<p><strong>ಶೃಂಗೇರಿ</strong>: ‘ಕೇಂದ್ರ ಸರ್ಕಾರ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಅರಣ್ಯ ಪ್ರದೇಶ ಎಂದು ಘೋಷಿಸಲು ಕರಡು ಪ್ರತಿ ಸಿದ್ಧಪಡಿಸಿದ್ದು ಮತ್ತೆ ಮಲೆನಾಡಿಗರು ಆತಂಕಕ್ಕೆ ಸಿಲುಕಿಸಿದ್ದಾರೆ' ಎಂದು ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್ ಹೊಸಕೊಪ್ಪ ಹೇಳಿದರು. </p>.<p>ಶೃಂಗೇರಿ ಪ್ರವಾಸಿ ಮಂದಿರದಲ್ಲಿ ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ವತಿಯಿಂದ ಭಾನುವಾರ ನಡೆದ ಮುಂದಿನ ಹೋರಾಟದ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಅತಿವೃಷ್ಟಿಯಿಂದ ಆಗಿರುವ ಪ್ರಕೃತಿ ವಿಕೋಪಕ್ಕೆ ಮಲೆನಾಡಿನ ಜನರು ನೇರ ಹೊಣೆಯಲ್ಲ. ಅವರು ಬದುಕಿಗಾಗಿ ಮಾಡಿಕೊಂಡ ಒತ್ತುವರಿಯಿಂದ ಭೂಕುಸಿತ ಉಂಟಾಗಿಲ್ಲ, ಬದಲಿಗೆ ಅವೈಜ್ಞಾನಿಕವಾಗಿ ನಿರ್ಮಿಸಿದ ಹೆದ್ದಾರಿ, ಅಣೆಕಟ್ಟು, ಸೇತುವೆಗಳಿಂದ ಸಮಸ್ಯೆ ಉಂಟಾಗಿದೆ’ ಎಂದು ದೂರಿದರು. </p>.<p><br> ಕ್ಷೇತ್ರ ರೈತ ಸಂಘದ ಅಧ್ಯಕ್ಷ ನವೀನ್ ಕರುವಾನೆ ಮಾತನಾಡಿ, `ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮಲೆನಾಡಿನ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿ ಮಲೆನಾಡಿಗರಿಗೆ ನ್ಯಾಯ ದೊರಕಿಸಿ ಕೋಡಬೇಕು' ಎಂದು ಒತ್ತಾಯಿಸಿದರು.</p>.<p><br>ಸಭೆಯಲ್ಲಿ ಪದಾಧಿಕಾರಿ ಕಣದಮನೆ ಜಗದೀಶ್, ತ್ರಿಮೂರ್ತಿ, ಕಾಳ್ಯ ಸಂತೋಷ್, ಮಂಜುನಾಥ್ ಮೂಡ್ಲು, ಗುತ್ತುಳಿಕೆ ಕೇಶವ, ರಾಜ್ಕುಮಾರ್ ಹೆಗ್ಡೆ, ಅವಿನಾಶ್, ಪ್ರಶಾಂತ್ ಬಂಡ್ಲಪುರ, ಆದೇಶ, ಚೇತನ್ ಹಿಂಬ್ರವಳ್ಳಿ, ಶುಭಕೃತ್ ಹೆಗ್ಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ</strong>: ‘ಕೇಂದ್ರ ಸರ್ಕಾರ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಅರಣ್ಯ ಪ್ರದೇಶ ಎಂದು ಘೋಷಿಸಲು ಕರಡು ಪ್ರತಿ ಸಿದ್ಧಪಡಿಸಿದ್ದು ಮತ್ತೆ ಮಲೆನಾಡಿಗರು ಆತಂಕಕ್ಕೆ ಸಿಲುಕಿಸಿದ್ದಾರೆ' ಎಂದು ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್ ಹೊಸಕೊಪ್ಪ ಹೇಳಿದರು. </p>.<p>ಶೃಂಗೇರಿ ಪ್ರವಾಸಿ ಮಂದಿರದಲ್ಲಿ ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ವತಿಯಿಂದ ಭಾನುವಾರ ನಡೆದ ಮುಂದಿನ ಹೋರಾಟದ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಅತಿವೃಷ್ಟಿಯಿಂದ ಆಗಿರುವ ಪ್ರಕೃತಿ ವಿಕೋಪಕ್ಕೆ ಮಲೆನಾಡಿನ ಜನರು ನೇರ ಹೊಣೆಯಲ್ಲ. ಅವರು ಬದುಕಿಗಾಗಿ ಮಾಡಿಕೊಂಡ ಒತ್ತುವರಿಯಿಂದ ಭೂಕುಸಿತ ಉಂಟಾಗಿಲ್ಲ, ಬದಲಿಗೆ ಅವೈಜ್ಞಾನಿಕವಾಗಿ ನಿರ್ಮಿಸಿದ ಹೆದ್ದಾರಿ, ಅಣೆಕಟ್ಟು, ಸೇತುವೆಗಳಿಂದ ಸಮಸ್ಯೆ ಉಂಟಾಗಿದೆ’ ಎಂದು ದೂರಿದರು. </p>.<p><br> ಕ್ಷೇತ್ರ ರೈತ ಸಂಘದ ಅಧ್ಯಕ್ಷ ನವೀನ್ ಕರುವಾನೆ ಮಾತನಾಡಿ, `ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮಲೆನಾಡಿನ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿ ಮಲೆನಾಡಿಗರಿಗೆ ನ್ಯಾಯ ದೊರಕಿಸಿ ಕೋಡಬೇಕು' ಎಂದು ಒತ್ತಾಯಿಸಿದರು.</p>.<p><br>ಸಭೆಯಲ್ಲಿ ಪದಾಧಿಕಾರಿ ಕಣದಮನೆ ಜಗದೀಶ್, ತ್ರಿಮೂರ್ತಿ, ಕಾಳ್ಯ ಸಂತೋಷ್, ಮಂಜುನಾಥ್ ಮೂಡ್ಲು, ಗುತ್ತುಳಿಕೆ ಕೇಶವ, ರಾಜ್ಕುಮಾರ್ ಹೆಗ್ಡೆ, ಅವಿನಾಶ್, ಪ್ರಶಾಂತ್ ಬಂಡ್ಲಪುರ, ಆದೇಶ, ಚೇತನ್ ಹಿಂಬ್ರವಳ್ಳಿ, ಶುಭಕೃತ್ ಹೆಗ್ಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>