ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದ ಮನೆಗಳ ಮುಂದೆ ಮಾರ್ಕ್ ಹಾಕಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಎಲ್ಲಿ, ಯಾರ ಮನೆಗೆ ಮೊಳೆ ಹೊಡೆಯಲಾಗಿದೆ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಹೇಳಿಕೆ ಅವರ ಸ್ಥಾನ, ಘನತೆ, ಕುಟುಂಬಕ್ಕೆ ಗೌರವ ತರುವ ಸಂಗತಿಯಲ್ಲ. ಆತ್ಮವಂಚನೆಯಿಂದ ಮಾತನಾಡುವುದು ದುರದೃಷ್ಟಕರ’ ಎಂದು ಕುಟುಕಿದರು.