‘ರಾಜ್ಯ ಸರ್ಕಾರದ ವೈಫಲ್ಯ, ಪೊಲೀಸ್ ಇಲಾಖೆಯ ಅಸಡ್ಡೆ ಹಾಗೂ ನಿರ್ಲಕ್ಷ್ಯತೆ ಹೆಚ್ಚಾಗಿ ಕಾಣುತ್ತಿದೆ. ಹುಬ್ಬಳಿಯ ನೇಹಾ ಹಿರೇಮಠ್ ಹತ್ಯೆಯ ಬೆನ್ನಲ್ಲೇ ಹುಬ್ಬಳಿಯಲ್ಲೇ ಅಂಜಲಿಯ ಹತ್ಯೆ ಹಾಗೂ ಕೊಡಗಿನ ಸೋಮವಾರಪೇಟೆಯ 16 ವರ್ಷದ ಅಪ್ರಾಪ್ತೆ ಮೀನಾಳ ಹತ್ಯೆ ಇಡೀ ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯ ಸರ್ಕಾರ ಈ ಕೂಡಲೇ ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.