<p><strong>ಶೃಂಗೇರಿ:</strong> ಶೃಂಗೇರಿ ಶಾರದಾ ಪೀಠದ ಗುರುಗಳಾದ ಭಾರತೀತೀರ್ಥ ಸ್ವಾಮೀಜಿಯವರ 76ನೇ ವರ್ಧಂತಿ ಮಹೋತ್ಸವ ಮಂಗಳವಾರ ಶಾರದಾ ಪೀಠದಲ್ಲಿ ನಡೆಯಲಿದೆ.</p>.<p>ವರ್ಧಂತಿ ಪ್ರಯುಕ್ತ ಸೋಮವಾರ ಈಶ್ವರಗಿರಿಯ ಮಲಹಾನಿಕರೇಶ್ವರ ಸ್ವಾಮಿ ಮತ್ತು ಭವಾನಿ ಅಮ್ಮನವರ ದೇವಸ್ಥಾನದಲ್ಲಿ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರಭಾರತೀ ಸ್ವಾಮೀಜಿ ಅವರು ವಿಶೇಷ ಪೂಜೆ ಸಲ್ಲಿಸಿದರು.</p>.<p>ಗುರುಗಳ ವರ್ಧಂತಿಯ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಮಾ.19ರಿಂದ ಆರಂಭಗೊಂಡಿದ್ದು 30ರವರೆಗೂ ನಡೆಯಲಿದೆ. 24ರಂದು ಬೆಳಿಗ್ಗೆ 7 ಗಂಟೆಗೆ ಗುರುನಿವಾಸದಲ್ಲಿ ಗುರುಗಳ ಆಹ್ನಿಕ ದರ್ಶನ, ಮಧ್ಯಾಹ್ನ 12ಕ್ಕೆ ಶಾರದಾಂಬೆಗೆ ಭಾರತೀತೀರ್ಥ ಸ್ವಾಮೀಜಿಗಳಿಂದ ವಿಶೇಷ ಪೂಜೆ, ಮಧ್ಯಾಹ್ನ 12.30ಕ್ಕೆ ಸಹಸ್ರ ಚಂಡಿಕಾಯಾಗದ ಪೂರ್ಣಾಹುತಿ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ನಡೆಯಲಿದೆ. ಸಂಜೆ 6 ಗಂಟೆಗೆ ಗುರುನಿವಾಸದಲ್ಲಿ ಗುರುಗಳಿಗೆ ಸಾಮೂಹಿಕ ಗುರುವಂದನೆ ನಡೆಯಲಿದೆ. ಸಂಜೆ 6.30ಕ್ಕೆ ಭಾರತೀತೀರ್ಥ ಸ್ವಾಮೀಜಿಯವರು ಅನುಗ್ರಹ ಭಾಷಣ ಮಾಡಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ:</strong> ಶೃಂಗೇರಿ ಶಾರದಾ ಪೀಠದ ಗುರುಗಳಾದ ಭಾರತೀತೀರ್ಥ ಸ್ವಾಮೀಜಿಯವರ 76ನೇ ವರ್ಧಂತಿ ಮಹೋತ್ಸವ ಮಂಗಳವಾರ ಶಾರದಾ ಪೀಠದಲ್ಲಿ ನಡೆಯಲಿದೆ.</p>.<p>ವರ್ಧಂತಿ ಪ್ರಯುಕ್ತ ಸೋಮವಾರ ಈಶ್ವರಗಿರಿಯ ಮಲಹಾನಿಕರೇಶ್ವರ ಸ್ವಾಮಿ ಮತ್ತು ಭವಾನಿ ಅಮ್ಮನವರ ದೇವಸ್ಥಾನದಲ್ಲಿ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರಭಾರತೀ ಸ್ವಾಮೀಜಿ ಅವರು ವಿಶೇಷ ಪೂಜೆ ಸಲ್ಲಿಸಿದರು.</p>.<p>ಗುರುಗಳ ವರ್ಧಂತಿಯ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಮಾ.19ರಿಂದ ಆರಂಭಗೊಂಡಿದ್ದು 30ರವರೆಗೂ ನಡೆಯಲಿದೆ. 24ರಂದು ಬೆಳಿಗ್ಗೆ 7 ಗಂಟೆಗೆ ಗುರುನಿವಾಸದಲ್ಲಿ ಗುರುಗಳ ಆಹ್ನಿಕ ದರ್ಶನ, ಮಧ್ಯಾಹ್ನ 12ಕ್ಕೆ ಶಾರದಾಂಬೆಗೆ ಭಾರತೀತೀರ್ಥ ಸ್ವಾಮೀಜಿಗಳಿಂದ ವಿಶೇಷ ಪೂಜೆ, ಮಧ್ಯಾಹ್ನ 12.30ಕ್ಕೆ ಸಹಸ್ರ ಚಂಡಿಕಾಯಾಗದ ಪೂರ್ಣಾಹುತಿ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ನಡೆಯಲಿದೆ. ಸಂಜೆ 6 ಗಂಟೆಗೆ ಗುರುನಿವಾಸದಲ್ಲಿ ಗುರುಗಳಿಗೆ ಸಾಮೂಹಿಕ ಗುರುವಂದನೆ ನಡೆಯಲಿದೆ. ಸಂಜೆ 6.30ಕ್ಕೆ ಭಾರತೀತೀರ್ಥ ಸ್ವಾಮೀಜಿಯವರು ಅನುಗ್ರಹ ಭಾಷಣ ಮಾಡಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>