<p><strong>ಬಾಳೆಹೊನ್ನೂರು</strong>: ಇಲ್ಲಿನ ಕಲಾರಂಗ ಕ್ರೀಡಾಂಗಣದಲ್ಲಿ ವಿದ್ಯಾಗಣಪತಿ ಸೇವಾ ಸಮಿತಿ ಪ್ರತಿಷ್ಠಾಪಿಸಿದ್ದ 67ನೇ ವರ್ಷದ ವಿದ್ಯಾಗಣಪತಿ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ಜನರ ಸಂಭ್ರಮದ ನಡುವೆ ಸಂಪನ್ನಗೊಂಡಿತು.</p>.<p>ಗಣಪತಿ ವಿಸರ್ಜನೆಯ ಅಂಗವಾಗಿ ಬೆಳಿಗ್ಗೆ ಕಂಬದ ರಂಗಯ್ಯ ನೇತೃತ್ವದಲ್ಲಿ ರಸಮಂಜರಿ ಕಾರ್ಯಕ್ರಮ ನಡೆಯಿತು. ರಾಣೆಬೆನ್ನೂರಿನ ಬಸವರಾಜ್ ಬ್ರಾಸ್ ಬ್ಯಾಂಡ್ ಆರ್ಕೆಸ್ಟ್ರಾದಿಂದ ‘ಚಲಿಸುವ ಆರ್ಕೆಸ್ಟ್ರಾ’ ಇತ್ತು. ಲಾಟರಿ ಡ್ರಾ ಹಾಗೂ ಅನ್ನಸಂತರ್ಪಣೆಯೂ ಇತ್ತು.</p>.<p>ಪೂಜೆಯ ನಂತರ ಹೊರಟ ಮೆರವಣಿಗೆ ರಂಭಾಪುರಿ ಪೆಟ್ರೋಲ್ ಬಂಕ್, ಬಸ್ ನಿಲ್ದಾಣದ ಮೂಲಕ ಜೇಸಿ ವೃತ್ತ ತಲುಪಿತು. ಅಲ್ಲಿ ವಿವಿಧ ಸಂಘಟನೆಗಳಿಂದ ಅಕರ್ಷಕ ಸುಡುಮದ್ದು ಪ್ರದರ್ಶನ ರೋಮಾಂಚನ ಮೂಡಿಸಿತು. ಹಾಡಿಗೆ ಜನರು ಹೆಜ್ಜೆ ಹಾಕಿದರು.</p>.<p>ಉಡುಪಿ ಪ್ರಭು ಈವೆಂಟ್ಸ್ ತಂಡದಿಂದ ಕೀಲುಕುದುರೆ, ಕೇರಳದ ದೈವಬೊಂಬೆ, ಕೋಳಿಗಳು, ರಾಮಕೃಷ್ಣ ತಂಡದ ಹಲಗೆವಾದ್ಯ, ಸೀಗೋಡಿನ ರಮೇಶ್ ತಂಡದಿಂದ ಬ್ಯಾಂಡ್ ಸೆಟ್ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ರಾಜಬೀದಿಯಲ್ಲಿ ಸಾಗಿದಾಗ ರಸ್ತೆಯ ಎರಡೂ ಬದಿಗಳ ಕಟ್ಟಡಗಳ ಮೇಲೆ ನಿಂತವರು ಕಣ್ತುಂಬಿಕೊಂಡರು.</p>.<p>ರೋಟರಿ ವೃತ್ತದವರೆಗೆ ಸಾಗಿದ ಮೆರೆವಣಿಗೆ ಬಾಲಸುಬ್ರಮಣ್ಯ ದೇವಸ್ಥಾನದ ಬಳಿಗೆ ತೆರಳಿತು. ಗಣಪತಿಯನ್ನು ಭದ್ರಾ ನದಿಯಲ್ಲಿ ಜಲಸ್ತಂಬನಗೊಳಿಸಲಾಯಿತು. ಎಸ್ಪಿ ವಿಕ್ರಂ ಅಮಟೆ, ಎಎಸ್ಪಿ ಜಯಕುಮಾರ್, ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದಲ್ಲಿ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ನಿಯೋಜಿಸಲಾಗಿತ್ತು.</p>.<p><strong>ಟ್ರ್ಯಾಕ್ಟರ್ ಚಾಲನೆ ಮಾಡಿದ ಶಾಸಕ</strong></p>.<p>ಗಣಪತಿ ಹೊತ್ತ ಟ್ರ್ಯಾಕ್ಟರ್ ಏರಿದ ಶಾಸಕ ಟಿ.ಡಿ.ರಾಜೇಗೌಡ ಕೇಸರಿ ಶಾಲು ಹಾಕಿಕೊಂಡು ಮೈಸೂರು ಪೇಟ ಧರಿಸಿ ಕಲಾರಂಗ ಕ್ರೀಡಾಂಗಣದಲ್ಲಿ ಚಾಲನೆ ಮಾಡಿದರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ಜನರೊಂದಿಗೆ ಹೆಜ್ಜೆಹಾಕಿದರು. ಕಲ್ಮಕ್ಕಿ ಉಮೇಶ್ ಗಣಪತಿ ಮುಂದೆ 3000 ತೆಂಗಿನಕಾಯಿ ಒಡೆದರು.</p>.<p>ಆ. 27ರಂದು ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಗೆ ನಿತ್ಯ ಪೂಜೆಗಳನ್ನು ಸಲ್ಲಿಸಲಾಗಿತ್ತು. ಪ್ರತಿದಿನ ಮನರಂಜನಾ ಕಾರ್ಯಕ್ರಮಗಳಿದ್ದವು. ಸಮಾರೋಪ ಸಮಾರಂಭದಲ್ಲಿ ನೆಲಮಂಗಲ ಮೇಲಣಗವಿ ವೀರಸಿಂಹಾಸನ ಸಂಸ್ಥಾನ ಮಠ ಶಿವಗಂಗಾ ಕ್ಷೇತ್ರದ ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು</strong>: ಇಲ್ಲಿನ ಕಲಾರಂಗ ಕ್ರೀಡಾಂಗಣದಲ್ಲಿ ವಿದ್ಯಾಗಣಪತಿ ಸೇವಾ ಸಮಿತಿ ಪ್ರತಿಷ್ಠಾಪಿಸಿದ್ದ 67ನೇ ವರ್ಷದ ವಿದ್ಯಾಗಣಪತಿ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ಜನರ ಸಂಭ್ರಮದ ನಡುವೆ ಸಂಪನ್ನಗೊಂಡಿತು.</p>.<p>ಗಣಪತಿ ವಿಸರ್ಜನೆಯ ಅಂಗವಾಗಿ ಬೆಳಿಗ್ಗೆ ಕಂಬದ ರಂಗಯ್ಯ ನೇತೃತ್ವದಲ್ಲಿ ರಸಮಂಜರಿ ಕಾರ್ಯಕ್ರಮ ನಡೆಯಿತು. ರಾಣೆಬೆನ್ನೂರಿನ ಬಸವರಾಜ್ ಬ್ರಾಸ್ ಬ್ಯಾಂಡ್ ಆರ್ಕೆಸ್ಟ್ರಾದಿಂದ ‘ಚಲಿಸುವ ಆರ್ಕೆಸ್ಟ್ರಾ’ ಇತ್ತು. ಲಾಟರಿ ಡ್ರಾ ಹಾಗೂ ಅನ್ನಸಂತರ್ಪಣೆಯೂ ಇತ್ತು.</p>.<p>ಪೂಜೆಯ ನಂತರ ಹೊರಟ ಮೆರವಣಿಗೆ ರಂಭಾಪುರಿ ಪೆಟ್ರೋಲ್ ಬಂಕ್, ಬಸ್ ನಿಲ್ದಾಣದ ಮೂಲಕ ಜೇಸಿ ವೃತ್ತ ತಲುಪಿತು. ಅಲ್ಲಿ ವಿವಿಧ ಸಂಘಟನೆಗಳಿಂದ ಅಕರ್ಷಕ ಸುಡುಮದ್ದು ಪ್ರದರ್ಶನ ರೋಮಾಂಚನ ಮೂಡಿಸಿತು. ಹಾಡಿಗೆ ಜನರು ಹೆಜ್ಜೆ ಹಾಕಿದರು.</p>.<p>ಉಡುಪಿ ಪ್ರಭು ಈವೆಂಟ್ಸ್ ತಂಡದಿಂದ ಕೀಲುಕುದುರೆ, ಕೇರಳದ ದೈವಬೊಂಬೆ, ಕೋಳಿಗಳು, ರಾಮಕೃಷ್ಣ ತಂಡದ ಹಲಗೆವಾದ್ಯ, ಸೀಗೋಡಿನ ರಮೇಶ್ ತಂಡದಿಂದ ಬ್ಯಾಂಡ್ ಸೆಟ್ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ರಾಜಬೀದಿಯಲ್ಲಿ ಸಾಗಿದಾಗ ರಸ್ತೆಯ ಎರಡೂ ಬದಿಗಳ ಕಟ್ಟಡಗಳ ಮೇಲೆ ನಿಂತವರು ಕಣ್ತುಂಬಿಕೊಂಡರು.</p>.<p>ರೋಟರಿ ವೃತ್ತದವರೆಗೆ ಸಾಗಿದ ಮೆರೆವಣಿಗೆ ಬಾಲಸುಬ್ರಮಣ್ಯ ದೇವಸ್ಥಾನದ ಬಳಿಗೆ ತೆರಳಿತು. ಗಣಪತಿಯನ್ನು ಭದ್ರಾ ನದಿಯಲ್ಲಿ ಜಲಸ್ತಂಬನಗೊಳಿಸಲಾಯಿತು. ಎಸ್ಪಿ ವಿಕ್ರಂ ಅಮಟೆ, ಎಎಸ್ಪಿ ಜಯಕುಮಾರ್, ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದಲ್ಲಿ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ನಿಯೋಜಿಸಲಾಗಿತ್ತು.</p>.<p><strong>ಟ್ರ್ಯಾಕ್ಟರ್ ಚಾಲನೆ ಮಾಡಿದ ಶಾಸಕ</strong></p>.<p>ಗಣಪತಿ ಹೊತ್ತ ಟ್ರ್ಯಾಕ್ಟರ್ ಏರಿದ ಶಾಸಕ ಟಿ.ಡಿ.ರಾಜೇಗೌಡ ಕೇಸರಿ ಶಾಲು ಹಾಕಿಕೊಂಡು ಮೈಸೂರು ಪೇಟ ಧರಿಸಿ ಕಲಾರಂಗ ಕ್ರೀಡಾಂಗಣದಲ್ಲಿ ಚಾಲನೆ ಮಾಡಿದರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ಜನರೊಂದಿಗೆ ಹೆಜ್ಜೆಹಾಕಿದರು. ಕಲ್ಮಕ್ಕಿ ಉಮೇಶ್ ಗಣಪತಿ ಮುಂದೆ 3000 ತೆಂಗಿನಕಾಯಿ ಒಡೆದರು.</p>.<p>ಆ. 27ರಂದು ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಗೆ ನಿತ್ಯ ಪೂಜೆಗಳನ್ನು ಸಲ್ಲಿಸಲಾಗಿತ್ತು. ಪ್ರತಿದಿನ ಮನರಂಜನಾ ಕಾರ್ಯಕ್ರಮಗಳಿದ್ದವು. ಸಮಾರೋಪ ಸಮಾರಂಭದಲ್ಲಿ ನೆಲಮಂಗಲ ಮೇಲಣಗವಿ ವೀರಸಿಂಹಾಸನ ಸಂಸ್ಥಾನ ಮಠ ಶಿವಗಂಗಾ ಕ್ಷೇತ್ರದ ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>