<p><strong>ತರೀಕೆರೆ: </strong>ಸರ್ಕಾರದ ವಸತಿ ಯೋಜನೆಯ ಭರವಸೆಯನ್ನು ನಂಬಿ ತಾಲ್ಲೂಕಿನಲ್ಲಿ ನಿರಾಶ್ರಿತ ಫಲಾನುಭವಿಗಳು ಮನೆ ಕಟ್ಟಲು ಆರಂಭಿಸಿದ್ದರು. ಆದರೆ, ಕೋವಿಡ್ ಕಾರಣದಿಂದಾಗಿ ಪರಿಹಾರಧನ ಸಿಗದೆ ಬಹುತೇಕ ಮಂದಿ, ಮನೆ ನಿರ್ಮಾಣ ಕಾರ್ಯವನ್ನು ಅರ್ಧಕ್ಕೆ ಕೈಬಿಟ್ಟಿದ್ದಾರೆ.</p>.<p>20 ವರ್ಷಗಳ ಹಿಂದೆ ಸರ್ಕಾರ ಈ ನಿರಾಶ್ರಿತರಿಗೆ ನಿವೇಶನಗಳನ್ನು ನೀಡಿತ್ತು. ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಶ್ರಯ ಮನೆಗಳನ್ನು ಕಟ್ಟಿಕೊಳ್ಳಲು ವಿವಿಧ ಯೋಜನೆಗಳನ್ನು ಪರಿಚಯಿಸಿದವಲ್ಲದೇ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ನೀಡುವ ಭರವಸೆ ನೀಡಲಾಗಿತ್ತು.</p>.<p>‘ವಾಜಪೇಯಿ ವಸತಿ ಯೋಜನೆ, ಡಾ.ಅಂಬೇಡ್ಕರ್ ವಸತಿ ಯೋಜನೆ, ಪ್ರಧಾನ ಮಂತ್ರಿ ಅವಾಜ್ ಯೋಜನೆ, ಡಿ ದೇವರಾಜ ಅರಸು ನಗರ ವಸತಿ ಯೋಜನೆ ಮೂಲಕ ಕೇಂದ್ರ ಸರ್ಕಾರ ₹ 1.5 ಲಕ್ಷ ಹಾಗೂ ರಾಜ್ಯ ಸರ್ಕಾರ 1.20 ಲಕ್ಷ ದೊರೆಯುವ ನಿರೀಕ್ಷೆಯಲ್ಲಿ ಫಲಾನುಭವಿಗಳು ಇದ್ದರು.</p>.<p>2018, 19, ಮತ್ತು 20 ಸಾಲಿನಲ್ಲಿ ಯೋಜನೆಯ ಗುರಿಯನ್ನು ಸರ್ಕಾರ ನಿಗದಿಪಡಿಸಲಿಲ್ಲ. 2016-17 ಮತ್ತು 2017-18 ನೇ ಸಾಲಿನಲ್ಲಿ ಮಾತ್ರ ಫಲಾನುಭವಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೇ ಹಿಂದುಳಿದ ವರ್ಗಗಳ ಒಟ್ಟು 600 ಮಂದಿ ಫಲಾನುಭವಿಗಳು ಯೋಜನೆಗಾಗಿ ಅರ್ಜಿಯನ್ನು ಹಾಕಿದ್ದಾರೆ.</p>.<p>ಆದರೆ, ಈವರೆಗೆ ಕೇವಲ 45 ಮಂದಿ ಫಲಾನುಭವಿಗಳು ಮಾತ್ರ ಯೋಜನೆಯ ಪೂರ್ಣ ಲಾಭವನ್ನು ಪಡೆದುಕೊಂಡಿದ್ದಾರೆ. ಉಳಿದವರು ಕಂತಿನಲ್ಲಿ ₹ 30 ಸಾವಿರದಂತೆ ಒಂದು ಅಥವಾ ಎರಡೋ ಕಂತು ಮಾತ್ರ ಪಡೆದುಕೊಂಡಿದ್ದಾರೆ.</p>.<p>ಸರ್ಕಾರಗಳ ನಿರ್ಲಕ್ಷ್ಯ ಹಾಗೂ ವಿಳಂಬ ನೀತಿಯಿಂದಾಗಿ ನಾಲ್ಕು ವರ್ಷಗಳಾದರೂ ನಮ್ಮ ಮನೆ ಕಟ್ಟುವ ಕನಸು ನನಸಾಗುತ್ತಿಲ್ಲ, ಸರ್ಕಾರ ಕೂಡಲೇ ಗಮನಹರಿಸಲಿ ಎಂದು ಫಲಾನುಭವಿಗಳು ಒತ್ತಾಯಿಸಿದ್ದಾರೆ.</p>.<p>‘ಫಲಾನುಭವಿಗಳಿಗೆ ಉಳಿಕೆ ಹಣ ನೀಡಲು ವಸತಿ ನಿಗಮದ ಮೂಲಕ ಸಾಕಷ್ಟು ಬಾರಿ ಪ್ರಸ್ತಾವ ಹೋಗಿದೆ. ರಾಜ್ಯ ಸರ್ಕಾರದಿಂದ ಕಂತಿನ ಮೂಲಕ ಹಣ ಬರುತ್ತಿದೆ. ಕೇಂದ್ರ ಸರ್ಕಾರದ ಸೌಲಭ್ಯ ಬರುವ ನಿರೀಕ್ಷೆಯಿದೆ’ ಎನ್ನುತ್ತಾರೆ ಯೋಜನೆ ಅಧಿಕಾರಿ ಪುರಸಭೆಯ ಬಿ.ಕೆ.ಉಮೇಶ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ: </strong>ಸರ್ಕಾರದ ವಸತಿ ಯೋಜನೆಯ ಭರವಸೆಯನ್ನು ನಂಬಿ ತಾಲ್ಲೂಕಿನಲ್ಲಿ ನಿರಾಶ್ರಿತ ಫಲಾನುಭವಿಗಳು ಮನೆ ಕಟ್ಟಲು ಆರಂಭಿಸಿದ್ದರು. ಆದರೆ, ಕೋವಿಡ್ ಕಾರಣದಿಂದಾಗಿ ಪರಿಹಾರಧನ ಸಿಗದೆ ಬಹುತೇಕ ಮಂದಿ, ಮನೆ ನಿರ್ಮಾಣ ಕಾರ್ಯವನ್ನು ಅರ್ಧಕ್ಕೆ ಕೈಬಿಟ್ಟಿದ್ದಾರೆ.</p>.<p>20 ವರ್ಷಗಳ ಹಿಂದೆ ಸರ್ಕಾರ ಈ ನಿರಾಶ್ರಿತರಿಗೆ ನಿವೇಶನಗಳನ್ನು ನೀಡಿತ್ತು. ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಶ್ರಯ ಮನೆಗಳನ್ನು ಕಟ್ಟಿಕೊಳ್ಳಲು ವಿವಿಧ ಯೋಜನೆಗಳನ್ನು ಪರಿಚಯಿಸಿದವಲ್ಲದೇ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ನೀಡುವ ಭರವಸೆ ನೀಡಲಾಗಿತ್ತು.</p>.<p>‘ವಾಜಪೇಯಿ ವಸತಿ ಯೋಜನೆ, ಡಾ.ಅಂಬೇಡ್ಕರ್ ವಸತಿ ಯೋಜನೆ, ಪ್ರಧಾನ ಮಂತ್ರಿ ಅವಾಜ್ ಯೋಜನೆ, ಡಿ ದೇವರಾಜ ಅರಸು ನಗರ ವಸತಿ ಯೋಜನೆ ಮೂಲಕ ಕೇಂದ್ರ ಸರ್ಕಾರ ₹ 1.5 ಲಕ್ಷ ಹಾಗೂ ರಾಜ್ಯ ಸರ್ಕಾರ 1.20 ಲಕ್ಷ ದೊರೆಯುವ ನಿರೀಕ್ಷೆಯಲ್ಲಿ ಫಲಾನುಭವಿಗಳು ಇದ್ದರು.</p>.<p>2018, 19, ಮತ್ತು 20 ಸಾಲಿನಲ್ಲಿ ಯೋಜನೆಯ ಗುರಿಯನ್ನು ಸರ್ಕಾರ ನಿಗದಿಪಡಿಸಲಿಲ್ಲ. 2016-17 ಮತ್ತು 2017-18 ನೇ ಸಾಲಿನಲ್ಲಿ ಮಾತ್ರ ಫಲಾನುಭವಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೇ ಹಿಂದುಳಿದ ವರ್ಗಗಳ ಒಟ್ಟು 600 ಮಂದಿ ಫಲಾನುಭವಿಗಳು ಯೋಜನೆಗಾಗಿ ಅರ್ಜಿಯನ್ನು ಹಾಕಿದ್ದಾರೆ.</p>.<p>ಆದರೆ, ಈವರೆಗೆ ಕೇವಲ 45 ಮಂದಿ ಫಲಾನುಭವಿಗಳು ಮಾತ್ರ ಯೋಜನೆಯ ಪೂರ್ಣ ಲಾಭವನ್ನು ಪಡೆದುಕೊಂಡಿದ್ದಾರೆ. ಉಳಿದವರು ಕಂತಿನಲ್ಲಿ ₹ 30 ಸಾವಿರದಂತೆ ಒಂದು ಅಥವಾ ಎರಡೋ ಕಂತು ಮಾತ್ರ ಪಡೆದುಕೊಂಡಿದ್ದಾರೆ.</p>.<p>ಸರ್ಕಾರಗಳ ನಿರ್ಲಕ್ಷ್ಯ ಹಾಗೂ ವಿಳಂಬ ನೀತಿಯಿಂದಾಗಿ ನಾಲ್ಕು ವರ್ಷಗಳಾದರೂ ನಮ್ಮ ಮನೆ ಕಟ್ಟುವ ಕನಸು ನನಸಾಗುತ್ತಿಲ್ಲ, ಸರ್ಕಾರ ಕೂಡಲೇ ಗಮನಹರಿಸಲಿ ಎಂದು ಫಲಾನುಭವಿಗಳು ಒತ್ತಾಯಿಸಿದ್ದಾರೆ.</p>.<p>‘ಫಲಾನುಭವಿಗಳಿಗೆ ಉಳಿಕೆ ಹಣ ನೀಡಲು ವಸತಿ ನಿಗಮದ ಮೂಲಕ ಸಾಕಷ್ಟು ಬಾರಿ ಪ್ರಸ್ತಾವ ಹೋಗಿದೆ. ರಾಜ್ಯ ಸರ್ಕಾರದಿಂದ ಕಂತಿನ ಮೂಲಕ ಹಣ ಬರುತ್ತಿದೆ. ಕೇಂದ್ರ ಸರ್ಕಾರದ ಸೌಲಭ್ಯ ಬರುವ ನಿರೀಕ್ಷೆಯಿದೆ’ ಎನ್ನುತ್ತಾರೆ ಯೋಜನೆ ಅಧಿಕಾರಿ ಪುರಸಭೆಯ ಬಿ.ಕೆ.ಉಮೇಶ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>