<p><strong>ಮೂಡಿಗೆರೆ</strong>: ವಿಷಕಾರಿ ಚುಚ್ಚುಮದ್ದು ನೀಡಿ ಪತ್ನಿಯನ್ನು ಕೊಲೆ ಮಾಡಿರುವ ಆರೋಪದಲ್ಲಿ ಲ್ಯಾಬ್ ಟೆಕ್ನೀಷಿಯನ್ ದರ್ಶನ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ತಾಲ್ಲೂಕಿನ ದೇವರುಂದ ಗ್ರಾಮದಲ್ಲಿ ಶ್ವೇತಾ(32) ಸಾವನ್ನಪ್ಪಿದ್ದು, ವಿಷಕಾರಿ ಚುಚ್ಚುಮದ್ದು ನೀಡಿ ಕೊಲೆ ಮಾಡಲಾಗಿದೆ ಎಂದು ಆಕೆಯ ಸಹೋದರ ಸುದರ್ಶನ್ ಗೋಣಿಬೀಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ದೇವರುಂದ ಗ್ರಾಮ ಬಳಿಯ ಅಕ್ಕೆರುದ್ದಿಯ ದರ್ಶನ್ ಮತ್ತು ಕಳಸ ಗ್ರಾಮದ ಖಂಡೋಜಿರಾವ್ ಎಂಬುವವರ ಪುತ್ರಿ ಶ್ವೇತಾ ವಿವಾಹ ಏಳು ವರ್ಷಗಳ ಹಿಂದೆ ನಡೆದಿತ್ತು. ಇಬ್ಬರು ಬೆಂಗಳೂರಿನಲ್ಲಿ ನೆಲೆಸಿದ್ದರು.ಈ ದಂಪತಿಗೆ ಒಬ್ಬ ಪುತ್ರನಿದ್ದು, ಇತ್ತೀಚೆಗೆ ದೇವರುಂದ ಗ್ರಾಮಕ್ಕೆ ಬಂದಿದ್ದರು.</p>.<p>ಸೋಮವಾರ ರಾತ್ರಿ ಶ್ವೇತಾ ಸಾವನ್ನಪ್ಪಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ದರ್ಶನ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಮಂಗಳವಾರ ಬೆಳಿಗ್ಗೆ ಕಳಸದಿಂದ ಬಂದ ಶ್ವೇತಾ ಅವರ ಕುಟುಂಬದವರು ಮೃತದೇಹ ಕಂಡು ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. </p>.<p><strong>ಕೊಲೆ ಆರೋಪ:</strong></p><p>‘ದರ್ಶನ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದು, ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ದರ್ಶನ್ ಅವರಿಗೆ ಬೆಂಗಳೂರಿನಲ್ಲಿ ಬೇರೊಬ್ಬ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿತ್ತು. ಈ ವಿಚಾರ ಅಕ್ಕನಿಗೂ ಗೊತ್ತಾಗಿದ್ದು, ನನಗೂ ತಿಳಿಸಿದ್ದಳು. ಬುದ್ದಿ ಹೇಳಿದ್ದರೂ ವಿವಾಹ ವಿಚ್ಛೇದನ ನೀಡುವಂತೆ ಶೇತಾಗೆ ಕಿರುಕುಳ ನೀಡುತ್ತಿದ್ದರು’ ಎಂದು ಶೇತಾ ಸಹೋದರ ಸುದರ್ಶನ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಸೋಮವಾರ ರಾತ್ರಿ ವಿಷದ ಚುಚ್ಚುಮದ್ದು ನೀಡಿ ಕೊಲೆ ಮಾಡಲಾಗಿದೆ. ಹೃದಯಾಘಾತದಿಂದ ಸತ್ತಿರುವುದಾಗಿ ನಂಬಿಸಲು ಯತ್ನಿಸಿದರು. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ವಿಷಕಾರಿ ಅಂಶ ಇರುವುದು ಪತ್ತೆಯಾಗಿದೆ’ ಎಂದು ಸುದರ್ಶನ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ</strong>: ವಿಷಕಾರಿ ಚುಚ್ಚುಮದ್ದು ನೀಡಿ ಪತ್ನಿಯನ್ನು ಕೊಲೆ ಮಾಡಿರುವ ಆರೋಪದಲ್ಲಿ ಲ್ಯಾಬ್ ಟೆಕ್ನೀಷಿಯನ್ ದರ್ಶನ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ತಾಲ್ಲೂಕಿನ ದೇವರುಂದ ಗ್ರಾಮದಲ್ಲಿ ಶ್ವೇತಾ(32) ಸಾವನ್ನಪ್ಪಿದ್ದು, ವಿಷಕಾರಿ ಚುಚ್ಚುಮದ್ದು ನೀಡಿ ಕೊಲೆ ಮಾಡಲಾಗಿದೆ ಎಂದು ಆಕೆಯ ಸಹೋದರ ಸುದರ್ಶನ್ ಗೋಣಿಬೀಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ದೇವರುಂದ ಗ್ರಾಮ ಬಳಿಯ ಅಕ್ಕೆರುದ್ದಿಯ ದರ್ಶನ್ ಮತ್ತು ಕಳಸ ಗ್ರಾಮದ ಖಂಡೋಜಿರಾವ್ ಎಂಬುವವರ ಪುತ್ರಿ ಶ್ವೇತಾ ವಿವಾಹ ಏಳು ವರ್ಷಗಳ ಹಿಂದೆ ನಡೆದಿತ್ತು. ಇಬ್ಬರು ಬೆಂಗಳೂರಿನಲ್ಲಿ ನೆಲೆಸಿದ್ದರು.ಈ ದಂಪತಿಗೆ ಒಬ್ಬ ಪುತ್ರನಿದ್ದು, ಇತ್ತೀಚೆಗೆ ದೇವರುಂದ ಗ್ರಾಮಕ್ಕೆ ಬಂದಿದ್ದರು.</p>.<p>ಸೋಮವಾರ ರಾತ್ರಿ ಶ್ವೇತಾ ಸಾವನ್ನಪ್ಪಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ದರ್ಶನ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಮಂಗಳವಾರ ಬೆಳಿಗ್ಗೆ ಕಳಸದಿಂದ ಬಂದ ಶ್ವೇತಾ ಅವರ ಕುಟುಂಬದವರು ಮೃತದೇಹ ಕಂಡು ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. </p>.<p><strong>ಕೊಲೆ ಆರೋಪ:</strong></p><p>‘ದರ್ಶನ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದು, ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ದರ್ಶನ್ ಅವರಿಗೆ ಬೆಂಗಳೂರಿನಲ್ಲಿ ಬೇರೊಬ್ಬ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿತ್ತು. ಈ ವಿಚಾರ ಅಕ್ಕನಿಗೂ ಗೊತ್ತಾಗಿದ್ದು, ನನಗೂ ತಿಳಿಸಿದ್ದಳು. ಬುದ್ದಿ ಹೇಳಿದ್ದರೂ ವಿವಾಹ ವಿಚ್ಛೇದನ ನೀಡುವಂತೆ ಶೇತಾಗೆ ಕಿರುಕುಳ ನೀಡುತ್ತಿದ್ದರು’ ಎಂದು ಶೇತಾ ಸಹೋದರ ಸುದರ್ಶನ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಸೋಮವಾರ ರಾತ್ರಿ ವಿಷದ ಚುಚ್ಚುಮದ್ದು ನೀಡಿ ಕೊಲೆ ಮಾಡಲಾಗಿದೆ. ಹೃದಯಾಘಾತದಿಂದ ಸತ್ತಿರುವುದಾಗಿ ನಂಬಿಸಲು ಯತ್ನಿಸಿದರು. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ವಿಷಕಾರಿ ಅಂಶ ಇರುವುದು ಪತ್ತೆಯಾಗಿದೆ’ ಎಂದು ಸುದರ್ಶನ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>