<p><strong>ನರಸಿಂಹರಾಜಪುರ:</strong> ತಾಲ್ಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕ್ಸೆ, ಗುಡ್ಡೆಹಳ್ಳ ಗ್ರಾಮದ ವ್ಯಾಪ್ತಿಯಲ್ಲಿ ಬೆಳೆ ಹಾನಿ ಮಾಡುತ್ತಿದ್ದ ಒಂಟಿ ಸಲಗದ ಸೆರೆ ಕಾರ್ಯಾಚರಣೆ ಭಾನುವಾರ ಆರಂಭಿಸಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ಹಾನಿ ಮಾಡುತ್ತಿದ್ದ ಒಂಟಿ ಸಲಗ ಇತ್ತೀಚೆಗೆ ವಾಹನ, ಗ್ರಾಮಸ್ಥರನ್ನೂ ಅಟ್ಟಾಡಿಸಿ ಉಪಟಳ ನೀಡುತ್ತಿತ್ತು. ಅರಣ್ಯ ಸಚಿವರನ್ನು ಭೇಟಿ ಮಾಡಿ ಸಲಗ ಸೆರೆ ಹಿಡಿಯಲು ಆದೇಶ ಮಾಡಿಸಲಾಗಿತ್ತು. ಅದರಂತೆ 6 ಆನೆಗಳನ್ನು ತರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಕೊಪ್ಪ ಅರಣ್ಯ ವಿಭಾಗದ ಡಿಎಫ್ ಶಿವಶಂಕರ್ ನೇತೃತ್ವ ವಹಿಸಿಕೊಂಡಿದ್ದಾರೆ ಎಂದರು.</p>.<p>ಅರಿವಳಿಕೆ ತಜ್ಞರು, ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ. ಒಂಟಿ ಸಲಗ ಗ್ರಾಮದ ವ್ಯಾಪ್ತಿಯ ಗುಡ್ಡದ ಮೇಲೆ ಇರುವುದರಿಂದ ಅದನ್ನು ಸಮತಟ್ಟಾದ ಪ್ರದೇಶದ ಕಡೆ ಕರೆ ತರುವ ಪ್ರಯತ್ನ ಮಾಡಲಾಗಿದೆ ಎಂದರು.</p>.<p>ಹಿಂದೆ ಎಲೆಮಡ್ಲು, ಅಂಡುವಾನೆ, ಮಡಬೂರು ಗ್ರಾಮಗಳಲ್ಲಿ ಒಂಟಿ ಸಲಗ ಸೆರೆ ಹಿಡಿಯಲಾಗಿತ್ತು. ಕೊರಲು ಕೊಪ್ಪ ಭಾಗದಲ್ಲಿ 1, ಕೊಪ್ಪ ಭಾಗದಲ್ಲಿ 2 ಹಾಗೂ ಶೃಂಗೇರಿ ಭಾಗದ 2 ಕಾಡಾನೆಗಳು ಉಪಟಳ ನೀಡುತ್ತಿದ್ದು, ಇವುಗಳನ್ನು ಕಾಡಿಗೆ ಓಡಿಸುವ ಪ್ರಯತ್ನ ಮಾಡಲಾಗಿದೆ. ಇವುಗಳ ಉಪಟಳ ಹೆಚ್ಚಾದರೆ ಮುಂದಿನ ದಿನಗಳಲ್ಲಿ ಅವುಗಳನ್ನೂ ಸೆರೆ ಹಿಡಿಯಲು ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಕಾಡಾನೆಗಳ ಉಪಟಳಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಂಬಂಧ ರೈಲ್ವೆ ಬ್ಯಾರಿಕೇಡ್ ಮತ್ತು ಟೆಂಟಕಲ್ ಬೇಲಿ ಅಳವಡಿಸುವ ಬಗ್ಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಒಪ್ಪಿಗೆ ಸಿಗಲಿದೆ ಎಂದರು.</p>.<p>ಮಳೆ ಕಡಿಮೆಯಾದ ಕೂಡಲೇ ರಸ್ತೆಯ ಗುಂಡಿ ಮುಚ್ಚಲು ಹಾಗೂ ರಸ್ತೆ ಸಂಪೂರ್ಣ ಶಿಥಿಲವಾದ ಕಡೆ ಮರುಡಾಂಬರೀಕರಣ ಮಾಡಲು ನಿರ್ಧರಿಸಲಾಗಿದೆ. ಮಳೆಗಾಲದಲ್ಲಿ 2ಬಾರಿ ವೆಟ್ ಮಿಕ್ಸ್ ಹಾಕಿ ರಸ್ತೆಯ ಗುಂಡಿಗಳನ್ನು ಮುಚ್ಚಲಾಗಿತ್ತು. ನಕ್ಸಲ್ ಪ್ಯಾಕೇಜ್ನಡಿ ₹7ಕೋಟಿ, ಅತಿವೃಷ್ಟಿ ಹಾನಿಗೆ ₹16ಕೋಟಿ, ಎಸ್ಎಚ್ಜಿಪಿಯಿಂದ ₹80ಕೋಟಿ, ಮುಖ್ಯಮಂತ್ರಿಯ ವಿಶೇಷ ಅನುದಾನದಿಂದ ₹50ಕೋಟಿ ರಸ್ತೆ ಅಭಿವೃದ್ಧಿಗೆ ಅನುದಾನ ತರಲಾಗಿದೆ. ಕೊಪ್ಪದಿಂದ ನರಸಿಂಹರಾಜಪುರ ತಾಲ್ಲೂಕಿನ ಕೊರಲುಕೊಪ್ಪ ಗ್ರಾಮವರೆಗೆ ರಸ್ತೆ ಅಭಿವೃದ್ಧಿಗೆ ₹19ಕೋಟಿ, ವಸ್ತಾರೆಯಿಂದ ಶೃಂಗೇರಿ ರಸ್ತೆ ಅಭಿವೃದ್ಧಿಗೆ ₹95ಕೋಟಿ, ಕೊಪ್ಪ ಜಯಪುರ ರಸ್ತೆಗೆ ₹18ಕೋಟಿ ಬಿಡುಗಡೆಯಾಗಿದೆ. 15 ಸೇತುವೆಗಳ ಅಭಿವೃದ್ಧಿಗೂ ಅನುದಾನ ಬಿಡುಗಡೆಯಾಗಿದ್ದು, ಮಳೆ ಕಡಿಮೆಯಾದ ಕೂಡಲೇ ಕಾಮಗಾರಿ ಆರಂಭವಾಗಲಿದೆ ಎಂದರು.</p>.<p>ಅಧಿಕಾರದಲ್ಲಿದ್ದಾಗ ಉಪಟಳ ನೀಡುತ್ತಿದ್ದ ಒಂದು ಆನೆಯನ್ನೂ ಸೆರೆಹಿಡಿಸದವರು, ಕಾಡಾನೆ ದಾಳಿಯಿಂದ ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡದವರು ಟೀಕಿಸುತ್ತಿದ್ದಾರೆ ಎಂದರು.</p>.<p>ಮುಖಂಡರಾದ ಸದಾಶಿವ, ಪ್ರಶಾಂತ್ ಶೆಟ್ಟಿ, ಜುಬೇದಾ, ಸುನಿಲ್ ಕುಮಾರ್, ನಾಗರತ್ನ, ಶಿವಣ್ಣ, ಗಾಂಧಿ ಗ್ರಾಮ ನಾಗರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ:</strong> ತಾಲ್ಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕ್ಸೆ, ಗುಡ್ಡೆಹಳ್ಳ ಗ್ರಾಮದ ವ್ಯಾಪ್ತಿಯಲ್ಲಿ ಬೆಳೆ ಹಾನಿ ಮಾಡುತ್ತಿದ್ದ ಒಂಟಿ ಸಲಗದ ಸೆರೆ ಕಾರ್ಯಾಚರಣೆ ಭಾನುವಾರ ಆರಂಭಿಸಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ಹಾನಿ ಮಾಡುತ್ತಿದ್ದ ಒಂಟಿ ಸಲಗ ಇತ್ತೀಚೆಗೆ ವಾಹನ, ಗ್ರಾಮಸ್ಥರನ್ನೂ ಅಟ್ಟಾಡಿಸಿ ಉಪಟಳ ನೀಡುತ್ತಿತ್ತು. ಅರಣ್ಯ ಸಚಿವರನ್ನು ಭೇಟಿ ಮಾಡಿ ಸಲಗ ಸೆರೆ ಹಿಡಿಯಲು ಆದೇಶ ಮಾಡಿಸಲಾಗಿತ್ತು. ಅದರಂತೆ 6 ಆನೆಗಳನ್ನು ತರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಕೊಪ್ಪ ಅರಣ್ಯ ವಿಭಾಗದ ಡಿಎಫ್ ಶಿವಶಂಕರ್ ನೇತೃತ್ವ ವಹಿಸಿಕೊಂಡಿದ್ದಾರೆ ಎಂದರು.</p>.<p>ಅರಿವಳಿಕೆ ತಜ್ಞರು, ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ. ಒಂಟಿ ಸಲಗ ಗ್ರಾಮದ ವ್ಯಾಪ್ತಿಯ ಗುಡ್ಡದ ಮೇಲೆ ಇರುವುದರಿಂದ ಅದನ್ನು ಸಮತಟ್ಟಾದ ಪ್ರದೇಶದ ಕಡೆ ಕರೆ ತರುವ ಪ್ರಯತ್ನ ಮಾಡಲಾಗಿದೆ ಎಂದರು.</p>.<p>ಹಿಂದೆ ಎಲೆಮಡ್ಲು, ಅಂಡುವಾನೆ, ಮಡಬೂರು ಗ್ರಾಮಗಳಲ್ಲಿ ಒಂಟಿ ಸಲಗ ಸೆರೆ ಹಿಡಿಯಲಾಗಿತ್ತು. ಕೊರಲು ಕೊಪ್ಪ ಭಾಗದಲ್ಲಿ 1, ಕೊಪ್ಪ ಭಾಗದಲ್ಲಿ 2 ಹಾಗೂ ಶೃಂಗೇರಿ ಭಾಗದ 2 ಕಾಡಾನೆಗಳು ಉಪಟಳ ನೀಡುತ್ತಿದ್ದು, ಇವುಗಳನ್ನು ಕಾಡಿಗೆ ಓಡಿಸುವ ಪ್ರಯತ್ನ ಮಾಡಲಾಗಿದೆ. ಇವುಗಳ ಉಪಟಳ ಹೆಚ್ಚಾದರೆ ಮುಂದಿನ ದಿನಗಳಲ್ಲಿ ಅವುಗಳನ್ನೂ ಸೆರೆ ಹಿಡಿಯಲು ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಕಾಡಾನೆಗಳ ಉಪಟಳಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಂಬಂಧ ರೈಲ್ವೆ ಬ್ಯಾರಿಕೇಡ್ ಮತ್ತು ಟೆಂಟಕಲ್ ಬೇಲಿ ಅಳವಡಿಸುವ ಬಗ್ಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಒಪ್ಪಿಗೆ ಸಿಗಲಿದೆ ಎಂದರು.</p>.<p>ಮಳೆ ಕಡಿಮೆಯಾದ ಕೂಡಲೇ ರಸ್ತೆಯ ಗುಂಡಿ ಮುಚ್ಚಲು ಹಾಗೂ ರಸ್ತೆ ಸಂಪೂರ್ಣ ಶಿಥಿಲವಾದ ಕಡೆ ಮರುಡಾಂಬರೀಕರಣ ಮಾಡಲು ನಿರ್ಧರಿಸಲಾಗಿದೆ. ಮಳೆಗಾಲದಲ್ಲಿ 2ಬಾರಿ ವೆಟ್ ಮಿಕ್ಸ್ ಹಾಕಿ ರಸ್ತೆಯ ಗುಂಡಿಗಳನ್ನು ಮುಚ್ಚಲಾಗಿತ್ತು. ನಕ್ಸಲ್ ಪ್ಯಾಕೇಜ್ನಡಿ ₹7ಕೋಟಿ, ಅತಿವೃಷ್ಟಿ ಹಾನಿಗೆ ₹16ಕೋಟಿ, ಎಸ್ಎಚ್ಜಿಪಿಯಿಂದ ₹80ಕೋಟಿ, ಮುಖ್ಯಮಂತ್ರಿಯ ವಿಶೇಷ ಅನುದಾನದಿಂದ ₹50ಕೋಟಿ ರಸ್ತೆ ಅಭಿವೃದ್ಧಿಗೆ ಅನುದಾನ ತರಲಾಗಿದೆ. ಕೊಪ್ಪದಿಂದ ನರಸಿಂಹರಾಜಪುರ ತಾಲ್ಲೂಕಿನ ಕೊರಲುಕೊಪ್ಪ ಗ್ರಾಮವರೆಗೆ ರಸ್ತೆ ಅಭಿವೃದ್ಧಿಗೆ ₹19ಕೋಟಿ, ವಸ್ತಾರೆಯಿಂದ ಶೃಂಗೇರಿ ರಸ್ತೆ ಅಭಿವೃದ್ಧಿಗೆ ₹95ಕೋಟಿ, ಕೊಪ್ಪ ಜಯಪುರ ರಸ್ತೆಗೆ ₹18ಕೋಟಿ ಬಿಡುಗಡೆಯಾಗಿದೆ. 15 ಸೇತುವೆಗಳ ಅಭಿವೃದ್ಧಿಗೂ ಅನುದಾನ ಬಿಡುಗಡೆಯಾಗಿದ್ದು, ಮಳೆ ಕಡಿಮೆಯಾದ ಕೂಡಲೇ ಕಾಮಗಾರಿ ಆರಂಭವಾಗಲಿದೆ ಎಂದರು.</p>.<p>ಅಧಿಕಾರದಲ್ಲಿದ್ದಾಗ ಉಪಟಳ ನೀಡುತ್ತಿದ್ದ ಒಂದು ಆನೆಯನ್ನೂ ಸೆರೆಹಿಡಿಸದವರು, ಕಾಡಾನೆ ದಾಳಿಯಿಂದ ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡದವರು ಟೀಕಿಸುತ್ತಿದ್ದಾರೆ ಎಂದರು.</p>.<p>ಮುಖಂಡರಾದ ಸದಾಶಿವ, ಪ್ರಶಾಂತ್ ಶೆಟ್ಟಿ, ಜುಬೇದಾ, ಸುನಿಲ್ ಕುಮಾರ್, ನಾಗರತ್ನ, ಶಿವಣ್ಣ, ಗಾಂಧಿ ಗ್ರಾಮ ನಾಗರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>