<p><strong>ಮೂಡಿಗೆರೆ (ಚಿಕ್ಕಮಗಳೂರು):</strong> ತಾಲ್ಲೂಕಿನ ಚಾರ್ಮಾಡಿ ಘಾಟಿಯ ಗಡಿ ಗ್ರಾಮವಾದ ಬಿದಿರುತಳದಲ್ಲಿ ಸೋಮವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಪ್ರದೇಶ ಅಗ್ನಿಗೆ ಆಹುತಿಯಾಗಿದೆ.</p>.<p>ರಾತ್ರಿ ಸುಮಾರು 9.45ರ ಸುಮಾರಿಗೆ ಬಿದಿರುತಳ ಗ್ರಾಮದ ಬೆಟ್ಟದ ಮೇಲೆ ಉರಿಯುತ್ತಿರುವ ದೃಶ್ಯ ಚಾರ್ಮಾಡಿಘಾಟಿ ರಸ್ತೆಗೆ ಕಂಡಿದೆ. ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲಿರುವ ಬಗ್ಗೆ ದಾರಿಹೋಕರು ಅರಣ್ಯ ಇಲಾಖೆಗೆ ಮಾಹಿತಿ ತಲುಪಿಸಿದರು.</p>.<p>ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯವರು ರಸ್ತೆಯಿಲ್ಲದ ದುರ್ಗಮ ಹಾದಿಯಲ್ಲಿ ಸುಮಾರು ಒಂದೂವರೆ ತಾಸು ನಡೆದು ಸಾಗಿ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದರು.</p>.<p>ಮಂಗಳವಾರ ಬೆಳಿಗ್ಗೆ ಕೂಡ ಘಾಟಿ ಪ್ರದೇಶದಲ್ಲಿ ಗಸ್ತು ತಿರುಗಿದ ಸಿಬ್ಬಂದಿ, ಬಿದಿರುತಳ ಸಮೀಪ ಅಲ್ಲಲ್ಲಿ ಹೊಗೆಯಾಡುತ್ತಿದ್ದ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.</p>.<p>‘ಹುಲ್ಲುಗಾವಲು ಪ್ರದೇಶದಲ್ಲಿ ಮಾತ್ರ ಬೆಂಕಿ ಕಾಣಿಸಿಕೊಂಡಿದ್ದು, ಅರಣ್ಯಕ್ಕೆ ಹಾನಿಯಾಗಿಲ್ಲ. ರಾತ್ರಿಯೇ ಸಂಪೂರ್ಣವಾಗಿ ಬೆಂಕಿ ನಂದಿಸಲಾಯಿತು. ಮಂಗಳವಾರ ಮತ್ತೆ ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗಿದ್ದು, ಬೆಂಕಿ ಕಾಣಿಸಿಲ್ಲ’ ಎಂದು ವಲಯ ಅರಣ್ಯಾಧಿಕಾರಿ ಚರಣಕುಮಾರ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ (ಚಿಕ್ಕಮಗಳೂರು):</strong> ತಾಲ್ಲೂಕಿನ ಚಾರ್ಮಾಡಿ ಘಾಟಿಯ ಗಡಿ ಗ್ರಾಮವಾದ ಬಿದಿರುತಳದಲ್ಲಿ ಸೋಮವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಪ್ರದೇಶ ಅಗ್ನಿಗೆ ಆಹುತಿಯಾಗಿದೆ.</p>.<p>ರಾತ್ರಿ ಸುಮಾರು 9.45ರ ಸುಮಾರಿಗೆ ಬಿದಿರುತಳ ಗ್ರಾಮದ ಬೆಟ್ಟದ ಮೇಲೆ ಉರಿಯುತ್ತಿರುವ ದೃಶ್ಯ ಚಾರ್ಮಾಡಿಘಾಟಿ ರಸ್ತೆಗೆ ಕಂಡಿದೆ. ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲಿರುವ ಬಗ್ಗೆ ದಾರಿಹೋಕರು ಅರಣ್ಯ ಇಲಾಖೆಗೆ ಮಾಹಿತಿ ತಲುಪಿಸಿದರು.</p>.<p>ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯವರು ರಸ್ತೆಯಿಲ್ಲದ ದುರ್ಗಮ ಹಾದಿಯಲ್ಲಿ ಸುಮಾರು ಒಂದೂವರೆ ತಾಸು ನಡೆದು ಸಾಗಿ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದರು.</p>.<p>ಮಂಗಳವಾರ ಬೆಳಿಗ್ಗೆ ಕೂಡ ಘಾಟಿ ಪ್ರದೇಶದಲ್ಲಿ ಗಸ್ತು ತಿರುಗಿದ ಸಿಬ್ಬಂದಿ, ಬಿದಿರುತಳ ಸಮೀಪ ಅಲ್ಲಲ್ಲಿ ಹೊಗೆಯಾಡುತ್ತಿದ್ದ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.</p>.<p>‘ಹುಲ್ಲುಗಾವಲು ಪ್ರದೇಶದಲ್ಲಿ ಮಾತ್ರ ಬೆಂಕಿ ಕಾಣಿಸಿಕೊಂಡಿದ್ದು, ಅರಣ್ಯಕ್ಕೆ ಹಾನಿಯಾಗಿಲ್ಲ. ರಾತ್ರಿಯೇ ಸಂಪೂರ್ಣವಾಗಿ ಬೆಂಕಿ ನಂದಿಸಲಾಯಿತು. ಮಂಗಳವಾರ ಮತ್ತೆ ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗಿದ್ದು, ಬೆಂಕಿ ಕಾಣಿಸಿಲ್ಲ’ ಎಂದು ವಲಯ ಅರಣ್ಯಾಧಿಕಾರಿ ಚರಣಕುಮಾರ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>