<p><strong>ಬಾಳೆಹೊನ್ನೂರು:</strong> ಖಾಂಡ್ಯ ಹೋಬಳಿ ವ್ಯಾಪ್ತಿಯ ಹುಯಿಗೆರೆಯಿಂದ ಮಣಬೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಎರಡೂ ಗ್ರಾಮಗಳ ಜನರು ಸುಮಾರು ಮೂರುವರೆ ಕಿ.ಮೀ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿಸಿದ್ದಾರೆ.</p>.<p>‘ಅತಿಯಾದ ಮಳೆಯಿಂದ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ತುಂಬಿದ್ದು, ವಾಹನ ಸಂಚಾರ ಕಷ್ಟವಾಗಿತ್ತು. ಆಟೊ ಹಾಗೂ ಇತರೆ ಬಾಡಿಗೆ ವಾಹನಗಳು ಗ್ರಾಮಕ್ಕೆ ಬರಲು ಹಿಂದೇಟು ಹಾಕುತ್ತಿದ್ವು. ರಸ್ತೆ ದುರಸ್ತಿಗೆ ಗ್ರಾಮ ಪಂಚಾಯಿತಿ, ಶಾಸಕರ ಗಮನ ಸೆಳೆದರೂ ಸ್ಪಂದಿಸಿರಲಿಲ್ಲ. ಇದರಿಂದ ಬೇಸತ್ತು ಸುಮಾರು ₹1 ಲಕ್ಷಕ್ಕೂ ಅಧಿಕ ಹಣ ಒಟ್ಟುಗೂಡಿಸಿ, ಜೆಸಿಬಿ, ಟ್ರಾಕ್ಟರ್ ಬಳಸಿ ಮಣ್ಣು–ಜಲ್ಲಿ ಹಾಕಿ ರಸ್ತೆ ದುರಸ್ತಿ ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>‘ಮಳೆಗಾಲದವರೆಗೆ ರಸ್ತೆಯಲ್ಲಿ ವಾಹನಗಳು ಸರಾಗವಾಗಿ ಓಡಾಡಬಹುದು. ಮತ್ತೆ ಅದೇ ಸ್ಥಿತಿ ಉದ್ಭವಿಸಲಿದೆ. ಖಾಂಡ್ಯ ಹೋಬಳಿ ಭಾಗದಲ್ಲಿ ಪ್ರಭಾವಿ ಕಾಂಗ್ರೆಸ್ ಮುಖಂಡರು ಇಲ್ಲದ ಕಾರಣ ರಸ್ತೆಗಳಿಗೆ ಈ ದುಸ್ಥಿತಿ ಉಂಟಾಗಿದೆ. ಶಾಸಕ ಟಿ.ಡಿ.ರಾಜೇಗೌಡ ಅವರ ತವರೂರಾದ ಬಾಸಾಪುರವು ಇದೇ ಹೋಬಳಿ ವ್ಯಾಪ್ತಿಗೆ ಬರುತ್ತದೆ. ಆದರೂ ರಸ್ತೆ ಅವ್ಯವಸ್ಥೆ ಬಗ್ಗೆ ಗಮನ ಹರಿಸುತ್ತಿಲ್ಲ’ ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೊಬ್ಬರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು:</strong> ಖಾಂಡ್ಯ ಹೋಬಳಿ ವ್ಯಾಪ್ತಿಯ ಹುಯಿಗೆರೆಯಿಂದ ಮಣಬೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಎರಡೂ ಗ್ರಾಮಗಳ ಜನರು ಸುಮಾರು ಮೂರುವರೆ ಕಿ.ಮೀ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿಸಿದ್ದಾರೆ.</p>.<p>‘ಅತಿಯಾದ ಮಳೆಯಿಂದ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ತುಂಬಿದ್ದು, ವಾಹನ ಸಂಚಾರ ಕಷ್ಟವಾಗಿತ್ತು. ಆಟೊ ಹಾಗೂ ಇತರೆ ಬಾಡಿಗೆ ವಾಹನಗಳು ಗ್ರಾಮಕ್ಕೆ ಬರಲು ಹಿಂದೇಟು ಹಾಕುತ್ತಿದ್ವು. ರಸ್ತೆ ದುರಸ್ತಿಗೆ ಗ್ರಾಮ ಪಂಚಾಯಿತಿ, ಶಾಸಕರ ಗಮನ ಸೆಳೆದರೂ ಸ್ಪಂದಿಸಿರಲಿಲ್ಲ. ಇದರಿಂದ ಬೇಸತ್ತು ಸುಮಾರು ₹1 ಲಕ್ಷಕ್ಕೂ ಅಧಿಕ ಹಣ ಒಟ್ಟುಗೂಡಿಸಿ, ಜೆಸಿಬಿ, ಟ್ರಾಕ್ಟರ್ ಬಳಸಿ ಮಣ್ಣು–ಜಲ್ಲಿ ಹಾಕಿ ರಸ್ತೆ ದುರಸ್ತಿ ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>‘ಮಳೆಗಾಲದವರೆಗೆ ರಸ್ತೆಯಲ್ಲಿ ವಾಹನಗಳು ಸರಾಗವಾಗಿ ಓಡಾಡಬಹುದು. ಮತ್ತೆ ಅದೇ ಸ್ಥಿತಿ ಉದ್ಭವಿಸಲಿದೆ. ಖಾಂಡ್ಯ ಹೋಬಳಿ ಭಾಗದಲ್ಲಿ ಪ್ರಭಾವಿ ಕಾಂಗ್ರೆಸ್ ಮುಖಂಡರು ಇಲ್ಲದ ಕಾರಣ ರಸ್ತೆಗಳಿಗೆ ಈ ದುಸ್ಥಿತಿ ಉಂಟಾಗಿದೆ. ಶಾಸಕ ಟಿ.ಡಿ.ರಾಜೇಗೌಡ ಅವರ ತವರೂರಾದ ಬಾಸಾಪುರವು ಇದೇ ಹೋಬಳಿ ವ್ಯಾಪ್ತಿಗೆ ಬರುತ್ತದೆ. ಆದರೂ ರಸ್ತೆ ಅವ್ಯವಸ್ಥೆ ಬಗ್ಗೆ ಗಮನ ಹರಿಸುತ್ತಿಲ್ಲ’ ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೊಬ್ಬರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>