<p><strong>ಮುಡಿಪು</strong>: ಆಧುನಿಕ ಕಾಲಘಟ್ಟದಲ್ಲಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲಿಯೂ ಅವಕಾಶ ಪ್ರಾತಿನಿಧ್ಯ ದೊರೆತರೂ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಹೆಣ್ಮಕ್ಕಳ ಅಭಿವೃದ್ಧಿ, ಬೆಳವಣಿಗೆಯಲ್ಲಿ ಶಿಕ್ಷಣದ ಪಾತ್ರ ಮಹತ್ತರವಾದುದು ಎಂದು ಮಂಗಳೂರು ವಿವಿ ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಸಿ.ಕೆ. ಹೇಳಿದರು.</p>.<p>ಅಂತರರಾಷ್ಟ್ರೀಯ ಮಹಿಳಾ ದೌರ್ಜನ್ಯ ನಿರ್ಮೂಲನೆ ದಿನಾಚರಣೆಯ ಅಂಗವಾಗಿ ಅಸೈಗೋಳಿಯಲ್ಲಿ ಮಂಗಳೂರು ವಿವಿಯ ಮಹಿಳಾ ಅಧ್ಯಯನ ಕೇಂದ್ರ, ಲಯನ್ಸ್ ಕ್ಲಬ್ ಮಂಗಳಗಂಗೋತ್ರಿ, ಕೊಣಾಜೆ ಗ್ರಾಮ ಪಂಚಾಯತಿ, ರೋಟರಿ ಕ್ಲಬ್ ದೇರಳಕಟ್ಟೆ, ಡೀಡ್ಸ್ ಮಂಗಳೂರು ಇವರ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಏಕತಾ ಸಪ್ತಾಹ- ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಣತೆ ವಹಿಸಿ ಮಾತನಾಡಿದರು.</p>.<p>ಮಹಿಳೆಯರ ಸಮಸ್ಯೆಗಳು ಕಡಿಮೆಯಾದರೆ ಇಡೀ ಸಮಾಜದ ಸಮಸ್ಯೆಗಳು ಕಡಿಮೆಯಾದಂತೆ. ನಮ್ಮ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ಬೆಳೆಸಿಕೊಂಡು ಸಮಾನತೆಯ ಸಮಾಜವನ್ನು ಕಟ್ಟೋಣ ಎಂದರು.</p>.<p>ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ.ಅನಿತಾ ರವಿಶಂಕರ್ ಉಪನ್ಯಾಸ ನೀಡಿ, ದೇಶದ ಅಭಿವೃದ್ಧಿಯಲ್ಲಿ ಲಿಂಗತ್ಚ ಸಮಾನತೆಯು ಪ್ರಮುಖ ಪಾತ್ರವಹಿಸುತ್ತದೆ. ಲಿಂಗತ್ವ ಅಸಮಾನತೆಯಿಂದಲೇ ಇಂದು ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ಮುಂದುವರಿಯುತ್ತಿದೆ. ಮಹಿಳೆಯರ ಸಮಸ್ಯೆ ಮಹಿಳೆಯರದ್ದು ಮಾತ್ರ ಅಲ್ಲ, ಆ ಸಮಸ್ಯೆ ಇಡೀ ಸಮಾಜದ್ದಾಗಿದೆ ಎಂದರು.</p>.<p>ಕೊಣಾಜೆ ಪಂಚಾಯಿತಿ ಅಧ್ಯಕ್ಷೆ ಚಂಚಲಾಕ್ಷಿ ಮಾತನಾಡಿ, ಶಿಕ್ಷಣ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ ಹೆಚ್ಚಾತ್ತಿರುವುದು ಆತಂಕಕಾರಿ ಎಂದರು.</p>.<p>ಲಯನ್ಸ್ ಕ್ಲಬ್ ಅಧ್ಯಕ್ಷೆ ಅನುಸೂಯಾ ಆರ್. ಶೆಟ್ಟಿ, ವಿದ್ಯಾರತ್ನ ಶಾಲೆಯ ಸೌಮ್ಯಾ ಆರ್. ಶೆಟ್ಟಿ, ಕೊಣಾಜೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಯೋಗೇಶ್ವರ್ ಪಿ. ಇದ್ದರು.</p>.<p>ಪ್ರೊ.ರವಿಶಂಕರ್ ಸ್ವಾಗತಿಸಿದರು. ಲಯನ್ಸ್ ಕ್ಲಬ್ನ ಪ್ರಸಾದ್ ರೈ ಕಲ್ಲಿಮಾರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಡಿಪು</strong>: ಆಧುನಿಕ ಕಾಲಘಟ್ಟದಲ್ಲಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲಿಯೂ ಅವಕಾಶ ಪ್ರಾತಿನಿಧ್ಯ ದೊರೆತರೂ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಹೆಣ್ಮಕ್ಕಳ ಅಭಿವೃದ್ಧಿ, ಬೆಳವಣಿಗೆಯಲ್ಲಿ ಶಿಕ್ಷಣದ ಪಾತ್ರ ಮಹತ್ತರವಾದುದು ಎಂದು ಮಂಗಳೂರು ವಿವಿ ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಸಿ.ಕೆ. ಹೇಳಿದರು.</p>.<p>ಅಂತರರಾಷ್ಟ್ರೀಯ ಮಹಿಳಾ ದೌರ್ಜನ್ಯ ನಿರ್ಮೂಲನೆ ದಿನಾಚರಣೆಯ ಅಂಗವಾಗಿ ಅಸೈಗೋಳಿಯಲ್ಲಿ ಮಂಗಳೂರು ವಿವಿಯ ಮಹಿಳಾ ಅಧ್ಯಯನ ಕೇಂದ್ರ, ಲಯನ್ಸ್ ಕ್ಲಬ್ ಮಂಗಳಗಂಗೋತ್ರಿ, ಕೊಣಾಜೆ ಗ್ರಾಮ ಪಂಚಾಯತಿ, ರೋಟರಿ ಕ್ಲಬ್ ದೇರಳಕಟ್ಟೆ, ಡೀಡ್ಸ್ ಮಂಗಳೂರು ಇವರ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಏಕತಾ ಸಪ್ತಾಹ- ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಣತೆ ವಹಿಸಿ ಮಾತನಾಡಿದರು.</p>.<p>ಮಹಿಳೆಯರ ಸಮಸ್ಯೆಗಳು ಕಡಿಮೆಯಾದರೆ ಇಡೀ ಸಮಾಜದ ಸಮಸ್ಯೆಗಳು ಕಡಿಮೆಯಾದಂತೆ. ನಮ್ಮ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ಬೆಳೆಸಿಕೊಂಡು ಸಮಾನತೆಯ ಸಮಾಜವನ್ನು ಕಟ್ಟೋಣ ಎಂದರು.</p>.<p>ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ.ಅನಿತಾ ರವಿಶಂಕರ್ ಉಪನ್ಯಾಸ ನೀಡಿ, ದೇಶದ ಅಭಿವೃದ್ಧಿಯಲ್ಲಿ ಲಿಂಗತ್ಚ ಸಮಾನತೆಯು ಪ್ರಮುಖ ಪಾತ್ರವಹಿಸುತ್ತದೆ. ಲಿಂಗತ್ವ ಅಸಮಾನತೆಯಿಂದಲೇ ಇಂದು ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ಮುಂದುವರಿಯುತ್ತಿದೆ. ಮಹಿಳೆಯರ ಸಮಸ್ಯೆ ಮಹಿಳೆಯರದ್ದು ಮಾತ್ರ ಅಲ್ಲ, ಆ ಸಮಸ್ಯೆ ಇಡೀ ಸಮಾಜದ್ದಾಗಿದೆ ಎಂದರು.</p>.<p>ಕೊಣಾಜೆ ಪಂಚಾಯಿತಿ ಅಧ್ಯಕ್ಷೆ ಚಂಚಲಾಕ್ಷಿ ಮಾತನಾಡಿ, ಶಿಕ್ಷಣ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ ಹೆಚ್ಚಾತ್ತಿರುವುದು ಆತಂಕಕಾರಿ ಎಂದರು.</p>.<p>ಲಯನ್ಸ್ ಕ್ಲಬ್ ಅಧ್ಯಕ್ಷೆ ಅನುಸೂಯಾ ಆರ್. ಶೆಟ್ಟಿ, ವಿದ್ಯಾರತ್ನ ಶಾಲೆಯ ಸೌಮ್ಯಾ ಆರ್. ಶೆಟ್ಟಿ, ಕೊಣಾಜೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಯೋಗೇಶ್ವರ್ ಪಿ. ಇದ್ದರು.</p>.<p>ಪ್ರೊ.ರವಿಶಂಕರ್ ಸ್ವಾಗತಿಸಿದರು. ಲಯನ್ಸ್ ಕ್ಲಬ್ನ ಪ್ರಸಾದ್ ರೈ ಕಲ್ಲಿಮಾರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>