‘ಈಶ್ವರಪ್ಪ ರಾಜೀನಾಮೆ ಪ್ರಕರಣಕ್ಕೂ ಇದಕ್ಕೂ ವ್ಯತ್ಯಾಸ ಇದೆ. ಆ ಪ್ರಕರಣದಲ್ಲಿ ಟೆಂಡರ್ ಇಲ್ಲದೆ, ಕಾರ್ಯಾದೇಶ ಇಲ್ಲದೆ ಕೆಲಸ ಮಾಡಿದ್ದ ಸಂತೋಷ್, ಬಿಲ್ ಪಾವತಿಸಲು ಕೇಳಿದ್ದರು. ನಿಯಮದಲ್ಲಿ ಅವಕಾಶ ಇಲ್ಲ ಎಂದು ಈಶ್ವರಪ್ಪ ಹೇಳಿದ್ದರು. ಆದರೂ, ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ ಜನರ ಸಂಶಯ ದೂರ ಮಾಡಲು ರಾಜೀನಾಮೆ ನೀಡಿದ್ದರು. ನಾಗೇಂದ್ರ ಅವರ ಪ್ರಕರಣದಲ್ಲಿ ನೇರವಾಗಿ ಸರ್ಕಾರದ ಹಣವನ್ನು ನಕಲಿ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಅವರ ವಿರುದ್ಧ ಇನ್ನೂ ಏಕೆ ಕೊಲೆ ಪ್ರಕರಣ ದಾಖಲಿಸಿಲ್ಲ’ ಎಂದು ಪ್ರಶ್ನಿಸಿದರು.