗಳನ್ನು ಅಳವಡಿಸಿ ಬಂದೋಬಸ್ತ್ ಮಾಡಲಾಗಿತ್ತು. ದರ್ಗಾ ಪ್ರದೇಶ ಸಹಿತ ವಿವಿಧೆಡೆ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.</p>.<p>ದರ್ಗಾದ ಒಳಗೆ ಪೂಜೆ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನೀಡದ ಕಾರಣ ಒಳಗೆ ಹೋಗಲಿಲ್ಲ. ಈ ವೇಳೆ ಕೂಡಲಸಂಗಮದ ಸರ್ವಧರ್ಮ ಪೀಠದ ಸಂಗಮೇಶ್ವರ ಸ್ವಾಮೀಜಿ, ಹಜರತ್ ಟಿಪ್ಪು ಸುಲ್ತಾನ್ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಜಂಶಿದ್ ಖಾನ್, ಶಾಖಾದ್ರಿ ವಂಶಸ್ಥ ಅಜ್ಮತ್, ನಸೀರ್ ಅಹಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>