<p><strong>ಆಲ್ದೂರು:</strong> ಅಂಬಳೆ ಹೋಬಳಿಯ ಆರದವಳ್ಳಿ ಗ್ರಾಮದಲ್ಲಿರುವ ವಿದ್ಯಾ ಕಾಫಿ ಕ್ಯೂರಿಂಗ್ ಶಾಖಾ ಕಚೇರಿಯಲ್ಲಿ ಭಾನುವಾರ ‘ಪ್ರಜಾವಾಣಿ’ ಸಹಯೋಗದಲ್ಲಿ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.</p>.<p>ವಿದ್ಯಾ ಕಾಫಿ ಸಂಸ್ಥೆಯ ಮುಖ್ಯಸ್ಥ ಕೆ. ಶ್ಯಾಮ್ಪ್ರಸಾದ್ ಮಾತನಾಡಿ, ‘ಗುಣಮಟ್ಟದ ಕಾಫಿಯನ್ನು ಜಾಗತಿಕ ಮಾರುಕಟ್ಟೆಗೆ ಒದಗಿಸುವ ಉದ್ದೇಶದಿಂದ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಸಂಸ್ಥೆಯ ಶಾಖೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಶ್ರಮವೇ ಯಶಸ್ಸಿನ ಮೂಲವಾಗಿದ್ದು, ಗುಣಮಟ್ಟಕ್ಕೆ ಸದಾ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.</p>.<p>ಕಾಫಿ ಬ್ರಾಂಡ್ನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದ್ದು, ಕರ್ನಾಟಕದ ವಿಶ್ವಾಸಾರ್ಹ ಪತ್ರಿಕೆಗಳಾದ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಮೂಲಕ ಉತ್ಪನ್ನಗಳ ಮಾಹಿತಿಯನ್ನು ಜನರಿಗೆ ತಲುಪಿಸುವುದು ಮೊದಲ ಹೆಜ್ಜೆಯಾಗಿದೆ ಎಂದರು. ಈ ಸಂದರ್ಭ ಸಂಸ್ಥೆ ಹಾಗೂ ‘ಪ್ರಜಾವಾಣಿ’ ಪತ್ರಿಕೆಯ ಪರವಾಗಿ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ವಿತರಕ ಶ್ರೀಧರ್ ಮೋಹನ್, ವಿದ್ಯಾ ಕಾಫಿ ಕ್ಯೂರಿಂಗ್ ನಿರ್ವಹಣಾ ಮುಖ್ಯಸ್ಥ ಭಾನುಪ್ರಕಾಶ್, ಅರೆಕಾಲಿಕ ವರದಿಗಾರ ಜೋಸೆಫ್ ಎಂ. ಆಲ್ದೂರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲ್ದೂರು:</strong> ಅಂಬಳೆ ಹೋಬಳಿಯ ಆರದವಳ್ಳಿ ಗ್ರಾಮದಲ್ಲಿರುವ ವಿದ್ಯಾ ಕಾಫಿ ಕ್ಯೂರಿಂಗ್ ಶಾಖಾ ಕಚೇರಿಯಲ್ಲಿ ಭಾನುವಾರ ‘ಪ್ರಜಾವಾಣಿ’ ಸಹಯೋಗದಲ್ಲಿ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.</p>.<p>ವಿದ್ಯಾ ಕಾಫಿ ಸಂಸ್ಥೆಯ ಮುಖ್ಯಸ್ಥ ಕೆ. ಶ್ಯಾಮ್ಪ್ರಸಾದ್ ಮಾತನಾಡಿ, ‘ಗುಣಮಟ್ಟದ ಕಾಫಿಯನ್ನು ಜಾಗತಿಕ ಮಾರುಕಟ್ಟೆಗೆ ಒದಗಿಸುವ ಉದ್ದೇಶದಿಂದ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಸಂಸ್ಥೆಯ ಶಾಖೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಶ್ರಮವೇ ಯಶಸ್ಸಿನ ಮೂಲವಾಗಿದ್ದು, ಗುಣಮಟ್ಟಕ್ಕೆ ಸದಾ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.</p>.<p>ಕಾಫಿ ಬ್ರಾಂಡ್ನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದ್ದು, ಕರ್ನಾಟಕದ ವಿಶ್ವಾಸಾರ್ಹ ಪತ್ರಿಕೆಗಳಾದ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಮೂಲಕ ಉತ್ಪನ್ನಗಳ ಮಾಹಿತಿಯನ್ನು ಜನರಿಗೆ ತಲುಪಿಸುವುದು ಮೊದಲ ಹೆಜ್ಜೆಯಾಗಿದೆ ಎಂದರು. ಈ ಸಂದರ್ಭ ಸಂಸ್ಥೆ ಹಾಗೂ ‘ಪ್ರಜಾವಾಣಿ’ ಪತ್ರಿಕೆಯ ಪರವಾಗಿ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ವಿತರಕ ಶ್ರೀಧರ್ ಮೋಹನ್, ವಿದ್ಯಾ ಕಾಫಿ ಕ್ಯೂರಿಂಗ್ ನಿರ್ವಹಣಾ ಮುಖ್ಯಸ್ಥ ಭಾನುಪ್ರಕಾಶ್, ಅರೆಕಾಲಿಕ ವರದಿಗಾರ ಜೋಸೆಫ್ ಎಂ. ಆಲ್ದೂರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>