ಪ್ರತಿಭಟನೆ ಬಳಿಕ ಆಜಾದ್ ಪಾರ್ಕ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ಸಾಗಿ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಎದುರು ಬ್ಯಾರಿಕೇಡ್ ಅಳವಡಿಸಿ ತಡೆಯಲು ಮುಂದಾದರು. ಮಾತಿನ ಚಕಮಕಿ ನಡೆಯಿತು. 20ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಸವನಹಳ್ಳಿ ಠಾಣೆಗೆ ಕರೆದೊಯ್ದು ಬಿಡುಗಡೆಗೊಳಿಸಿದರು.