<p><strong>ಚಿಕ್ಕಮಗಳೂರು:</strong> ಜಿಲ್ಲಾ ಸಹಕಾರಿ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಸಿ.ಟಿ. ರವಿ ಮತ್ತು ಎಸ್.ಎಲ್. ಭೋಜೇಗೌಡ ಅವರಿಗೆ ಸಹಕಾರ ಕ್ಷೇತ್ರದ ಮತದಾರರು ಬೆಂಬಲ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ ಮನವಿ ಮಾಡಿದರು.</p>.<p>ಜಿಲ್ಲೆಯಲ್ಲಿ ನಡೆದ ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತರು ಜಯ ಸಾಧಿಸಿದ್ದಾರೆ. ರಾಜಕೀಯದಲ್ಲಿ ಇರುವವರು ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಜನರಿಗೆ ಹತ್ತಿರವಾಗಲು ಸಹಾಯವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಹೇಳಿದರು.</p>.<p>ಬಿಜೆಪಿಯ ಏಳು ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಕೋರ್ ಕಮಿಟಿಯ ನಿರ್ಣಯದಂತೆ ಎರಡು ಕ್ಷೇತ್ರಗಳನ್ನು ಬಿಟ್ಟು ಜೆಡಿಎಸ್ ಬಿಟ್ಟುಕೊಡಲಾಗಿದೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸೋಮಶೇಖರ್, ಈಶ್ವರಹಳ್ಳಿ ಮಹೇಶ್, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್, ಪ್ರಕೋಷ್ಠ ಸಂಚಾಲಕ ಚಮಿನ್, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲಾ ಸಹಕಾರಿ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಸಿ.ಟಿ. ರವಿ ಮತ್ತು ಎಸ್.ಎಲ್. ಭೋಜೇಗೌಡ ಅವರಿಗೆ ಸಹಕಾರ ಕ್ಷೇತ್ರದ ಮತದಾರರು ಬೆಂಬಲ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ ಮನವಿ ಮಾಡಿದರು.</p>.<p>ಜಿಲ್ಲೆಯಲ್ಲಿ ನಡೆದ ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತರು ಜಯ ಸಾಧಿಸಿದ್ದಾರೆ. ರಾಜಕೀಯದಲ್ಲಿ ಇರುವವರು ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಜನರಿಗೆ ಹತ್ತಿರವಾಗಲು ಸಹಾಯವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಹೇಳಿದರು.</p>.<p>ಬಿಜೆಪಿಯ ಏಳು ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಕೋರ್ ಕಮಿಟಿಯ ನಿರ್ಣಯದಂತೆ ಎರಡು ಕ್ಷೇತ್ರಗಳನ್ನು ಬಿಟ್ಟು ಜೆಡಿಎಸ್ ಬಿಟ್ಟುಕೊಡಲಾಗಿದೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸೋಮಶೇಖರ್, ಈಶ್ವರಹಳ್ಳಿ ಮಹೇಶ್, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್, ಪ್ರಕೋಷ್ಠ ಸಂಚಾಲಕ ಚಮಿನ್, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>