‘ಸರ್ವೇ ನಂ 203ರಲ್ಲಿ 5 ಗುಂಟೆ ಜಾಗವನ್ನು ಜಿಲ್ಲಾಧಿಕಾರಿ ಸ್ಮಶಾನಕ್ಕೆ ನಿಗದಿ ಮಾಡಿ ಆದೇಶಿಸಿದ್ದಾರೆ. ಸರ್ವೇ ನಂ 86ರಲ್ಲಿ ಹಿಂದೂ ರುದ್ರಭೂಮಿ ಇದೆ. ಇಷ್ಟೆಲ್ಲಾ ಇದ್ದರೂ ಅದನ್ನು ಪರಿಗಣಿಸದೆ ಜಯಪುರ ಗ್ರಾಮ ಪಂಚಾಯಿತಿಯವರು ನಮ್ಮ ಮನೆಯ ಪಕ್ಕದಲ್ಲೇ ಸ್ಮಶಾನ ನಿರ್ಮಿಸಿ ತೊಂದರೆ ನೀಡುತ್ತಿದ್ದಾರೆ.ಈ ಬಗ್ಗೆ ಸ್ಪಷ್ಟ ದಾಖಲೆಯೊಂದಿಗೆ ನ್ಯಾಯಾಲಯದ ಮೊರೆ ಹೋಗಿದ್ದೇನೆ.ಕಳೆದ 20 ವರ್ಷದಿಂದ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದೇನೆ.ಇದೆಲ್ಲ ಗೊತ್ತಿದ್ದರೂ ಪಂಚಾಯಿತಿಯವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಓಡಾಡಲು ಜಾಗ ಇಲ್ಲದಂತೆ ಎದುರು ಭಾಗದಲ್ಲಿ ಗೇಟ್ ನಿರ್ಮಿಸಿದ್ದಾರೆ.ಈ ಬಗ್ಗೆ ಪೊಲೀಸ್ ಠಾಣೆ, ಕೊಪ್ಪ ತಹಶೀಲ್ದಾರರಿಗೂ ದೂರು ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.